AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ದೇಶದಾದ್ಯಂತ ಕಡಿಮೆ ಆಗಲಿದೆ ಚಿತ್ರಮಂದಿರಗಳ ಟಿಕೆಟ್ ಬೆಲೆ: ಹೇಗೆ?

Movie Ticket price: ಸಿನಿಮಾ ಟಿಕೆಟ್ ದರಗಳ ಏರಿಕೆ ಬಗ್ಗೆ ಪದೇ-ಪದೇ ಚರ್ಚೆಗಳಾಗುತ್ತಲೇ ಇರುತ್ತವೆ. ಕೆಲ ವಾರಗಳ ಹಿಂದೆ ಸಿದ್ದರಾಮಯ್ಯ ಸಹ ರಾಜ್ಯದಲ್ಲಿ ಟಿಕೆಟ್ ದರಗಳನ್ನು ತಗ್ಗಿಸುವ ಬಗ್ಗೆ ಭರವಸೆ ನೀಡಿದ್ದರು. ಆದರೆ ಇದೀಗ ದೇಶದಾದ್ಯಂತ ಚಿತ್ರಮಂದಿರಗಳ ಟಿಕೆಟ್ ದರಗಳು ತಗ್ಗುವ ಸಾಧ್ಯತೆ ಇದೆ. ಈ ಬಗ್ಗೆ ಚರ್ಚೆ ಚಾಲ್ತಿಯಲ್ಲಿದೆ...

ಶೀಘ್ರವೇ ದೇಶದಾದ್ಯಂತ ಕಡಿಮೆ ಆಗಲಿದೆ ಚಿತ್ರಮಂದಿರಗಳ ಟಿಕೆಟ್ ಬೆಲೆ: ಹೇಗೆ?
Ticket
ಮಂಜುನಾಥ ಸಿ.
|

Updated on: Aug 28, 2025 | 5:08 PM

Share

ಚಿತ್ರಮಂದಿರಗಳ ಟಿಕೆಟ್ ಬೆಲೆಯ ವಿಷಯ ಆಗಾಗ್ಗೆ ಚರ್ಚೆಗೆ ಬರುತ್ತಲೇ ಇರುತ್ತದೆ. ಟಿಕೆಟ್ ಬೆಲೆಯ ವಿಷಯದಲ್ಲಿ ಚಿತ್ರರಂಗಗಳಲ್ಲಿಯೇ ಸಾಕಷ್ಟು ಭಿನ್ನಾಭಿಪ್ರಾಯಗಳು ಇವೆ. ಕೆಲ ತಿಂಗಳ ಹಿಂದಷ್ಟೆ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರದ ಭರವಸೆ ನೀಡಿದ್ದರು. ಆದರೆ ಅದಿನ್ನೂ ಜಾರಿ ಆಗಿಲ್ಲ. ಆಂಧ್ರ ಪ್ರದೇಶ, ಕೇರಳಗಳಲ್ಲಿಯೂ ಸಹ ಟಿಕೆಟ್ ದರದ ಚರ್ಚೆ ಆಗುತ್ತಲೇ ಇರುತ್ತದೆ. ಆದರೆ ಇದೀಗ ಒಮ್ಮೆಲೆ ದೇಶದಾದ್ಯಂತ ಸಿನಿಮಾ ಟಿಕೆಟ್​ ದರಗಳು ಕಡಿಮೆ ಆಗುವ ಸೂಚನೆ ದೊರೆತಿದೆ.

ದೇಶದಲ್ಲಿ ಪ್ರಸ್ತುತ ಮನೊರಂಜನಾ ತೆರಿಗೆ 18% ಇದೆ. ಇದು ಒಟ್ಟಾರೆ ಟಿಕೆಟ್ ದರ ಹೆಚ್ಚಳಕ್ಕೆ ಪರೋಕ್ಷ ಕಾರಣವಾಗಿತ್ತು. ಮನೊರಂಜನಾ ತೆರಿಗೆ ಇಳಿಕೆ ಮಾಡುವಂತೆ ಚಿತ್ರಮಂದಿರಗಳ ಮಾಲೀಕರು, ಮಲ್ಟಿಪ್ಲೆಕ್ಸ್​ಗಳವರು ಸಹ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಇದ್ದರು. ಟಿಕೆಟ್ ದರ 300 ರೂಪಾಯಿಗಳಿದ್ದರೆ ತೆರಿಗೆ ಹಣವೇ 54 ರೂಪಾಯಿಗಳಾಗುತ್ತಿತ್ತು. ಜಿಎಸ್​​ಟಿಯನ್ನು 5%ಗೆ ತಗ್ಗಿಸಬೇಕೆಂದು ಬೇಡಿಕೆ ಮೊದಲೇ ಇಟ್ಟಿದ್ದರು. ಮನವಿಯನ್ನು ಸರ್ಕಾರ ಪುರಸ್ಕರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:‘ಹರಿ ಹರ ವೀರ ಮಲ್ಲು’ ಸಿನಿಮಾ ಟಿಕೆಟ್ ದರ: ಯಾವ ರಾಜ್ಯದಲ್ಲಿ ಎಷ್ಟಿದೆ?

2018 ರಿಂದಲೂ ಮಲ್ಟಿಪ್ಲೆಕ್ಸ್​ ಅಸೋಸಿಯೇಷನ್​​ಗಳವರು ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದು, ತೆರಿಗೆ ಇಳಿಕೆ ಮಾಡುವಂತೆ ಮನವಿ ಮಾಡುತ್ತಲೇ ಬರುತ್ತಿವೆ. ಇದೀಗ ಸರ್ಕಾರವು ಈ ಬಗ್ಗೆ ಮಲ್ಟಿಪ್ಲೆಕ್ಸ್​ ಅಸೋಸಿಯೇಷನ್​ಗಳಿಗೆ ಭರವಸೆ ನೀಡಿದ್ದು, ಜಿಎಸ್​​ಟಿ ಸಭೆಯಲ್ಲಿ ಮನೊರಂಜನಾ ತೆರಿಗೆಯನ್ನು ಇಳಿಸುವ ನಿರ್ಣಯ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

300 ರೂಪಾಯಿಗಳ ವರೆಗಿನ ಟಿಕೆಟ್ ದರಕ್ಕೆ 5% ಅದಕ್ಕೂ ಹೆಚ್ಚಿನ ಟಿಕೆಟ್ ದರಕ್ಕೆ 12% ತೆರಿಗೆ ವಿಧಿಸುವಂತೆ ಮಲ್ಟಿಪ್ಲೆಕ್ಸ್​ ಅಸೋಸಿಯೇಷನ್ ಅವರುಗಳು ಸರ್ಕಾರದ ಬಳಿ ಮನವಿ ಮಾಡಿದ್ದರು. ಪ್ರಸ್ತುತ 100 ರೂಪಾಯಿಗಳಿಗೂ ಕಡಿಮೆ ಟಿಕೆಟ್ ದರಕ್ಕೆ 12% ಮತ್ತು ಅದಕ್ಕಿಂತಲೂ ಹೆಚ್ಚಿನ ಟಿಕೆಟ್ ದರಕ್ಕೆ 18% ಟಿಕೆಟ್ ದರವನ್ನು ವಿಧಿಸಲಾಗಿದೆ. ಇದರಿಂದಾಗಿ ದೇಶದಾದ್ಯಂತ ಟಿಕೆಟ್ ದರ ಬಹಳ ಹೆಚ್ಚಿದೆ.

ಕಳೆದ ರಾಜ್ಯ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಿನಿಮಾ ಟಿಕೆಟ್ ದರಗಳ ಮೇಲೆ ನಿಯಂತ್ರಣ ಹೇರುವ ಬಗ್ಗೆ ಮಾತನಾಡಿದ್ದರು. ರಾಜ್ಯದಲ್ಲಿ ಏಕರೂಪ ಟಿಕೆಟ್ ದರ ಜಾರಿಗೊಳಿಸುವ ಮಾತನ್ನಾಡಿದ್ದರು. ಫಿಲಂ ಚೇಂಬರ್ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಸ್ವಾಗತ ಮಾಡಿತ್ತು. ಆದರೆ ಅದಿನ್ನೂ ಜಾರಿಗೆ ಬಂದಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!