AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್ ಶರ್ಮಾ ಭೇಟಿ ಮಾಡಿದ ಗಣೇಶ್; ಜನಪ್ರಿಯ ಶೋಗೆ ಗೋಲ್ಡನ್ ಸ್ಟಾರ್ ಅತಿಥಿ

ಗಣೇಶ್ ಅವರು ‘ದಿ ಸ್ಟೋರಿ ಆಫ್ ರಾಯಗಢ’ ಹಾಗೂ ‘ಬಾನದಾರಿಯಲ್ಲಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರು ಕಪಿಲ್ ಶರ್ಮಾ ಅವರನ್ನು ಭೇಟಿ ಮಾಡಿದ್ದು, ‘ದಿ ಕಪಿಲ್ ಶರ್ಮಾ ಶೋ’ನ ಭಾಗವಾಗುತ್ತಿರುವಾಗಿ ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 09, 2023 | 3:25 PM

Share

ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ಕೆಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ಒಂದು ದೊಡ್ಡ ಅಪ್​ಡೇಟ್ ನೀಡಿದ್ದಾರೆ. ಬಾಲಿವುಡ್​ನ ಖ್ಯಾತ ಕಾಮಿಡಿಯಿನ್ ಕಪಿಲ್ ಶರ್ಮಾ (Kapil Sharma) ಅವರನ್ನು ಭೇಟಿ ಮಾಡಿದ್ದಾರೆ. ಈ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು ಒಂದು ದೊಡ್ಡ ಅಪ್​ಡೇಟ್ ನೀಡುವುದಾಗಿ ತಿಳಿಸಿದ್ದಾರೆ. ಅದೇನು ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

2022ರಲ್ಲಿ ರಿಲೀಸ್ ಆದ ‘ಗಾಳಿಪಟ 2’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರ ಗೆಲುವು ಕಂಡಿತು. ಅದೇ ವರ್ಷ ತೆರೆಗೆ ಬಂದ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ಪ್ರೇಕ್ಷಕರಿಗೆ ಕಾಮಿಡಿ ಇಷ್ಟ ಆಯಿತು. ಸದ್ಯ ಗಣೇಶ್ ಅವರು ‘ದಿ ಸ್ಟೋರಿ ಆಫ್ ರಾಯಗಢ’ ಹಾಗೂ ‘ಬಾನದಾರಿಯಲ್ಲಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರು ಕಪಿಲ್ ಶರ್ಮಾ ಅವರನ್ನು ಭೇಟಿ ಮಾಡಿದ್ದು, ‘ದಿ ಕಪಿಲ್ ಶರ್ಮಾ ಶೋ’ನ ಭಾಗವಾಗುತ್ತಿರುವಾಗಿ ಹೇಳಿದ್ದಾರೆ.

ಈ ಬಗ್ಗೆ ಗಣೇಶ್ ವಿಡಿಯೋ ಹಂಚಿಕೊಂಡಿದ್ದಾರೆ. ‘ಎಲ್ಲಾ ಕನಸುಗಳಿಗೆ ಅರ್ಥವಿದೆ’ ಎನ್ನುವ ವಾಕ್ಯದೊಂದಿಗೆ ವಿಡಿಯೋ ಆರಂಭ ಆಗುತ್ತದೆ. ಗಣೇಶ್ ಅವರು ಮೇಕಪ್ ಮಾಡಿಕೊಂಡು ಕಾರಿನಲ್ಲಿ ತೆರಳುತ್ತಾರೆ. ನಂತರ ಅವರು ಭೇಟಿ ಮಾಡೋದು ಕಪಿಲ್ ಶರ್ಮಾ ಅವರನ್ನು. ವಿಡಿಯೋ ಕೊನೆಯಲ್ಲಿ ‘ಎಗ್ಸೈಟಿಂಗ್ ಆಗಿರುವ ವಿಚಾರ ಶೀಘ್ರದಲ್ಲೇ ಬರಲಿದೆ’ ಎಂದು ಅವರು ಹೇಳಿಕೊಂಡಿದ್ದಾರೆ. ಈ ವಿಡಿಯೋಗೆ ಕ್ಯಾಪ್ಶನ್ ನೀಡಿರುವ ಅವರು, ‘ನನ್ನ ಫೇವರಿಟ್​ ಶೋನ ಭಾಗವಾಗುತ್ತಿರುವುದಕ್ಕೆ ಖುಷಿ ಇದೆ. ಕಪಿಲ್ ಶರ್ಮಾ ಸರ್ ಧನ್ಯವಾದ’ ಎಂದಿದ್ದಾರೆ.

View this post on Instagram

A post shared by Ganesh (@goldenstar_ganesh)

ಇದನ್ನೂ ಓದಿ: ‘ತ್ರಿಬಲ್​ ರೈಡಿಂಗ್​’ ಹೊರಟ ಗಣೇಶ್​ ಎದುರು ಆಶಿಕಾ-ಇಶಾನಾ ‘ರೇಮೊ’ ಪೈಪೋಟಿ

ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2023 (ಸಿಸಿಎಲ್​ 2023) (CCL 2023) ಫೆಬ್ರವರಿ 18ರಿಂದ ಆರಂಭಗೊಳ್ಳುತ್ತಿದೆ. ಮಾರ್ಚ್​ 19ಕ್ಕೆ ಫೈನಲ್ ನಡೆಯಲಿದೆ. ಭಾರತ ಚಿತ್ರರಂಗದ ಅನೇಕ ಕಲಾವಿದರು ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದರ ಸಲುವಾಗಿ ಅವರು ಕಪಿಲ್ ಶರ್ಮಾ ವೇದಿಕೆ ಏರುತ್ತಿರಬಹುದು ಅನ್ನೋದು ಅನೇಕರ ಊಹೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:04 pm, Thu, 9 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್