AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?

Kriti Kharbanda | Yash: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಸೂಪರ್​ ಹಿಟ್​ ಆಗಿದ್ದಕ್ಕೆ ನಟಿ ಕೃತಿ ಕರಬಂಧ ಅವರು ಯಶ್​ಗೆ ಅಭಿನಂದನೆ ತಿಳಿಸಿದ್ದಾರೆ. ಅದು ಕೂಡ ‘ಗೂಗ್ಲಿ’ ಸಿನಿಮಾದ ಶೈಲಿಯಲ್ಲಿ.

‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
ಕೃತಿ ಕರಬಂಧ, ಯಶ್
TV9 Web
| Edited By: |

Updated on: Apr 17, 2022 | 2:21 PM

Share

ಎಲ್ಲ ಭಾಷೆಯ ಚಿತ್ರರಂಗದವರೂ ಈಗ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಬಗ್ಗೆಯೇ ಮಾತನಾಡುತ್ತಿದ್ದಾರೆ. ಇಡೀ ಕನ್ನಡ ಚಿತ್ರರಂಗಕ್ಕೆ ಈ ಸಿನಿಮಾ ಹೆಮ್ಮೆ ತಂದಿದೆ. ನಿರ್ದೇಶಕ ಪ್ರಶಾಂತ್​ ನೀಲ್​, ನಿರ್ಮಾಪಕ ವಿಜಯ್​ ಕಿರಗಂದೂರು ಮತ್ತು ನಟ ಯಶ್ (Yash)​ ಅವರ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ಈ ಸಿನಿಮಾ ವಿಶ್ವಾದ್ಯಂತ ಅಬ್ಬರಿಸುತ್ತಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗಲ್ಲಾಪೆಟ್ಟಿಗೆ ಕಲೆಕ್ಷನ್​ ನೋಡಿ ಎಲ್ಲರೂ ಅಚ್ಚರಿ ಪಟ್ಟಿದ್ದಾರೆ. ಯಶ್​ ಅವರ ಸಾಧನೆಗೆ ಪರಭಾಷೆ ಮಂದಿ ಕೂಡ ಭೇಷ್​ ಎನ್ನುತ್ತಿದ್ದಾರೆ. ಅದೇ ರೀತಿ, ನಟಿ ಕೃತಿ ಕರಬಂಧ (Kriti Kharbanda) ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ಯಶ್​ ಜೊತೆ ಅವರು ಈ ಹಿಂದೆ ‘ಗೂಗ್ಲಿ’ ಸಿನಿಮಾದಲ್ಲಿ ನಟಿಸಿದ್ದರು. ಆ ಚಿತ್ರದ ಒಂದು ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕಬ್ಬಿನ ಹಾಲಿನ’ ಟ್ರೀಟ್​ ಬೇಕು ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

ಮೊದಲ ದಿನವೇ ಭಾರತೀಯ ಬಾಕ್ಸ್​ ಆಫೀಸ್​ನಲ್ಲಿ ಬರೋಬ್ಬರಿ 134.5 ಕೋಟಿ ರೂಪಾಯಿ ಗಳಿಸಿರುವುದು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಸಾಧನೆ. ಎರಡನೇ ದಿನಕ್ಕೆ ಒಟ್ಟು ಗಳಿಕೆ 240 ಕೋಟಿ ರೂಪಾಯಿ ಆಯಿತು. ಮೂರು ಮತ್ತು ನಾಲ್ಕನೇ ದಿನವೂ ಈ ಚಿತ್ರದ ನಾಗಾಲೋಟ ಮುಂದುವರಿದಿದೆ. ಈ ಬೃಹತ್​ ಗೆಲುವಿನಿಂದ ಚಿತ್ರತಂಡ ಖುಷ್​ ಆಗಿದೆ. ಇಡೀ ಟೀಮ್​ಗೆ ಕೃತಿ ಕರಬಂಧ ಕಂಗ್ರಾಜ್ಯುಲೇಷನ್​ ತಿಳಿಸಿದ್ದಾರೆ.

‘ಯಶ್​ ಇದು ಕಬ್ಬಿನ ಹಾಲು ಟ್ರೇಟ್​ ಕೊಡಿಸುವ ಸಮಯ. ಕೆಜಿಎಫ್​ 2 ಸಿನಿಮಾದ ದೊಡ್ಡ ಗೆಲುವಿಗೆ ಅಭಿನಂದನೆಗಳು’ ಎಂದು ಕೃತಿ ಕರಬಂಧ ಟ್ವೀಟ್​ ಮಾಡಿದ್ದಾರೆ. ಇದಕ್ಕೆ ಕಮೆಂಟ್​ ಮಾಡಿರುವ ಯಶ್​ ಅವರು ‘ಧನ್ಯವಾದಗಳು’ ಎಂದು ಪ್ರತಿಕ್ರಿಯಿಸಿದ್ದಾರೆ. ಈ ಟ್ವೀಟ್​ ನೋಡಿದ ಬಳಿಕ ಅಭಿಮಾನಿಗಳು ‘ಗೂಗ್ಲಿ’ ಸಿನಿಮಾವನ್ನು ನೆನಪಿಸಿಕೊಂಡಿದ್ದಾರೆ. ಆ ಸಿನಿಮಾ 2013ರಲ್ಲಿ ತೆರೆಕಂಡಿತ್ತು. ಪವನ್​ ಒಡೆಯರ್​ ಅವರು ನಿರ್ದೇಶನ ಮಾಡಿದ್ದರು.

‘ಗೂಗ್ಲಿ’ ಸಿನಿಮಾದಲ್ಲಿ ನಾಯಕ-ನಾಯಕಿ ಭೇಟಿ ಆದಾಗ ರಸ್ತೆ ಬದಿಯಲ್ಲಿ ಕಬ್ಬಿನ ಹಾಲು ಕುಡಿಯುವ ದೃಶ್ಯ ಇದೆ. ‘ಕಬ್ಬಿನ ಹಾಲು ಕಾಫಿಗಿಂತಲೂ ಹೆಚ್ಚು ಹೀಟ್​’ ಎಂದು ಕೃತಿ ಕರಬಂಧ ಡೈಲಾಗ್​ ಹೊಡೆದಾಗ, ‘ಇರಲಿ ಬಿಡಿ, ಯುವಕರು ಯಾವಾಗಲೂ ಹೀಟಲ್ಲೇ ಇರಬೇಕು’ ಅಂತ ಯಶ್​ ಹೇಳಿದ ಡೈಲಾಗ್​ ಸಖತ್​ ವೈರಲ್​ ಆಗಿತ್ತು. ಈಗ ‘ಕೆಜಿಎಫ್​ 2’ ಗೆಲುವು ಕಂಡಿರುವ ಈ ಸಂದರ್ಭದಲ್ಲಿ ಕೃತಿ ಕರಬಂಧ ಅವರು ಈ ಟ್ವೀಟ್​ ಮೂಲಕ ಆ ದೃಶ್ಯವನ್ನು ಮತ್ತೆ ನೆನಪಿಸಿದ್ದಾರೆ.

‘ಗೂಗ್ಲಿ’ ಸಿನಿಮಾ ನಿರ್ದೇಶಕ ಪವನ್​ ಒಡೆಯವರ್​ ಅವರು ಕೂಡ ‘ಕೆಜಿಎಫ್​ 2’ ತಂಡದ ಗೆಲುವಿಗೆ ಅಭಿನಂದನೆ ತಿಳಿಸಿದ್ದಾರೆ. ‘ರಾಕಿಂಗ್​ ಸ್ಟಾರ್​ ಯಶ್​. ಹೌದು, ಇಡೀ ಪ್ರಪಂಚವೇ ನಿಮ್ಮ ಟೆರಿಟರಿ. ನಿಮ್ಮ ಬಗ್ಗೆ ಹೆಮ್ಮೆ ಆಗುತ್ತದೆ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

‘ಕೆಜಿಎಫ್​ 2’ ಬ್ಲಾಕ್​ ಬಸ್ಟರ್​ ಗೆಲುವು ಕಂಡ ಬಳಿಕ ‘ಪುಷ್ಪ 2’ ಚಿತ್ರತಂಡಕ್ಕೆ ಚಿಂತೆ ಶುರು; ಏನಿದು ಟಾಕ್​?

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ