AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಆಗಲಿರುವ ಸಿನಿಮಾಗಳ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ..

ಈ ವರ್ಷದ ಸಂಕ್ರಾಂತಿ ಸಂದರ್ಭದಲ್ಲಿ ಸಿನಿಮಾ ಜಾತ್ರೆ ನಡೆಯಲಿದೆ. ಈ ಪೈಕಿ ಕೆಲಸ ಸಿನಿಮಾಗಳಿಗೆ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಪ್ರತಿ ಸಿನಿಮಾಗಳು ಒಂದೊಂದು ವಿಶೇಷತೆ ಹೊಂದಿವೆ. ಆ ಬಗ್ಗೆ ಇಲ್ಲಿದೆ ವಿವರ. 

ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಆಗಲಿರುವ ಸಿನಿಮಾಗಳ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ..
ಸಂಕ್ರಾಂತಿ ರಿಲೀಸ್ ಸಂದರ್ಭದಲ್ಲಿ ರಿಲೀಸ್ ಆಗಲಿರುವ ಸಿನಿಮಾಗಳ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ..
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 30, 2023 | 10:17 AM

Share

ಸಂಕ್ರಾಂತಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಬ್ಬದ ಸಮಯದಲ್ಲಿ ದಕ್ಷಿಣ ಭಾರತದಲ್ಲಿ ಸಾಕಷ್ಟು ಸಿನಿಮಾಗಳು ರಿಲೀಸ್ ಆಗುತ್ತವೆ. ಈ ವರ್ಷದ ಸಂಕ್ರಾಂತಿ ಸಂದರ್ಭದಲ್ಲಿ ಸಿನಿಮಾ ಜಾತ್ರೆ ನಡೆಯಲಿದೆ. ‘ಗುಂಟೂರು ಖಾರಂ’, ‘ಹನು ಮಾನ್’, ‘ಈಗಲ್’, ‘ಸೈಂಧವ್’, ‘ನಾ ಸಾಮಿ ರಂಗ’, ಕ್ಯಾಪ್ಟನ್ ಮಿಲ್ಲರ್, ‘ಮೆರಿ ಕ್ರಿಸ್​ಮಸ್​ ಮೊದಲಾದ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಪೈಕಿ ಕೆಲಸ ಸಿನಿಮಾಗಳಿಗೆ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಪ್ರತಿ ಸಿನಿಮಾಗಳು ಒಂದೊಂದು ವಿಶೇಷತೆ ಹೊಂದಿವೆ. ಆ ಬಗ್ಗೆ ಇಲ್ಲಿದೆ ವಿವರ.

‘ಗುಂಟೂರು ಖಾರಂ’

‘ಗುಂಟೂರು ಖಾರಂ’ ಸಿನಿಮಾ ಸಾಕಷ್ಟು ವಿಶೇಷತೆಗಳನ್ನು ಹೊಂದಿವೆ. ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ ಆದರೆ, ತ್ರಿವಿಕ್ರಂ ಅವರು ನಿರ್ದೇಶನ ಮಾಡಿದ್ದಾರೆ. ಇವರದ್ದು ಹಿಟ್ ಕಾಂಬಿನೇಷನ್. ಈ ಸಿನಿಮಾದ ಶೂಟಿಂಗ್ ಇನ್ನೂ ಪ್ರಗತಿಯಲ್ಲಿದೆ ಅನ್ನೋದು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿದೆ. ಪೋಸ್ಟರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಜನವರು 12ರಂದು ಸಿನಿಮಾ ರಿಲೀಸ್ ಆಗುತ್ತಿದೆ.  ಈ ಚಿತ್ರದ ಮೊದಲ ಕಾಪಿ ರೆಡಿ ಆಗೋದು ಜನವರಿ 8ರಂದು ಎನ್ನಲಾಗುತ್ತಿದೆ

ಹನುಮಾನ್

‘ಹನುಮಾನ್’ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಸಾಕಷ್ಟು ವಿಎಫ್​ಎಕ್ಸ್ ಇದೆ. ಈ ಸಿನಿಮಾದ ಫೈನಲ್ ಕಾಪಿ ಈಗಾಗಲೇ ರೆಡಿ ಇದೆ. ಈ ಚಿತ್ರದಲ್ಲಿ ಆಧುನಿಕ ಕಥೆಯ ಜೊತೆಗೆ ಪುರಾಣದ ಕಥೆಯನ್ನು ಬೆರೆಸಲಾಗಿದೆ. ಟ್ರೇಲರ್ ನೋಡಿದವರಿಗೆ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.  ಜನವರಿ 12ರಂದು ಸಿನಿಮಾ ರಿಲೀಸ್ ಆಗಲಿದೆ.

ಸೈಂಧವ್

ದಗ್ಗುಬಾಟಿ ವೆಂಕಟೇಶ್ ನಟನೆಯ ‘ಸೈಂಧವ್’ ಸಿನಿಮಾದ ಫೈನಲ್ ಕಾಪಿ ರೆಡಿ ಇದೆ. ಈ ಚಿತ್ರವನ್ನು ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಜನವರಿ 13ರಂದು ರಿಲೀಸ್ ಆಗಲಿದೆ. ಸಾಮಾನ್ಯವಾಗಿ ಸಿನಿಮಾಗಳು ಶುಕ್ರವಾರ ರಿಲೀಸ್ ಮಾಡೋದು ವಾಡಿಕೆ. ಆದರೆ, ‘ಸೈಂಧವ್’ ಸಿನಿಮಾ ಶನಿವಾರ ಬಿಡುಗಡೆ ಆಗುತ್ತಿದೆ.

ಈಗಲ್

ರವಿತೇಜ ಅವರು ಮಾಸ್ ಸಿನಿಮಾಗಳ ಮೂಲಕ ಗಮನ ಸೆಳೆಯುತ್ತಾರೆ. ಅವರು ‘ಈಗಲ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಚಿತ್ರ ಕೂಡ ಶನಿವಾರ (ಜನವರಿ 13) ರಿಲೀಸ್ ಆಗುತ್ತಿದೆ. ಈ ಚಿತ್ರದ ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ನಾ ಸಾಮಿ ರಂಗ

ನಾಗಾರ್ಜುನ ಅವರು ಇತ್ತೀಚೆಗೆ ದೊಡ್ಡ ಗೆಲುವು ಕಂಡಿಲ್ಲ. ‘ನಾ ಸಾಮಿ ರಂಗ’ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ. ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಟಿಸಿದ್ದಾರೆ ಎಂಬ ಕಾರಣಕ್ಕೆ ಕನ್ನಡಿಗರೂ ಈ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ರಿಲೀಸ್ ದಿನಾಂಕ ಇನ್ನೂ ಫೈನಲ್ ಆಗಿಲ್ಲ. ಸಿನಿಮಾ ಬಿಡುಗಡೆ ಮುಂದಕ್ಕೆ ಹೋದರೂ ಅಚ್ಚರಿ ಏನಿಲ್ಲ

ಕ್ಯಾಪ್ಟನ್ ಮಿಲ್ಲರ್

ತಮಿಳು ನಟ ಧನುಷ್ ಅವರು ವಿವಿಧ ರೀತಿಯ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸ್ವತಂತ್ರ ಪೂರ್ವದ ಕಥೆಯನ್ನು ಚಿತ್ರ ಹೊಂದಿದೆ. ಕನ್ನಡದ ಶಿವರಾಜ್​ಕುಮಾರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ. ಈ ಚಿತ್ರ ಸಂಕ್ರಾಂತಿ ಸಂದರ್ಭದಲ್ಲಿ ರಿಲೀಸ್ ಆಗುತ್ತಿದ್ದು, ದಿನಾಂಕ ಇನ್ನೂ ನಿಗದಿ ಆಗಿಲ್ಲ.

ಮೆರಿ ಕ್ರಿಸ್​ಮಸ್

ಕತ್ರಿನಾ ಕೈಫ್ ಹಾಗೂ ವಿಜಯ್ ಸೇತುಪತಿ ಇದೇ ಮೊದಲ ಬಾರಿಗೆ ‘ಮೆರಿ ಕ್ರಿಸ್​ಮಸ್​’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾ ಕ್ರಿಸ್​ಮಸ್ ಸಂದರ್ಭದಲ್ಲಿ ರಿಲೀಸ್ ಆಗಬೇಕಿತ್ತು. ‘ಡಂಕಿ’ ಹಾಗೂ ‘ಸಲಾರ್’ ಸಿನಿಮಾ ಮಧ್ಯೆ ಸಿಕ್ಕಿ ಒದ್ದಾಡುವುದು ಬೇಡ ಎನ್ನುವ ಕಾರಣಕ್ಕೆ ತಂಡ ಚಿತ್ರದ ರಿಲೀಸ್ ದಿನಾಂಕವನ್ನು ಜನವರಿ 12ಕ್ಕೆ ಮುಂದೂಡಿಕೊಂಡಿದೆ.

ಇದನ್ನೂ ಓದಿ: ಕತ್ರಿನಾ ಕೈಫ್ ಮನೆಯಲ್ಲಿ ಅದ್ದೂರಿ ದೀಪಾವಳಿ ಆಚರಣೆ

ಉಳಿದ ಸಿನಿಮಾಗಳು

ರಜನಿಕಾಂತ್ ನಟನೆಯ ‘ಲಾಲ್ ಸಲಾಮ್’ ಸಿನಿಮಾ ಸಂಕ್ರಾಂತಿಗೆ ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾದ ಕೆಲಸ ಪೂರ್ಣಗೊಂಡಿಲ್ಲ ಎನ್ನಲಾಗಿದೆ. ಈ ಚಿತ್ರದ ಹಾರ್ಡ್​ ಡಿಸ್ಕ್ ಕಳೆದು ಹೋಗಿದೆ ಎನ್ನುವ ಸುದ್ದಿ ಕೂಡ ಹರಿದಾಡಿತ್ತು. ‘ಮಿಷನ್ ಚಾಪ್ಟರ್ 1’, ‘ಅಯಲಾನ್’ ಮೊದಲಾದ ಚಿತ್ರಗಳು ಸಂಕ್ರಾಂತಿಗೆ ರಿಲೀಸ್ ಆಗುತ್ತಿವೆ. ಈ ಪೈಕಿ ಯಾವ ಸಿನಿಮಾ ಗೆಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:04 am, Sat, 30 December 23

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ