AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆಯುತ್ತಿದೆ ‘ಗೌರಿ’ ಸಿನಿಮಾದ ಯುವ ಜೋಡಿ

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ ಅವರ ಪುತ್ರ ಸಮರ್ಜಿತ್ ಲಂಕೇಶ್ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಯೂಟ್ಯೂಬ್​ನಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ.

ಗಮನ ಸೆಳೆಯುತ್ತಿದೆ ‘ಗೌರಿ’ ಸಿನಿಮಾದ ಯುವ ಜೋಡಿ
ಗೌರಿ
ಮಂಜುನಾಥ ಸಿ.
|

Updated on: Jun 22, 2024 | 10:55 PM

Share

ಇಂದ್ರಜಿತ್ ಲಂಕೇಶ್ (Indrajith Lankesh) ನಿರ್ದೇಶಿಸಿ ಅವರ ಪುತ್ರ ಸಮರ್ಜಿತ್ ಮೊದಲ ಬಾರಿ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾ ಚಿತ್ರೀಕರಣ ಆರಂಭಿಸಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಈ ಸಿನಿಮಾದಲ್ಲಿ ನಟಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದ ಸ್ಟೈಲಿಷ್ ಫೋಟೊಶೂಟ್​ ಆರಂಭದಲ್ಲಿ ಸಖತ್ ಗಮನ ಸೆಳೆದಿತ್ತು. ಇದೀಗ ಸಿನಿಮಾದ ಹಾಡು ಬಿಡುಗಡೆ ಆಗಿದ್ದು ಟ್ರೆಂಡ್ ಆಗುತ್ತಿದೆ.

‘ಗೌರಿ’ ಸಿನಿಮಾದ ಹುಬ್ಬಳ್ಳಿ ಜವಾರಿ ಶೈಲಿಯ ‘ಧೂಳ್ ಎಬ್ಬಿಸಾವ..’ ಹಾಡು ಬಿಡುಗಡೆ ಆಗಿದ್ದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡಿಂಗ್ ನಲ್ಲಿದೆ. ‘ಧೂಳ್ ಎಬ್ಬಿಸಾವ’ ಹಾಡು, ಹಾಡಿನ ಜವಾರಿ ಸಾಹಿತ್ಯ, ಅದಕ್ಕೆ ನಟರು ನರ್ತಿಸಿರುವ ರೀತಿ ನೋಡುಗರಿಗೆ ಇಷ್ಟವಾಗುತ್ತಿದೆ. ಈ ಹಾಡು ಆಲ್ ಇಂಡಿಯಾ ಲೆವೆಲ್ ನಲ್ಲಿ ಟ್ರೆಂಡ್ ಆಗುತ್ತಿದೆ ಎನ್ನುತ್ತಿದೆ ಚಿತ್ರತಂಡ.

ಹಾಡಿಗೆ ಶಿವು ಬೆರ್ಗಿ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಅನಿರುದ್ಧ್ ಶಾಸ್ತ್ರೀ ಮತ್ತು ಅನನ್ಯಾ ಭಟ್ ಅವರು ಸುಂದರ ಕಂಠದಲ್ಲಿ ಹಾಡಿದ್ದಾರೆ. ‘ಗೌರಿ’ ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಮತ್ತು ಖ್ಯಾತ ನಟಿ ಸಂಜನಾ ಆನಂದ್ ಈ ಹಾಡಿಗೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. ಇನ್ಸ್ಟಾಗ್ರಾಂ ಮತ್ತು ಯೂಟ್ಯೂಬ್ ನಲ್ಲಿ ಟಾಪ್ 5 ಟ್ರೆಂಡಿಂಗ್ ನಲ್ಲಿರುವ ಈ ಹಾಡಿಗೆ ಹಲವರು ರೀಲ್ಸ್ ಸಹ ಮಾಡುತ್ತಿದ್ದಾರೆ.

ಇದನ್ನೂ ಓದಿ:‘ಗೌರಿ’ ಸಿನಿಮಾಕ್ಕೆ ಶ್ರೇಯಾಂಕಾ ಪಾಟೀಲ್ ಬೆಂಬಲ, ಹಾಡು ಬಿಡುಗಡೆ

ಮತ್ತೊಂದು ವಿಶೇಷ ಅಂದ್ರೆ ಆಲ್ ಇಂಡಿಯಾ ಲೆವೆಲ್ ಟ್ರೆಂಡಿಂಗ್ ನಲ್ಲಿ ಸೌತ್ ಸಾಂಗ್ ಗಳು ಸದ್ದು ಮಾಡುತ್ತಿರುವ ಲಿಸ್ಟ್ ನಲ್ಲಿ ಮೊದಲನೇ ಸ್ಥಾನ ಕಲ್ಕಿ ಚಿತ್ರದ ಹಾಡು ಪಡೆದುಕೊಂಡಿದ್ರೆ ಎರಡನೇ ಸ್ಥಾನ ಪುಷ್ಪ2 ಚಿತ್ರದ ಹಾಡು ಪಡೆದುಕೊಂಡಿದೆ. ಇನ್ನು ಮೂರನೇ ಸ್ಥಾನದಲ್ಲಿ ಕನ್ನಡದ ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಸಿನಿಮಾದ ಧೂಳ್ ಎಬ್ಬಿಸುವ ಇದೆ ಎನ್ನುತ್ತಿದೆ ಚಿತ್ರತಂಡ.

ಸಿನಿಮಾದ ಪ್ರಚಾರವನ್ನು ಚಿತ್ರತಂಡ ಅದ್ಧೂರಿಯಾಗಿ ಮಾಡುತ್ತಿದೆ. ನಾಡಿನ ಹಲವು ಜಿಲ್ಲೆಗಳಿಗೆ ತೆರಳಿ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ದರ್ಶನ್ ಪ್ರಕರಣದ ನಡುವೆಯೂ ‘ಗೌರಿ’ ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಸಿನಿಮಾ ಶೀಘ್ರವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು, ಯಶಸ್ಸು ಗಳಿಸುವ ವಿಶ್ವಾಸವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ