AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಬಂದು ನಿಂತ್ರೆ ಸಮಸ್ಯೆ ಪರಿಹಾರ ಆಗುತ್ತಾ? ನಿಮ್ಮ ತರಹ ನಾವು ಮನುಷ್ಯರೇ’: ಶಿವರಾಜ್​ಕುಮಾರ್

ಚಿತ್ರರಂಗ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಚಿತ್ರರಂಗದ ಹಲವು ಕಲಾವಿದರು ಈ ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಉಪೇಂದ್ರ, ಶಿವರಾಜ್​ಕುಮಾರ್, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಉಮಾಶ್ರೀ ಮೊದಲಾದವರು ಭಾಗಿ ಆಗಿದರು. ಈ ವೇಳೆ ಶಿವಣ್ಣ ಮಾತನಾಡಿದ್ದಾರೆ.

‘ನಾವು ಬಂದು ನಿಂತ್ರೆ ಸಮಸ್ಯೆ ಪರಿಹಾರ ಆಗುತ್ತಾ? ನಿಮ್ಮ ತರಹ ನಾವು ಮನುಷ್ಯರೇ’: ಶಿವರಾಜ್​ಕುಮಾರ್
ಪ್ರತಿಭಟನೆಯಲ್ಲಿ ವಸಿಷ್ಠ ಸಿಂಹ, ದರ್ಶನ್, ಶಿವಣ್ಣ, ಧ್ರುವ
ರಾಜೇಶ್ ದುಗ್ಗುಮನೆ
|

Updated on: Sep 29, 2023 | 1:08 PM

Share

ಕರ್ನಾಟಕ ಬಂದ್​ಗೆ ಸ್ಯಾಂಡಲ್​ವುಡ್ (Sandalwood)​ ಬೆಂಬಲ ನೀಡಿದೆ. ಇಂದು (ಸೆಪ್ಟೆಂಬರ್ 29) ಸಿನಿಮಾ ಕೆಲಸಗಳನ್ನು ಬಂದ್ ಮಾಡಲಾಗಿದೆ. ಸಿನಿಮಾ ಪ್ರದರ್ಶನ, ಶೂಟಿಂಗ್ ನಡೆಯುತ್ತಿಲ್ಲ. ಬೆಂಗಳೂರಿನ ಕರ್ನಾಟಕದ ಫಿಲ್ಮ್​ ಚೇಂಬರ್ ಸಮೀಪ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಚಿತ್ರರಂಗ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಚಿತ್ರರಂಗದ ಹಲವು ಕಲಾವಿದರು ಈ ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಉಪೇಂದ್ರ, ಶಿವರಾಜ್​ಕುಮಾರ್, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಉಮಾಶ್ರೀ (Umashree) ಮೊದಲಾದವರು ಭಾಗಿ ಆಗಿದರು. ಈ ವೇಳೆ ಶಿವಣ್ಣ ಮಾತನಾಡಿದ್ದಾರೆ.

‘ಕಾವೇರಿ ಸಮಸ್ಯೆ ಮೊದಲಿನಿಂದಲೂ ಇದೆ. ಹೋರಾಟ ಮಾಡುತ್ತಲೇ ಬಂದಿದ್ದೇವೆ. ಕಾವೇರಿ ಎಷ್ಟು ನೋವು ಅನುಭವಿಸಿರಬಹುದು. ತಾಯಿ ಪವರ್ ಅಂಥದ್ದು. ಎಲ್ಲಾ ನೋವನ್ನು ತೆಗೆದುಕೊಳ್ಳುತ್ತಾಳೆ. ಕಲಾವಿದರು ಬರಲ್ಲ ಎನ್ನುವ ಆರೋಪ ಮಾಡುತ್ತೀರಿ. ಕಲಾವಿದರು ಬಂದು ಏನು ಮಾಡಬೇಕು ಹೇಳಿ. ನಾವು ಬಂದು ನಿಂತ್ರೆ ಸಮಸ್ಯೆ ಪರಿಹಾರ ಆಗುತ್ತದಾ? ನಿಮ್ಮ ತರಹ ನಾವು ಮನುಷ್ಯರೇ. ಸ್ಟಾರ್​ ಗಿರಿ ಕೊಟ್ಟಿದ್ದು ನೀವೆ. ಅದನ್ನು ಕಿತ್ಕೋಳಿ, ನಮಗೆ ಬೇಡ. ನಾವು ಬಂದು ಮಾತನಾಡಿದ್ರೆ ಸಮಸ್ಯೆ ಪರಿಹಾರ ಆಗಲ್ಲ’ ಎಂದಿದ್ದಾರೆ ಶಿವಣ್ಣ.

‘ಸರ್ಕಾರಗಳು ಕುಂತು ಮಾತನಾಡಬೇಕು. ಒಂದು ಹೊಂದಾಣಿಕೆ​ಗೆ ಬರಬೇಕು. ರೈತರು ಎಲ್ಲ ಕಡೆಗಳಲ್ಲೂ ಒಂದೇ. ಎಲ್ಲರೂ ಕುಂತು ಮಾತನಾಡಿದ್ರೆ ಪರಿಹಾರ ಸಿಗುತ್ತದೆ. ದಾರಿ ಮೇಲೆ ಹೋಗುವ ಬಸ್​ಗೆ ಕಲ್ಲು ಹೊಡೆದರೆ ಅದು ಪ್ರತಿಭಟನೆ ಆಗುತ್ತದೆಯೇ? ಪರಭಾಷೆಯ ಹೀರೋನ ಸುದ್ದಿಗೋಷ್ಠಿ ನಿಲ್ಲಿಸಲಾಯಿತು. ಅದು ತಪ್ಪಲ್ವಾ? ಸುಮ್ಮನೆ ಕೂತು ಹೋರಾಟ ಮಾಡಿದ್ರೆ ಪರಿಹಾರ ಸಿಗಲ್ಲ. ಪರಿಸ್ಥಿತಿ ನೋಡಿ ಅಡ್ವಾಂಟೇಜ್ ತೆಗೆದುಕೊಳ್ಳಬಾರದು. ಇದು ಹೋರಾಟಕ್ಕೆ ಮರ್ಯಾದೆ ಅಲ್ಲ. ಬೇರೆಯವರಿಗೆ ನೋವು ಕೊಡುವ ಕೆಲಸ ಮಾಡಬಹುದು’ ಎಂದು ಕೋರಿದ್ದಾರೆ ಶಿವರಾಜ್​ಕುಮಾರ್.

ಇದನ್ನೂ ಓದಿ: ಅಭಿಮಾನಿಗಳ ಪ್ರಶ್ನೆಗೆ ತಮ್ಮದೇ ಸ್ಟೈಲ್​ನಲ್ಲಿ ಉತ್ತರಿಸಿದ ಶಿವರಾಜ್​ಕುಮಾರ್

‘ಸಿದ್ದಾರ್ಥ್ ಅವರೇ ನಿಮಗೆ ನಾನು ಕ್ಷಮೆ ಕೇಳುತ್ತೇನೆ. ಎಲ್ಲೇ ಹೋದರೂ ಕರ್ನಾಟಕದವರಿಗೆ ದೊಡ್ಡ ಮರ್ಯಾದೆ ಇದೆ. ಅದನ್ನು ಕಾಪಾಡಿಕೊಂಡು ಹೋಗಬೇಕಿದೆ. ದಯವಿಟ್ಟು ಬೇಜಾರು ಮಾಡಿಕೊಳ್ಳಬೇಡಿ. ನಾನು ಯಾವಾಗಲೂ ಹೃದಯದಿಂದ ಮಾತಾಡ್ತೀನಿ. ಎಲ್ಲರ ಜೊತೆಗೂ ಚೆನ್ನಾಗಿರಬೇಕು. ಅವರು ಬಂದಿಲ್ಲ, ಇವರು ಬಂದಿಲ್ಲ ಎನ್ನಬೇಡಿ’ ಎಂದಿದ್ದಾರೆ ಶಿವರಾಜ್​ಕುಮಾರ್.

ಧ್ರುವ ಕೂಡ ಮಾತನಾಡಿದ್ದು, ‘ಕನ್ನಡ ಚಿತ್ರರಂಗ ಒಂದಾಗಿಯೇ ಇದೆ. ಕೆಟ್ಟ ಸಂಚಿಂದ ಒಡೆಯಬೇಡಿ. ನಾವು ಯಾವಾಗಲೂ ರೈತರ ಪರ. ಎರಡೂ ರಾಜ್ಯದಲ್ಲಿ ಒಳ್ಳೆಯ ಮಳೆ, ಬೆಳೆ ಆಗಲಿ. ರೈತರಿಗೆ ಒಳ್ಳೆಯದಾಗಲಿ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್