AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುನಿರೀಕ್ಷಿತ ‘ಕೊರಗಜ್ಜ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿರುವ ಗೋಪಿ ಸುಂದರ್

‘ಕೊರಗಜ್ಜ’ ಚಿತ್ರಕ್ಕೆ ಹಿನ್ನೆಲೆ ಸಂಗೀತದ ಜೊತೆಗೆ ಎಲ್ಲ ಹಾಡುಗಳನ್ನು ಗೋಪಿ ಸುಂದರ್​ ಅವರು ಹೊಸದಾಗಿ ಕಂಪೋಸ್​ ಮಾಡುತ್ತಿದ್ದಾರೆ. ಬಹುಕೋಟಿ ಬಜೆಟ್​ನಲ್ಲಿ ತ್ರಿವಿಕ್ರಮ ಸಪಲ್ಯ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಸುಧೀರ್ ಅತ್ತಾವರ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಬಹುನಿರೀಕ್ಷಿತ ‘ಕೊರಗಜ್ಜ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿರುವ ಗೋಪಿ ಸುಂದರ್
ಸುಧೀರ್ ಅತ್ತಾವರ, ಗೋಪಿ ಸುಂದರ್​
ಮದನ್​ ಕುಮಾರ್​
|

Updated on: Jan 07, 2024 | 3:06 PM

Share

ಅನೇಕ ಕಾರಣಗಳಿಂದಾಗಿ ಕೊರಗಜ್ಜ’ ಸಿನಿಮಾ (Koragajja Movie) ಕೌತುಕ ಮೂಡಿಸಿದೆ. ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಾಕಷ್ಟು ಅಡೆತಡೆಗಳು ಉಂಟಾಗಿವೆ. ಅವುಗಳನ್ನೆಲ್ಲ ನಿವಾರಿಸಿಕೊಂಡು ಚಿತ್ರತಂಡ ಮುನ್ನುಗ್ಗುತ್ತಿದೆ. ಮೊದಲು ಈ ಸಿನಿಮಾದ ಹೆಸರು ಬದಲಾಯಿತು. ಬಳಿಕ ಸಾಕಷ್ಟು ಬದಲಾವಣೆಗಳು ಆದವು. ಹಲವಾರು ಬಾರಿ ಮರು ಚಿತ್ರೀಕರಣ ಮಾಡಿದ್ದೂ ಉಂಟು! ಈಗ ಸಿನಿಮಾದ ಸಂಗೀತ ಕೂಡ ಬದಲಾಗಿದೆ. ಹೌದು, ‘ಕೊರಗಜ್ಜ’ (Koragajja) ಚಿತ್ರತಂಡಕ್ಕೆ ಸಂಗೀತ ನಿರ್ದೇಶಕರಾಗಿ ಗೋಪಿ ಸುಂದರ್​ (Gopi Sundar) ಸೇರ್ಪಡೆ ಆಗಿದ್ದಾರೆ. ಈ ಹೊಸ ಮಾಹಿತಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.

ಸುಧೀರ್ ಅತ್ತಾವರ ಅವರು ‘ಕೊರಗಜ್ಜ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸಂಗೀತದ ವಿಚಾರದಲ್ಲಿ ಈ ಸಿನಿಮಾ ತಂಡ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಚಿತ್ರಕ್ಕಾಗಿ ಈವರೆಗೆ ಸಿದ್ಧಗೊಂಡಿದ್ದ ಸಂಗೀತವನ್ನೇ ಸಂಪೂರ್ಣವಾಗಿ ಬದಲಾಯಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ದಕ್ಷಿಣ ಭಾರತದ ಖ್ಯಾತ ಮ್ಯೂಸಿಕ್​ ಡೈರೆಕ್ಟರ್​ ಗೋಪಿ ಸುಂದರ್ ಅವರ ಈಗ ‘ಕೊರಗಜ್ಜ’ ಸಿನಿಮಾಗೆ ಸಂಗೀತ ನೀಡಲಿದ್ದಾರೆ.

‘ಕೊರಗಜ್ಜ’ ಚಿತ್ರಕ್ಕೆ ಹಿನ್ನೆಲೆ ಸಂಗೀತದ ಜೊತೆಗೆ ಎಲ್ಲ ಹಾಡುಗಳನ್ನು ಗೋಪಿ ಸುಂದರ್​ ಅವರು ಹೊಸದಾಗಿ ಕಂಪೋಸ್​ ಮಾಡುತ್ತಿದ್ದಾರೆ. ಬಹುಕೋಟಿ ಬಜೆಟ್​ನಲ್ಲಿ ತ್ರಿವಿಕ್ರಮ ಸಪಲ್ಯ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ‘ತ್ರಿವಿಕ್ರಮ ಸಿನಿಮಾಸ್ ’ ಹಾಗೂ ‘ಸಕ್ಸಸ್ ಫಿಲ್ಮ್ಸ್​’ ಬ್ಯಾನರ್ ಮೂಲಕ ‘ಕೊರಗಜ್ಜ’ ಚಿತ್ರ ತಯಾರಾಗುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಲಿದ್ದು, ‘ಆರ್​ಆರ್​ಆರ್​’, ‘ಪುಷ್ಪ’ ಮುಂತಾದ ಯಶಸ್ವಿ ಸಿನಿಮಾಗಳ ತಂತ್ರಜ್ಞರು ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ: ‘ಕೊರಗಜ್ಜ’ ಸಿನಿಮಾ ಶೂಟಿಂಗ್​ಗೆ ಗೂಂಡಾಗಳ ಅಡ್ಡಿ; ಚಿತ್ರೀಕರಣ ಸ್ಥಗಿತಗೊಳಿಸಿದ ತಂಡ

ಈ ಚಿತ್ರದಲ್ಲಿ ಬಾಲಿವುಡ್​ನ ಹಿರಿಯ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವುದು ವಿಶೇಷ. ಸಂದೀಪ್ ಸೋಪರ್ಕರ್, ಗಣೇಶ್ ಆಚಾರ್ಯ, ಭವ್ಯ, ಶ್ರುತಿ ಮುಂತಾದ ಕಲಾವಿದರು ಈ ಚಿತ್ರದಲ್ಲಿದ್ದಾರೆ. ಹೊಸ ನಟಿ ಋತಿಕ ಅವರು ಕೊರಗಜ್ಜನ ತಾಯಿ ಕೊರೊಪೊಳು ಪಾತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಪರಿಚಯಗೊಳ್ಳುತ್ತಿದ್ದಾರೆ. ಅಂದಾಜು 800 ವರ್ಷಗಳ ಹಿಂದಿನ ಕಥೆ ‘ಕೊರಗಜ್ಜ’ ಸಿನಿಮಾದಲ್ಲಿ ಇರಲಿದೆ.

ಇದನ್ನೂ ಓದಿ:  ಮಂಗಳೂರು: ಕೊರಗಜ್ಜ ಕವಿತೆಗಳಲ್ಲಿನ ಆಕ್ಷೇಪಾರ್ಹ ಪದಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಮಾರ್ಚ್ ತಿಂಗಳ ಕೊನೆ ವಾರದಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂಬ ಗುರಿ ಇಟ್ಟುಕೊಂಡು ಚಿತ್ರತಂಡ ಕಾರ್ಯನಿರತವಾಗಿದೆ. ಜೀತ್ ಜೊಸ್ಸಿ ಹಾಗೂ ವಿದ್ಯಾಧರ್ ಶೆಟ್ಟಿ ಅವರು ಈ ಸಿನಿಮಾಗೆ ಸಂಕಲನ ಮಾಡುತ್ತಿದ್ದಾರೆ. ಮನೋಜ್ ಪಿಳ್ಳೈ ಮತ್ತು ಪವನ್ ವಿ. ಛಾಯಾಗ್ರಹಣ ಈ ಚಿತ್ರಕ್ಕಿದೆ. ಸುಧೀರ್ ಅತ್ತಾವರ್ ಅವರು ಕಲಾ ನಿರ್ದೇಶನ ಹಾಗೂ ಬಿಬಿನ್ ದೇವ್ ಅವರು ಸೌಂಡ್ ಡಿಸೈನಿಂಗ್ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್