AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿರಲಿದೆ ಮಲೆನಾಡಿನ ‘ಕೆರೆಬೇಟೆ’? ಮೋಷನ್​ ಪೋಸ್ಟರ್​ ಮೂಲಕ ಸುಳಿವು ನೀಡಿದ ಚಿತ್ರತಂಡ

ನಿರ್ದೇಶಕ ರಾಜ್‌ಗುರು, ನಟ-ನಿರ್ಮಾಪಕ ಗೌರಿ ಶಂಕರ್​ ಮೂಲತಃ ಮಲೆನಾಡಿನವರು. ಬಾಲ್ಯದಿಂದಲೂ ಅವರು ಕೆರೆಬೇಟೆ ನೋಡುತ್ತಾ ಬೆಳೆದಿದ್ದಾರೆ. ಅದನ್ನೇ ಕೇಂದ್ರವಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ಮೋಷನ್​ ಪೋಸ್ಟರ್​ನಲ್ಲಿ ಸಾಕಷ್ಟು ಅಂಶಗಳನ್ನು ತೋರಿಸಲಾಗಿದೆ. ಈ ಚಿತ್ರದ ಪೋಸ್ಟ್​ ಪ್ರೊಡಕ್ಷನ್​ ಕೆಲಸ ನಡೆಯುತ್ತಿದೆ.

ಹೇಗಿರಲಿದೆ ಮಲೆನಾಡಿನ ‘ಕೆರೆಬೇಟೆ’? ಮೋಷನ್​ ಪೋಸ್ಟರ್​ ಮೂಲಕ ಸುಳಿವು ನೀಡಿದ ಚಿತ್ರತಂಡ
ಗೌರಿ ಶಂಕರ್​
ಮದನ್​ ಕುಮಾರ್​
|

Updated on:Oct 27, 2023 | 4:22 PM

Share

ಶೀರ್ಷಿಕೆ ಭಿನ್ನವಾಗಿದ್ದರೆ ಸುಲಭವಾಗಿ ಪ್ರೇಕ್ಷಕರ ಗಮನ ಸೆಳೆಯಬಹುದು. ‘ಕೆರೆಬೇಟೆ’ ಸಿನಿಮಾ (Kerebete Cinema) ಆ ಕೆಲಸ ಮಾಡುತ್ತಿದೆ. ಟೈಟಲ್​ನಿಂದ ಈ ಸಿನಿಮಾ ಕುತೂಹಲ ಮೂಡಿಸಿದೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಈಗ ಮೋಷನ್ ಪೋಸ್ಟರ್ (Kerebete Motion Poster) ರಿಲೀಸ್​ ಮಾಡುವ ಮೂಲಕ ಪ್ರೇಕ್ಷಕರ ಕೌತುಕವನ್ನು ಹೆಚ್ಚಿಸಲಾಗಿದೆ. ಇದು ಮಲೆನಾಡು ಭಾಗದ ಮೀನು ಬೇಟೆ ಪದ್ಧತಿಯ ಕುರಿತು ನಿರ್ಮಾಣ ಆಗಿರುವ ಸಿನಿಮಾ. ನಿರ್ದೇಶಕ ರಾಜ್​ ಗುರು ಅವರು ಇದೇ ಮೊದಲ ಬಾರಿಗೆ ಮೀನು ಬೇಟೆಯ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಗೌರಿಶಂಕರ್ ಎಸ್‌ಆರ್‌ಜಿ (Gowri Shankar) ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಗ್ರಾಮೀಣ ಸೊಗಡಿನ ಕಥೆ ಇರುವ ಚಿತ್ರಕ್ಕೆ ಪ್ರೇಕ್ಷಕರು ಮನ ಸೋಲುತ್ತಾರೆ. ‘ಕೆರೆಬೇಟೆ’ ಚಿತ್ರದಲ್ಲೂ ಅಂಥ ಕಹಾನಿ ಇರಲಿದೆ.

ಹೇಗಿದೆ ಕೆರೆಬೇಟೆ ಮೋಷನ್​ ಪೋಸ್ಟರ್​?

ಅಕ್ಟೋಬರ್​ 27ರಂದು ಬಿಡುಗಡೆಯಾಗಿರುವ ‘ಕೆರೆಬೇಟೆ’ ಮೋಷನ್ ಪೋಸ್ಟರ್‌ನಲ್ಲಿ ಹೀರೋ ಗೌರಿಶಂಕರ್ ಕೂಣಿ ಹಿಡಿದು ಕೆರೆಯಲ್ಲಿ ಮೀನು ಬೇಟೆ ಆಡುತ್ತಿರುವ ದೃಶ್ಯ ಇದೆ. ಉದ್ದ ಕೂದಲು ಮತ್ತು ಗಡ್ಡ ಬಿಟ್ಟುಕೊಂಡು ಅವರು ರಾ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಗೌರಿ ಶಂಕರ್​ ಅವರ ಹಿಂದೆ ಜನರ ದೊಡ್ಡ ಗುಂಪು ಇದೆ. ಮೀನು ಬೇಟೆಯ ಕಥೆ ಯಾವ ರೀತಿ ಇರಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿಸುವ ರೀತಿಯಲ್ಲಿ ಈ ಪೋಸ್ಟರ್​ ಮೂಡಿಬಂದಿದೆ.

ಇದನ್ನೂ ಓದಿ: Tagaru Palya Review: ‘ಟಗರು ಪಲ್ಯ’ದಲ್ಲಿದೆ ನಗು-ಅಳು ತುಂಬಿದ ಮನರಂಜನೆಯ ಫ್ಯಾಮಿಲಿ ಪ್ಯಾಕೇಜ್​

ನಿರ್ದೇಶಕರ ಬಗ್ಗೆ:

‘ಕೆರೆಬೇಟೆ’ ಚಿತ್ರ ನಿರ್ದೇಶಕ ರಾಜ್‌ಗುರು ಅವರು ಈ ಹಿಂದೆ ಪವನ್ ಒಡೆಯರ್ ಜತೆ ‘ಗೂಗ್ಲಿ’, ‘ರಣವಿಕ್ರಮ’, ‘ನಟಸಾರ್ವಭೌಮ’, ‘ಜೆಸ್ಸಿ’, ‘ರೆಮೋ’ ಸಿನಿಮಾಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಆ ಅನುಭವದ ಆಧಾರದಲ್ಲಿ ಅವರೀಗ ಸ್ವತಂತ್ರ್ಯ ನಿರ್ದೇಶಕರಾಗಿದ್ದಾರೆ. ಅವರ ಮೊದಲ ನಿರ್ದೇಶನದ ಸಿನಿಮಾ ‘ಕೆರೆಬೇಟೆ’. ರಾಜ್‌ಗುರು ಕೂಡ ಮಲೆನಾಡಿನವರು. ಬಾಲ್ಯದಿಂದಲೂ ಅವರು ಕೆರೆಬೇಟೆ ನೋಡುತ್ತಾ ಬೆಳೆದಿದ್ದಾರೆ. ಹಾಗಾಗಿ ಅದರ ಬಗ್ಗೆ ಅವರಿಗೆ ಹೆಚ್ಚು ಜ್ಞಾನ ಇದೆ. ಅದನ್ನೇ ಇಟ್ಟುಕೊಂಡು ಅವರೀಗ ಸಿನಿಮಾ ಮಾಡಿದ್ದಾರೆ. ಸದ್ಯಕ್ಕೆ 70ರಷ್ಟು ಶೂಟಿಂಗ್​ ಮುಗಿದಿದೆ. 2024ರ ಆರಂಭದಲ್ಲಿ ಸಿನಿಮಾ ರಿಲೀಸ್​ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ.

ಮಲೆನಾಡಿನ ಜೀವನ ಶೈಲಿ:

ಈ ಸಿನಿಮಾ ಮೂಲಕ ಮಲೆನಾಡಿನ ಜೀವನ ಶೈಲಿಯನ್ನು ತೆರೆ ಮೇಲೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಅದೇ ಕಾರಣಕ್ಕಾಗಿ ಶಿವಮೊಗ್ಗ ಜಿಲ್ಲೆಯ ಸಿಗಂದೂರು ಮತ್ತು ಸೊರಬ ಸುತ್ತ-ಮುತ್ತಲಿನ ಲೊಕೇಷನ್​ಗಳಲ್ಲಿ ಶೂಟಿಂಗ್​ ಮಾಡಲಾಗಿದೆ. ಗೌರಿಶಂಕರ್ ಮತ್ತು ಬಿಂದೂ ಶಿವರಾಜ್ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಬಿಂದು ನಟಿಸಿರುವ ಚೊಚ್ಚಲ ಸಿನಿಮಾ ಇದು. ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್ ಅವರಂತಹ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ. ಗಗನ್ ಬದೇರಿಯಾ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ‘ಜನಮನ ಸಿನಿಮಾಸ್’ ಮೂಲಕ ಗೌರಿಶಕಂಕರ್ ಮತ್ತು ಜೈಶಂಕರ್ ಪಟೇಲ್ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:15 pm, Fri, 27 October 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?