ಗಮನ ಸೆಳೆಯುತ್ತಿದೆ ‘ಗೌರಿ’ ಸಿನಿಮಾದ ಯುವ ಜೋಡಿ

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ ಅವರ ಪುತ್ರ ಸಮರ್ಜಿತ್ ಲಂಕೇಶ್ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಯೂಟ್ಯೂಬ್​ನಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ.

ಗಮನ ಸೆಳೆಯುತ್ತಿದೆ ‘ಗೌರಿ’ ಸಿನಿಮಾದ ಯುವ ಜೋಡಿ
ಗೌರಿ
Follow us
|

Updated on: Jun 22, 2024 | 10:55 PM

ಇಂದ್ರಜಿತ್ ಲಂಕೇಶ್ (Indrajith Lankesh) ನಿರ್ದೇಶಿಸಿ ಅವರ ಪುತ್ರ ಸಮರ್ಜಿತ್ ಮೊದಲ ಬಾರಿ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾ ಚಿತ್ರೀಕರಣ ಆರಂಭಿಸಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಈ ಸಿನಿಮಾದಲ್ಲಿ ನಟಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದ ಸ್ಟೈಲಿಷ್ ಫೋಟೊಶೂಟ್​ ಆರಂಭದಲ್ಲಿ ಸಖತ್ ಗಮನ ಸೆಳೆದಿತ್ತು. ಇದೀಗ ಸಿನಿಮಾದ ಹಾಡು ಬಿಡುಗಡೆ ಆಗಿದ್ದು ಟ್ರೆಂಡ್ ಆಗುತ್ತಿದೆ.

‘ಗೌರಿ’ ಸಿನಿಮಾದ ಹುಬ್ಬಳ್ಳಿ ಜವಾರಿ ಶೈಲಿಯ ‘ಧೂಳ್ ಎಬ್ಬಿಸಾವ..’ ಹಾಡು ಬಿಡುಗಡೆ ಆಗಿದ್ದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡಿಂಗ್ ನಲ್ಲಿದೆ. ‘ಧೂಳ್ ಎಬ್ಬಿಸಾವ’ ಹಾಡು, ಹಾಡಿನ ಜವಾರಿ ಸಾಹಿತ್ಯ, ಅದಕ್ಕೆ ನಟರು ನರ್ತಿಸಿರುವ ರೀತಿ ನೋಡುಗರಿಗೆ ಇಷ್ಟವಾಗುತ್ತಿದೆ. ಈ ಹಾಡು ಆಲ್ ಇಂಡಿಯಾ ಲೆವೆಲ್ ನಲ್ಲಿ ಟ್ರೆಂಡ್ ಆಗುತ್ತಿದೆ ಎನ್ನುತ್ತಿದೆ ಚಿತ್ರತಂಡ.

ಹಾಡಿಗೆ ಶಿವು ಬೆರ್ಗಿ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಅನಿರುದ್ಧ್ ಶಾಸ್ತ್ರೀ ಮತ್ತು ಅನನ್ಯಾ ಭಟ್ ಅವರು ಸುಂದರ ಕಂಠದಲ್ಲಿ ಹಾಡಿದ್ದಾರೆ. ‘ಗೌರಿ’ ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಮತ್ತು ಖ್ಯಾತ ನಟಿ ಸಂಜನಾ ಆನಂದ್ ಈ ಹಾಡಿಗೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. ಇನ್ಸ್ಟಾಗ್ರಾಂ ಮತ್ತು ಯೂಟ್ಯೂಬ್ ನಲ್ಲಿ ಟಾಪ್ 5 ಟ್ರೆಂಡಿಂಗ್ ನಲ್ಲಿರುವ ಈ ಹಾಡಿಗೆ ಹಲವರು ರೀಲ್ಸ್ ಸಹ ಮಾಡುತ್ತಿದ್ದಾರೆ.

ಇದನ್ನೂ ಓದಿ:‘ಗೌರಿ’ ಸಿನಿಮಾಕ್ಕೆ ಶ್ರೇಯಾಂಕಾ ಪಾಟೀಲ್ ಬೆಂಬಲ, ಹಾಡು ಬಿಡುಗಡೆ

ಮತ್ತೊಂದು ವಿಶೇಷ ಅಂದ್ರೆ ಆಲ್ ಇಂಡಿಯಾ ಲೆವೆಲ್ ಟ್ರೆಂಡಿಂಗ್ ನಲ್ಲಿ ಸೌತ್ ಸಾಂಗ್ ಗಳು ಸದ್ದು ಮಾಡುತ್ತಿರುವ ಲಿಸ್ಟ್ ನಲ್ಲಿ ಮೊದಲನೇ ಸ್ಥಾನ ಕಲ್ಕಿ ಚಿತ್ರದ ಹಾಡು ಪಡೆದುಕೊಂಡಿದ್ರೆ ಎರಡನೇ ಸ್ಥಾನ ಪುಷ್ಪ2 ಚಿತ್ರದ ಹಾಡು ಪಡೆದುಕೊಂಡಿದೆ. ಇನ್ನು ಮೂರನೇ ಸ್ಥಾನದಲ್ಲಿ ಕನ್ನಡದ ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಸಿನಿಮಾದ ಧೂಳ್ ಎಬ್ಬಿಸುವ ಇದೆ ಎನ್ನುತ್ತಿದೆ ಚಿತ್ರತಂಡ.

ಸಿನಿಮಾದ ಪ್ರಚಾರವನ್ನು ಚಿತ್ರತಂಡ ಅದ್ಧೂರಿಯಾಗಿ ಮಾಡುತ್ತಿದೆ. ನಾಡಿನ ಹಲವು ಜಿಲ್ಲೆಗಳಿಗೆ ತೆರಳಿ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ದರ್ಶನ್ ಪ್ರಕರಣದ ನಡುವೆಯೂ ‘ಗೌರಿ’ ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಸಿನಿಮಾ ಶೀಘ್ರವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು, ಯಶಸ್ಸು ಗಳಿಸುವ ವಿಶ್ವಾಸವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ