AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಪ್ರಿಯರಿಗೆ ಬ್ಯಾಡ್​ ನ್ಯೂಸ್​: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಥಿಯೇಟರ್​ ಪ್ರವೇಶಕ್ಕೆ ಕಡಿವಾಣ

​ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು. ಈ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಅವರಿಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್​ ಇತ್ತೀಚೆಗೆ ಸಲಹೆ ನೀಡಿದ್ದರು.

ಸಿನಿಪ್ರಿಯರಿಗೆ ಬ್ಯಾಡ್​ ನ್ಯೂಸ್​: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಥಿಯೇಟರ್​ ಪ್ರವೇಶಕ್ಕೆ ಕಡಿವಾಣ
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on:Apr 02, 2021 | 6:55 PM

ಕೊರೊನಾಗೆ ತತ್ತರಿಸಿದ್ದ ಕನ್ನಡ ಚಿತ್ರರಂಗ ಈಗತಾನೇ ಸುಧಾರಿಸಿಕೊಳ್ಳುತ್ತಿದೆ. ಸ್ಟಾರ್​ ನಟರ ಚಿತ್ರಗಳು ಒಂದಾದಮೇಲೆ ಒಂದರಂತೆ ತೆರೆಗೆ ಬರುತ್ತಿದ್ದು, ಪ್ರೇಕ್ಷಕರು ಕೂಡ ಥಿಯೇಟರ್​ನತ್ತ ಮುಖ ಮಾಡುತ್ತಿದ್ದಾರೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಸಿನಿ ಪ್ರಿಯರಿಗೆ ಶಾಕ್​ ನೀಡಿದೆ. ರಾಜ್ಯದ ಕೆಲ ಜಿಲ್ಲೆಗಳ ಸಿನಿಮಾ ಹಾಲ್​ಗಳಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡುವ ಆದೇಶವನ್ನು ಸರ್ಕಾರ ಹೊರಡಿಸಿದೆ. ​ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಬೇಕು. ಈ ಮೂಲಕ ಕೊವಿಡ್​ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಅವರಿಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್​ ಇತ್ತೀಚೆಗೆ ಸಲಹೆ ನೀಡಿದ್ದರು. ಆದರೆ, ಈ ಸಲಹೆಯನ್ನು ಸರ್ಕಾರ ನಿರಕಾರಿಸಿತ್ತು. ಹೀಗಿರುವಗಾಲೇ ಈಗ ಸರ್ಕಾರ ಶೇ.50 ಆಸನ ವ್ಯವಸ್ಥೆ ನಿರ್ಧಾರ ತೆಗೆದುಕೊಂಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಈ ನಿಯಮ ಅನ್ವಯ ಆಗಲಿದೆ.

ಇತ್ತೀಚೆಗೆ ಸುದ್ದಿಗೋಷ್ಠಿ ಕರೆದಿದ್ದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಕಡ್ಡಾಯವಾಗಿ ಮಾಸ್ಕ್​ ಧರಿಸುವಂತೆ ಕೋರಿದ್ದರು. ಈ ಮಧ್ಯೆ, ಬೃಹತ್​ ಬೆಂಗಳೂರು ನಗರ ಪಾಲಿಕೆ ಬೆಂಗಳೂರಲ್ಲಿ ಚಿತ್ರಮಂದಿರದಲ್ಲಿ ಆಸನ ವ್ಯವಸ್ಥೆಯನ್ನು ಶೇ.50ಕ್ಕೆ ಇಳಿಸಬೇಕು ಎಂದು ಸರ್ಕಾರದ ಮುಂದೆ ಪ್ರಸ್ತಾವನೆ ಇರಿಸಿತ್ತು. ಆದರೆ, ಈ ಪ್ರಸ್ತಾಪವನ್ನು ಸರ್ಕಾರ ನಿರಕಾರಿಸಿತ್ತು. ಆದರೆ, ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಇದು ಸರ್ಕಾರವನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ.

ಜಿಮ್​ಗಳೂ ಬಂದ್​:

ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್​ಗಳು ಬಂದ್, 6ರಿಂದ 9ನೇ ತರಗತಿಯವರೆಗೆ ಶಾಲೆ ಬಂದ್, ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಉಳಿದಂತೆ ಇತರ ನಗರಗಳ ಪಬ್‌, ಬಾರ್‌ಗಳಲ್ಲಿ ಮಾಸ್ಕ್‌, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದು ನಿಷೇಧ ಮುಂದುವರಿಯಲಿದೆ. ಸಭೆ, ಸಮಾರಂಭ ಆಚರಣೆಗೆ ಮಾರ್ಚ್ 12ರ ಸುತ್ತೋಲೆ ಅನ್ವಯವಾಗಲಿದೆ.

ಇದನ್ನೂ ಓದಿ: Yuvarathnaa: ಧೂಳೆಬ್ಬಿಸಲು ಬಂದ ಯುವರತ್ನ! ಎಷ್ಟು ಚಿತ್ರಮಂದಿರಗಳಲ್ಲಿ ಪುನೀತ್​ ರಾಜ್​ಕುಮಾರ್ ಹವಾ?

Published On - 6:42 pm, Fri, 2 April 21

ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!