AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ.ಹಿ.ಪ್ರಾ. ಶಾಲೆ ರೀತಿ ಇನ್ನೊಂದು ಸಿನಿಮಾ ‘ಗುರಿ’; ಇದು ಸರ್ಕಾರಿ ಶಾಲೆಯ ಕಥೆ

ಸರ್ಕಾರಿ ಶಾಲೆ ಉಳಿಸಲು ಮಕ್ಕಳು ಹೋರಾಡುವ ಕಥೆಯನ್ನು ಇಟ್ಟುಕೊಂಡು ‘ಗುರಿ’ ಸಿನಿಮಾ ಮಾಡಲಾಗಿದೆ. ಈ ಚಿತ್ರದ ಹಾಡು ಮತ್ತು ಟೀಸರ್ ಬಿಡುಗಡೆ ಆಗಿದೆ. ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ‘ಎಂಆರ್‌ಟಿ ಮ್ಯೂಸಿಕ್’ ಮೂಲಕ ಚಿತ್ರದ ಹಾಡು ರಿಲೀಸ್ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ‘ಗುರಿ’ ತಂಡದವರು ಭಾಗಿಯಾಗಿದ್ದರು.

ಸ.ಹಿ.ಪ್ರಾ. ಶಾಲೆ ರೀತಿ ಇನ್ನೊಂದು ಸಿನಿಮಾ ‘ಗುರಿ’; ಇದು ಸರ್ಕಾರಿ ಶಾಲೆಯ ಕಥೆ
Guri Movie Team
ಮದನ್​ ಕುಮಾರ್​
|

Updated on: Jun 03, 2025 | 11:11 PM

Share

‘ಗುರಿ’ (Guri) ಎಂದ ಕೂಡಲೇ ಡಾ. ರಾಜ್​ಕುಮಾರ್ ನಟನೆಯ ಸಿನಿಮಾ ನೆನಪಾಗುತ್ತದೆ. ಈಗ ಅದೇ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಸಿದ್ಧವಾಗಿದೆ. ವಿಶೇಷ ಏನೆಂದರೆ, ಈ ಟೈಟಲ್​ಗೆ ‘ನನ್ನ ಶಾಲೆಯನ್ನು ಪ್ರೀತಿಸುತ್ತೇನೆ’ ಎಂಬ ಟ್ಯಾಗ್​ ಲೈನ್ ಇದೆ. ಸೆಲ್ವಂ ಮಾದಪ್ಪನ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಥೆ, ಚಿತ್ರಕಥೆ ಮತ್ತು ಛಾಯಾಗ್ರಹಣವನ್ನು ಕೂಡ ಸೆಲ್ವಂ ಮಾದಪ್ಪನ್ ಅವರೇ ನಿಭಾಯಿಸಿದ್ದಾರೆ. ‘ವಿಷ್ಣುದುರ್ಗಾ ಪ್ರೊಡಕ್ಷನ್’ ಮೂಲಕ ರಾಧಿಕಾ ಎಸ್.ಆರ್. ಮತ್ತು ಚಿತ್ರಲೇಖಾ ಎಸ್. ಅವರು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ (Kannada Cinema) ಹಾಡು ಮತ್ತು ಟೀಸರ್ ಬಿಡುಗಡೆ ಆಯಿತು.

ಲಹರಿ ವೇಲು ಅವರ ‘ಎಂಆರ್‌ಟಿ ಮ್ಯೂಸಿಕ್’ ಮೂಲಕ ‘ಗುರಿ’ ಸಿನಿಮಾದ ಸಾಂಗ್ ಬಿಡುಗಡೆ ಆಗಿದೆ. ಪಳನಿ ಡಿ. ಸೇನಾಪತಿ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಚಿತ್ರ ಪ್ರಮುಖ ಪಾತ್ರಗಳಲ್ಲಿ ಮಹಾನಿಧಿ, ಜೀವಿತ್‌ ಭೂಷಣ್, ಅಚ್ಯುತ್ ಕುಮಾರ್, ಜಯಶ್ರೀ, ಉಗ್ರಂ ಮಂಜು, ಸಂದೀಪ್‌ ಮಲಾನಿ, ಮನೋಹರ್ ಮುಂತಾದವರು ನಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಲ್ಲರೂ ಭಾಗಿಯಾಗಿದ್ದರು.

ಅಂದಹಾಗೆ, ಇದು ನೈಜ ಘಟನೆ ಆಧಾರಿತ ಸಿನಿಮಾ ಎಂದು ನಿರ್ದೇಶಕ ಸೆಲ್ವಂ ಮಾದಪ್ಪನ್ ಹೇಳಿದ್ದಾರೆ. ಕೋಲಾರದ ತೇರಳ್ಳಿ ಬೆಟ್ಟದ ಕಡೆ ಹೋಗಿದ್ದಾಗ ಅಲ್ಲಿನ ಸರ್ಕಾರಿ ಶಾಲೆಯನ್ನು ಮುಚ್ಚಲಾಗಿತ್ತು. ಸ್ಥಳೀಯರನ್ನು ವಿಚಾರಿಸಿದಾಗ ನಿರ್ದೇಶಕರಿಗೆ ಕೆಲವು ಅಂಶಗಳು ಸಿಕ್ಕವು. ಅದನ್ನೇ ಇಟ್ಟುಕೊಂಡು ‘ಗುರಿ’ ಸಿನಿಮಾ ಮಾಡಲಾಗಿದೆ.

ಇದನ್ನೂ ಓದಿ
Image
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆ, ನಟ ಜಗ್ಗೇಶ್​ರಿಂದ ಪಾಠ
Image
ರಾಜ್ಯಸಭೆಗೆ ಕಮಲ್ ಹಾಸನ್; ಮೇಲ್ಮನೆ ಪ್ರವೇಶಕ್ಕೆ ನಾಮ ನಿರ್ದೇಶನ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
ಸೋನು ನಿಗಮ್ ಬೆನ್ನಲ್ಲೇ ಕಮಲ್ ಹಾಸನ್ ವಿವಾದ: ಕೆರಳಿ ಕೆಂಡವಾದ ಕನ್ನಡಿಗರು

‘ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಹಾಗೂ ಖಾಸಗಿ ಶಾಲೆಯ ಸಂಘರ್ಷ ಮುಂತಾದವು ಈ ಸಿನಿಮಾದಲ್ಲಿವೆ. ಸರ್ಕಾರಿ ಶಾಲೆ ಮುಚ್ಚುವ ಹಂತ ಬರುತ್ತದೆ. ಆಗ 3ನೇ ತರಗತಿಯ ಇಬ್ಬರು ಬುದ್ಧಿವಂತ ವಿದ್ಯಾರ್ಥಿಗಳು ಹೋರಾಟ ಮಾಡುತ್ತಾರೆ’ ಎಂದು ಸಿನಿಮಾದ ಕಥೆಯ ಬಗ್ಗೆ ನಿರ್ದೇಶಕರು ಮಾಹಿತಿ ನೀಡಿದರು. ಸೂಪರ್ ಹಿಟ್ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸಿನಿಮಾದಲ್ಲಿ ಕೂಡ ಇದೇ ರೀತಿಯ ಕಹಾನಿ ಇತ್ತು. ಸರ್ಕಾರಿ ಶಾಲೆಯ ಉಳಿವಿಗಾಗಿ ಮಕ್ಕಳು ಪ್ರಯತ್ನಿಸುವ ಕಥೆ ಈ ಸಿನಿಮಾದಲ್ಲಿದೆ.

ಇದನ್ನೂ ಓದಿ: ಯೂಟ್ಯೂಬ್​ನಲ್ಲಿ ಉಚಿತವಾಗಿ ಸಿನಿಮಾ ತೋರಿಸ್ತೀನಿ: ಆಮಿರ್ ಖಾನ್ ಘೋಷಣೆ

ಟಿ.ಎಸ್. ನಾಗಾಭರಣ, ಪವನ್‌ ಕುಮಾರ್, ಅವಿನಾಶ್, ಚಂದ್ರಪ್ರಭಾ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಕೆ.ಎಂ. ಪ್ರಕಾಶ್ ಸಂಕಲನ ಮಾಡಿದ್ದಾರೆ. ಅರವಿಂದ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ಕೋಲಾರ, ತೇರಳ್ಳಿ ಬೆಟ್ಟ ಮುಂತಾದೆಡೆ ಶೂಟಿಂಗ್ ಮಾಡಲಾಗಿದೆ. ಚಿತ್ರತಂಡಕ್ಕೆ ಲಹರಿ ವೇಲು ಅವರು ಶುಭ ಕೋರಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ