ನಾಯಕಿ ಪ್ರಧಾನ ಸಿನಿಮಾ ಮಾಡ್ತಾರಾ ಪ್ರಶಾಂತ್​ ನೀಲ್​? ಇಂಥ ಗಾಸಿಪ್​ ಹರಡಲು ಕಾರಣ ಇಲ್ಲಿದೆ..

| Updated By: ಮದನ್​ ಕುಮಾರ್​

Updated on: May 29, 2022 | 11:52 AM

Prashanth Neel: ರಾಕಿ ಭಾಯ್​ ನಿಧನದ ನಂತರ ಸಲಾರ್​ನ ಆಶ್ರಯದಲ್ಲಿ ಶಾಂತಿ ಬೆಳೆಯುತ್ತಾಳೆ. ಆಕೆಯ ಆಯಾಮದಿಂದಲೂ ಪ್ರಶಾಂತ್​ ನೀಲ್​ ಒಂದು ದೊಡ್ಡ ಕಥೆಯನ್ನು ಹೇಳಬಹುದು.

ನಾಯಕಿ ಪ್ರಧಾನ ಸಿನಿಮಾ ಮಾಡ್ತಾರಾ ಪ್ರಶಾಂತ್​ ನೀಲ್​? ಇಂಥ ಗಾಸಿಪ್​ ಹರಡಲು ಕಾರಣ ಇಲ್ಲಿದೆ..
ಪ್ರಶಾಂತ್ ನೀಲ್
Follow us on

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಎಲ್ಲೆಲ್ಲೂ ಪ್ರಶಾಂತ್​ ನೀಲ್​ (Prashanth Neel) ಅವರ ಗುಣಗಾನ ಮಾಡಲಾಗುತ್ತಿದೆ. ಈ ಕನ್ನಡದ ನಿರ್ದೇಶಕನ ಪ್ರತಿಭೆ ವಿಶ್ವವ್ಯಾಪಿ ಹರಡಿದೆ. ಬೃಹತ್​ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ ಪ್ರಶಾಂತ್​ ಅವರು ಸಾಕಷ್ಟು ನಿರ್ದೇಶಕರಿಗೆ ಮಾದರಿ ಆಗಿದ್ದಾರೆ. ಅವರಿಗೆ ಕೋಟ್ಯಂತರ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಶಾಂತ್​ ನೀಲ್​ ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾಗಳ (Prashanth Neel Next Movie) ಬಗ್ಗೆ ಭಾರೀ ಕೌತುಕ ಸೃಷ್ಟಿ ಆಗಿದೆ. ಈ ನಡುವೆ ಅನೇಕ ಬಗೆಯ ಅಂತೆ-ಕಂತೆಗಳು ಕೂಡ ಕೇಳಿಬರುತ್ತಿವೆ. ಪ್ರಶಾಂತ್​ ನೀಲ್​ ಅವರು ಒಂದು ಸ್ತ್ರೀ ಪ್ರಧಾನ ಕಥೆಯುಳ್ಳ ಸಿನಿಮಾ ಮಾಡುತ್ತಾರೆ ಎಂಬ ಗಾಸಿಪ್​ ಕೂಡ ಹಬ್ಬಿದೆ. ಆದರೆ ಆ ಕುರಿತು ಯಾರಿಂದಲೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಅಷ್ಟಕ್ಕೂ ಈ ರೀತಿ ಗಾಸಿಪ್​ ಹಬ್ಬಲು ಕಾರಣ ಏನು? ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಕಥೆ! ಹೌದು, ಈ ಚಿತ್ರದ ಕಥೆಯಲ್ಲಿ ಬರುವ ಒಂದು ಚಿಕ್ಕ ಘಟನೆಯನ್ನು ಇಟ್ಟುಕೊಂಡು ಇನ್ನೊಂದು ಸಿನಿಮಾ ಮಾಡಲಾಗುತ್ತದೆ ಎಂಬ ಗಾಸಿಪ್​ ಹರಡಿದೆ.

ಗರುಡನ ಆಳ್ವಿಕೆಯಲ್ಲಿ ನರಾಚಿ ಎಂಬುದು ಅಕ್ಷರಶಃ ನರಕ ಆಗಿರುತ್ತದೆ. ನಂತರ ಆ ಜಾಗವನ್ನು ರಾಕಿ ಭಾಯ್​ ವಶ ಮಾಡಿಕೊಳ್ಳುತ್ತಾನೆ. ಗರುಡನ ನಿಧನದ ನಂತರ ರಾಕಿ ಭಾಯ್​ ಆಡಳಿತದಲ್ಲಿ ನಾರಾಚಿಯ ಸ್ವರೂಪ ಬದಲಾಗುತ್ತದೆ. ಅಲ್ಲಿ ಕೆಲಸ ಮಾಡುವವರಿಗೆ ಒಳ್ಳೆಯ ಮನೆ, ಊಟ, ಆಶ್ರಯ ಸಿಗುವ ರೀತಿಯಲ್ಲಿ ರಾಕಿ ಭಾಯ್​ ನೋಡಿಕೊಳ್ಳುತ್ತಾನೆ. ಅಲ್ಲಿ ಜನಿಸುವ ಒಂದು ಹೆಣ್ಣು ಮುಗುವಿಗೆ ಶಾಂತಿ ಎಂದು ಹೆಸರು ಇಡುತ್ತಾನೆ. ಆ ಮಗುವಿನ ಪಾತ್ರದ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರಕ್ಕೆ ವಿಲನ್​ ಆದ ಪೃಥ್ವಿರಾಜ್​; ವಿಷಯ ಲೀಕ್ ಮಾಡಿದ ಪ್ರಭಾಸ್

ಇದನ್ನೂ ಓದಿ
ಕಮಲ್​ ಹಾಸನ್ ಜೊತೆ ಪ್ರಶಾಂತ್​ ನೀಲ್​ ಸಿನಿಮಾ? ಹೈ-ವೋಲ್ಟೇಜ್​ ಕಾಂಬಿನೇಷನ್​ ಬಗ್ಗೆ ಹೊಸ ಗುಸುಗುಸು
3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ
‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ
ಪ್ರಶಾಂತ್​ ನೀಲ್​ ಕಣ್ಣು ತಪ್ಪಿಸಿ ಪ್ರಭಾಸ್​ ವಿಡಿಯೋ ಲೀಕ್​? ಸಲಾರ್​ ಸೆಟ್​​ನಲ್ಲಿ ಕಿತಾಪತಿ

ರಾಕಿ ಭಾಯ್​ ನಿಧನದ ನಂತರ ಸಲಾರ್​ನ ಆಶ್ರಯದಲ್ಲಿ ಶಾಂತಿ ಬೆಳೆಯುತ್ತಾಳೆ. ಆಕೆಯ ಆಯಾಮದಿಂದಲೂ ಒಂದು ದೊಡ್ಡ ಕಥೆಯನ್ನು ಹೇಳಬಹುದು. ಈ ರೀತಿಯ ಒಂದು ಸ್ಪಿನ್​ ಆಫ್​ ಸಿನಿಮಾವನ್ನು ಪ್ರಶಾಂತ್ ನೀಲ್​ ಮಾಡಬಹುದು ಎಂದು ಗಾಸಿಪ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಉಗ್ರಂ’ ಮತ್ತು ‘ಸಲಾರ್​’ ಕಥೆ ನಡುವೆ ಹೋಲಿಕೆ; ಎಲ್ಲ ಅನುಮಾನಗಳಿಗೆ ತೆರೆ ಎಳೆದ ಪ್ರಶಾಂತ್​ ನೀಲ್​

ಪ್ರಶಾಂತ್​ ನೀಲ್​ ಅವರು ಈಗಾಗಲೇ ‘ಸಲಾರ್​’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಬಳಿಕ ಅವರು ಜ್ಯೂ. ಎನ್​ಟಿಆರ್​ ಜೊತೆ ಒಂದು ಸಿನಿಮಾ ಮಾಡಲಿದ್ದಾರೆ. ಈ ನಡುವೆ ‘ಕೆಜಿಎಫ್​ 3’ ಸಿನಿಮಾ ಕೂಡ ಸೆಟ್ಟೇರಬೇಕಿದೆ. ಈ ಎಲ್ಲ ಪ್ರಾಜೆಕ್ಟ್​ಗಳ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Published On - 11:52 am, Sun, 29 May 22