AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನನ್ನು ತಂದು ಕೊಡೋಕಾಗಲ್ಲ ಆದರೆ, ಅವರ ಕಣ್ಣೀರು ಒರೆಸುತ್ತೇವೆ; ಗುರು ದೇಶಪಾಂಡೆ ಪತ್ನಿ ಪ್ರತೀಕ್ಷಾ

ರಾಮನಗರ ತಾಲೂಕಿನ ಜೋಗನಪಾಳ್ಯದ ಬಳಿ ಸೋಮವಾರ (ಆ.9) ಈ ಅವಘಡ ಸಂಭವಿಸಿತ್ತು. ಘಟನೆ ಬಳಿಕ ನಿರ್ಮಾಪಕ ಗುರು ದೇಶಪಾಂಡೆ ಪರಾರಿ ಆಗಿದ್ದಾರೆ.

ಮಗನನ್ನು ತಂದು ಕೊಡೋಕಾಗಲ್ಲ ಆದರೆ, ಅವರ ಕಣ್ಣೀರು ಒರೆಸುತ್ತೇವೆ; ಗುರು ದೇಶಪಾಂಡೆ ಪತ್ನಿ ಪ್ರತೀಕ್ಷಾ
ನಿರ್ಮಾಪಕ ಗುರು ದೇಶಪಾಂಡೆ, ಮೃತ ಫೈಟರ್​ ವಿವೇಕ್​
TV9 Web
| Edited By: |

Updated on: Aug 11, 2021 | 7:33 PM

Share

ಅಜಯ್​ ರಾವ್ ಮತ್ತು ರಚಿತಾ ರಾಮ್  ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದ ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಫೈಟರ್​ ವಿವೇಕ್​ ಮೃತಪಟ್ಟ ಬಳಿಕ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಪರಾರಿ ಆಗಿದ್ದಾರೆ. ಈ ಬೆನ್ನಲ್ಲೇ ಅವರ ಪತ್ನಿ ಪ್ರತೀಕ್ಷಾ ಅವರು ಸುದ್ದಿಗೋಷ್ಠಿ ನಡೆಸಿದ್ದು, ಮೃತರ ಕುಟುಂಬದ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

‘ನಮ್ಮ ಪ್ರೊಡಕ್ಷನ್ ಹೌಸ್​​ನಲ್ಲಿ ಒಂದು ಅವಘಡ ಸಂಭವಿಸಿದೆ. ಅವರಿಗೆ ಮಗನನ್ನು ತಂದು ಕೊಡೋಕೆ ಸಾಧ್ಯವಿಲ್ಲ. ಆದರೆ, ಅವರ ಕಣ್ಣೀರು ಒರೆಸುವ ಕೆಲಸವನ್ನು ನಾವು ಮಾಡುತ್ತೇವೆ. ಮೃತ ವಿವೇಕ್​ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡೋದಾಗಿ ತೀರ್ಮಾನಿಸಿದ್ದೇವೆ. ವಿವೇಕ್ ಕುಟುಂಬಕ್ಕೆ ಈಗ 5 ಲಕ್ಷ ಪರಿಹಾರ ಚೆಕ್​ ನೀಡುತ್ತೇವೆ. ಮುಂದಿನ ದಿನಗಳಲ್ಲಿ ಮತ್ತೆ 5 ಲಕ್ಷ ರೂ. ಪರಿಹಾರ ಕೊಡುತ್ತೇವೆ’ ಎಂದಿದ್ದಾರೆ ಪ್ರತೀಕ್ಷಾ.

ರಾಮನಗರ ತಾಲೂಕಿನ ಜೋಗನಪಾಳ್ಯದ ಬಳಿ ಸೋಮವಾರ (ಆ.9) ಈ ಅವಘಡ ಸಂಭವಿಸಿತ್ತು. ಘಟನೆ ಬಳಿಕ ನಿರ್ಮಾಪಕ ಗುರು ದೇಶಪಾಂಡೆ ಪರಾರಿ ಆಗಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಗುರು ದೇಶಪಾಂಡೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಈ ಮಧ್ಯೆ ಅವರ ಪತ್ನಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಘಟನೆ ನಡೆದು ಒಂದು ದಿನ ಕಳೆದ ಬಳಿಕ ರಚಿತಾ ರಾಮ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿವೇಕ್​ಗೆ ಶ್ರದ್ಧಾಂಜಲಿ ಅರ್ಪಿಸಿದ್ದರು. ‘ವಿದ್ಯುತ್​ ಅವಘಡದಿಂದ ಸಾವನ್ನಪಿದ ಫೈಟರ್​ ವಿವೇಕ್​ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ’ ಎಂದು ರಚಿತಾ ಪೋಸ್ಟ್​ ಮಾಡಿದ್ದರು. ಆದರೆ ಇಷ್ಟು ಮಾತ್ರದಿಂದ ಜನರು ಸಮಾಧಾನ ಆಗಿಲ್ಲ. ಮೃತ ವಿವೇಕ್​ ಕುಟುಂಬಕ್ಕೆ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ರಂಜಿತ್​ ಅವರಿಗೆ ಹಣದ ಸಹಾಯ ಮಾಡಿ ಎಂದು ಜನರು ಒತ್ತಾಯಿಸಿದ್ದರು.

ಇದನ್ನೂ ಓದಿ: ಫೈಟರ್​ ವಿವೇಕ್​ ಸಾವಿಗೆ ರಚಿತಾ ರಾಮ್ ಶ್ರದ್ಧಾಂಜಲಿ; ಓಂ ಶಾಂತಿ ಎನ್ನುವ ಬದಲು ಸಹಾಯ ಮಾಡಿ ಎಂದ ಜನರು

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!