AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆಯುತ್ತಿದೆ ‘ಗೌರಿ’ ಸಿನಿಮಾದ ಯುವ ಜೋಡಿ

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ ಅವರ ಪುತ್ರ ಸಮರ್ಜಿತ್ ಲಂಕೇಶ್ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಯೂಟ್ಯೂಬ್​ನಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ.

ಗಮನ ಸೆಳೆಯುತ್ತಿದೆ ‘ಗೌರಿ’ ಸಿನಿಮಾದ ಯುವ ಜೋಡಿ
ಗೌರಿ
ಮಂಜುನಾಥ ಸಿ.
|

Updated on: Jun 22, 2024 | 10:55 PM

Share

ಇಂದ್ರಜಿತ್ ಲಂಕೇಶ್ (Indrajith Lankesh) ನಿರ್ದೇಶಿಸಿ ಅವರ ಪುತ್ರ ಸಮರ್ಜಿತ್ ಮೊದಲ ಬಾರಿ ನಾಯಕ ನಟನಾಗಿ ನಟಿಸಿರುವ ‘ಗೌರಿ’ ಸಿನಿಮಾ ಚಿತ್ರೀಕರಣ ಆರಂಭಿಸಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಈ ಸಿನಿಮಾದಲ್ಲಿ ನಟಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದ ಸ್ಟೈಲಿಷ್ ಫೋಟೊಶೂಟ್​ ಆರಂಭದಲ್ಲಿ ಸಖತ್ ಗಮನ ಸೆಳೆದಿತ್ತು. ಇದೀಗ ಸಿನಿಮಾದ ಹಾಡು ಬಿಡುಗಡೆ ಆಗಿದ್ದು ಟ್ರೆಂಡ್ ಆಗುತ್ತಿದೆ.

‘ಗೌರಿ’ ಸಿನಿಮಾದ ಹುಬ್ಬಳ್ಳಿ ಜವಾರಿ ಶೈಲಿಯ ‘ಧೂಳ್ ಎಬ್ಬಿಸಾವ..’ ಹಾಡು ಬಿಡುಗಡೆ ಆಗಿದ್ದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡಿಂಗ್ ನಲ್ಲಿದೆ. ‘ಧೂಳ್ ಎಬ್ಬಿಸಾವ’ ಹಾಡು, ಹಾಡಿನ ಜವಾರಿ ಸಾಹಿತ್ಯ, ಅದಕ್ಕೆ ನಟರು ನರ್ತಿಸಿರುವ ರೀತಿ ನೋಡುಗರಿಗೆ ಇಷ್ಟವಾಗುತ್ತಿದೆ. ಈ ಹಾಡು ಆಲ್ ಇಂಡಿಯಾ ಲೆವೆಲ್ ನಲ್ಲಿ ಟ್ರೆಂಡ್ ಆಗುತ್ತಿದೆ ಎನ್ನುತ್ತಿದೆ ಚಿತ್ರತಂಡ.

ಹಾಡಿಗೆ ಶಿವು ಬೆರ್ಗಿ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಅನಿರುದ್ಧ್ ಶಾಸ್ತ್ರೀ ಮತ್ತು ಅನನ್ಯಾ ಭಟ್ ಅವರು ಸುಂದರ ಕಂಠದಲ್ಲಿ ಹಾಡಿದ್ದಾರೆ. ‘ಗೌರಿ’ ಸಿನಿಮಾದ ನಾಯಕ ಸಮರ್ಜಿತ್ ಲಂಕೇಶ್ ಮತ್ತು ಖ್ಯಾತ ನಟಿ ಸಂಜನಾ ಆನಂದ್ ಈ ಹಾಡಿಗೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. ಇನ್ಸ್ಟಾಗ್ರಾಂ ಮತ್ತು ಯೂಟ್ಯೂಬ್ ನಲ್ಲಿ ಟಾಪ್ 5 ಟ್ರೆಂಡಿಂಗ್ ನಲ್ಲಿರುವ ಈ ಹಾಡಿಗೆ ಹಲವರು ರೀಲ್ಸ್ ಸಹ ಮಾಡುತ್ತಿದ್ದಾರೆ.

ಇದನ್ನೂ ಓದಿ:‘ಗೌರಿ’ ಸಿನಿಮಾಕ್ಕೆ ಶ್ರೇಯಾಂಕಾ ಪಾಟೀಲ್ ಬೆಂಬಲ, ಹಾಡು ಬಿಡುಗಡೆ

ಮತ್ತೊಂದು ವಿಶೇಷ ಅಂದ್ರೆ ಆಲ್ ಇಂಡಿಯಾ ಲೆವೆಲ್ ಟ್ರೆಂಡಿಂಗ್ ನಲ್ಲಿ ಸೌತ್ ಸಾಂಗ್ ಗಳು ಸದ್ದು ಮಾಡುತ್ತಿರುವ ಲಿಸ್ಟ್ ನಲ್ಲಿ ಮೊದಲನೇ ಸ್ಥಾನ ಕಲ್ಕಿ ಚಿತ್ರದ ಹಾಡು ಪಡೆದುಕೊಂಡಿದ್ರೆ ಎರಡನೇ ಸ್ಥಾನ ಪುಷ್ಪ2 ಚಿತ್ರದ ಹಾಡು ಪಡೆದುಕೊಂಡಿದೆ. ಇನ್ನು ಮೂರನೇ ಸ್ಥಾನದಲ್ಲಿ ಕನ್ನಡದ ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಸಿನಿಮಾದ ಧೂಳ್ ಎಬ್ಬಿಸುವ ಇದೆ ಎನ್ನುತ್ತಿದೆ ಚಿತ್ರತಂಡ.

ಸಿನಿಮಾದ ಪ್ರಚಾರವನ್ನು ಚಿತ್ರತಂಡ ಅದ್ಧೂರಿಯಾಗಿ ಮಾಡುತ್ತಿದೆ. ನಾಡಿನ ಹಲವು ಜಿಲ್ಲೆಗಳಿಗೆ ತೆರಳಿ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ದರ್ಶನ್ ಪ್ರಕರಣದ ನಡುವೆಯೂ ‘ಗೌರಿ’ ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಸಿನಿಮಾ ಶೀಘ್ರವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು, ಯಶಸ್ಸು ಗಳಿಸುವ ವಿಶ್ವಾಸವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ