AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಳ್ಟು’ ಹೀರೋ-ನಿರ್ದೇಶಕರ ಕಾಂಬಿನೇಷನ್​ನಲ್ಲಿ ಬರಲಿದೆ ಮತ್ತೊಂದು ಸಿನಿಮಾ; ಹೆಚ್ಚಿದೆ ನಿರೀಕ್ಷೆ

ಕನ್ನಡ ಚಿತ್ರರಂಗದಲ್ಲಿ ನವೀನ್​ ಶಂಕರ್​ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಲ್ಲ ರೀತಿಯ ಪಾತ್ರಗಳನ್ನೂ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

‘ಗುಳ್ಟು’ ಹೀರೋ-ನಿರ್ದೇಶಕರ ಕಾಂಬಿನೇಷನ್​ನಲ್ಲಿ ಬರಲಿದೆ ಮತ್ತೊಂದು ಸಿನಿಮಾ; ಹೆಚ್ಚಿದೆ ನಿರೀಕ್ಷೆ
ನವೀನ್ ಶಂಕರ್, ಜನಾರ್ದನ್ ಚಿಕ್ಕಣ್ಣ
ಮದನ್​ ಕುಮಾರ್​
|

Updated on: May 13, 2023 | 4:50 PM

Share

ನಟ ನವೀನ್​ ಶಂಕರ್​ ಅಭಿನಯದ ‘ಗುಳ್ಟು’ (Gultoo Movie) ಸಿನಿಮಾದ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ಕನ್ನಡದ ಮಟ್ಟಿಗೆ ಹೊಸತನದ ಕಥೆಯನ್ನು ಪರಿಚಯಿಸಿದ ಸಿನಿಮಾ ಅದು. ಸೈಬರ್​ ಕ್ರೈಂ ಕುರಿತಾದ ಕಥೆಯನ್ನು ನಿರ್ದೇಶಕ ಜನಾರ್ದನ್​ ಚಿಕ್ಕಣ್ಣ (Janardhan Chikkanna) ಅವರು ಸೊಗಸಾಗಿ ವಿವರಿಸಿದ್ದರು. ಪ್ರೇಕ್ಷಕರಿಗೆ ಆ ಸಿನಿಮಾ ಇಷ್ಟವಾಗಿತ್ತು. ‘ಗುಳ್ಟು’ ಸಿನಿಮಾದಿಂದ ನವೀನ್​ ಶಂಕರ್​ ಅವರಿಗೆ ಜನಪ್ರಿಯತೆ ಸಿಕ್ಕಿತು. ಈಗ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದರ ನಡುವೆ ಒಂದು ಎಗ್ಸೈಟಿಂಗ್​ ನ್ಯೂಸ್​ ಕೇಳಿಬಂದಿದೆ. ‘ಗುಳ್ಟು’ ನಿರ್ದೇಶಕ ಜನಾರ್ದನ್​ ಚಿಕ್ಕಣ್ಣ ಮತ್ತು ನವೀನ್​ ಶಂಕರ್​ (Naveen Shankar) ಅವರು ಜೊತೆಯಾಗಿ ಮತ್ತೊಂದು ಸಿನಿಮಾ ಮಾಡಲಿದ್ದಾರೆ. ಈ ಬಗ್ಗೆ ‘ಸಿನಿಮಾ ಎಕ್ಸ್​ಪ್ರೆಸ್​’ ವರದಿ ಮಾಡಿದೆ.

ಹೊಸ ಸಿನಿಮಾ ಕುರಿತಂತೆ ನವೀನ್​ ಶಂಕರ್​ ಮತ್ತು ಜನಾರ್ದನ್​ ಚಿಕ್ಕಣ್ಣ ಅವರು ಚರ್ಚೆ ನಡೆಸುತ್ತಿದ್ದಾರೆ. ಆದರೆ ಈ ಸಿನಿಮಾ ಸೆಟ್ಟೇರಲು ಇನ್ನೂ ಸಮಯ ಹಿಡಿಯಲಿದೆ. ಸದ್ಯಕ್ಕೆ ಜನಾರ್ದನ್​ ಅವರು ‘ಅಜ್ಞಾತವಾಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅತ್ತ ನವೀನ್​ ಶಂಕರ್​ ಅವರು ‘ಕ್ಷೇತ್ರಪತಿ’ ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಆ ನಂತರವೇ ಈ ನಟ-ನಿರ್ದೇಶಕನ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾದ ಬಗ್ಗೆ ಮಾತುಕತೆ ಮುಂದುವರಿಯಲಿದೆ.

ಇದನ್ನೂ ಓದಿ: ‘ಕ್ಷೇತ್ರಪತಿ’ ಆದ ನವೀನ್​ ಶಂಕರ್​ಗೆ ಶುಭ ಕೋರಿದ ಡಾಲಿ ಧನಂಜಯ; ಮೋಷನ್​ ಪೋಸ್ಟರ್​ ರಿಲೀಸ್​

ಕನ್ನಡ ಚಿತ್ರರಂಗದಲ್ಲಿ ನವೀನ್​ ಶಂಕರ್​ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಎಲ್ಲ ರೀತಿಯ ಪಾತ್ರಗಳನ್ನೂ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಹೀರೋ ಪಾತ್ರಕ್ಕೂ ಸೈ, ವಿಲನ್​ ಆಗಲೂ ಸೈ ಎಂದು ಅವರು ಮುನ್ನುಗ್ಗುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಹೊಯ್ಸಳ’ ಸಿನಿಮಾದಲ್ಲಿ ಅವರು ಮಾಡಿದ ವಿಲನ್​ ಪಾತ್ರ ಸಖತ್ ಗಮನ ಸೆಳೆಯಿತು. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಯಿತು.

ಇದನ್ನೂ ಓದಿ: ಧರಣಿ ಮಂಡಲ ಮಧ್ಯದೊಳಗೆ: ನವೀನ್​ ಶಂಕರ್-ಐಶಾನಿ ಶೆಟ್ಟಿಯ ‘ಮಾತು ಮಾತಲ್ಲೇ..’ ಗೀತೆಗೆ ವಿಜಯ್​ ಪ್ರಕಾಶ್​ ಧ್ವನಿ

ಕನ್ನಡದಲ್ಲಿ ಇತ್ತೀಚೆಗೆ ಬಂದ ಸಿನಿಮಾಗಳ ಪೈಕಿ ‘ಹೊಂದಿಸಿ ಬರೆಯಿರಿ’ ಸಿನಿಮಾಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದರು. ಒಟಿಟಿಯಲ್ಲಿ ಈ ಚಿತ್ರ ನೋಡಿದ ಎಲ್ಲರೂ ಪಾಸಿಟಿವ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಿನಿಮಾದಲ್ಲಿ ನವೀನ್​ ಶಂಕರ್​ ಅವರು ಮಾಡಿದ ಪಾತ್ರ ಹೆಚ್ಚು ಹೈಲೈಟ್​ ಆಗಿದೆ. ಈ ಗೆಲುವಿನ ಖುಷಿಯಲ್ಲಿರುವ ನವೀನ್​ ಶಂಕರ್​ ಅವರಿಗೆ ಹೊಸ ಹೊಸ ಅವಕಾಶಗಳು ಹರಿದುಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More