AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನನ್ನು ತಂದು ಕೊಡೋಕಾಗಲ್ಲ ಆದರೆ, ಅವರ ಕಣ್ಣೀರು ಒರೆಸುತ್ತೇವೆ; ಗುರು ದೇಶಪಾಂಡೆ ಪತ್ನಿ ಪ್ರತೀಕ್ಷಾ

ರಾಮನಗರ ತಾಲೂಕಿನ ಜೋಗನಪಾಳ್ಯದ ಬಳಿ ಸೋಮವಾರ (ಆ.9) ಈ ಅವಘಡ ಸಂಭವಿಸಿತ್ತು. ಘಟನೆ ಬಳಿಕ ನಿರ್ಮಾಪಕ ಗುರು ದೇಶಪಾಂಡೆ ಪರಾರಿ ಆಗಿದ್ದಾರೆ.

ಮಗನನ್ನು ತಂದು ಕೊಡೋಕಾಗಲ್ಲ ಆದರೆ, ಅವರ ಕಣ್ಣೀರು ಒರೆಸುತ್ತೇವೆ; ಗುರು ದೇಶಪಾಂಡೆ ಪತ್ನಿ ಪ್ರತೀಕ್ಷಾ
ನಿರ್ಮಾಪಕ ಗುರು ದೇಶಪಾಂಡೆ, ಮೃತ ಫೈಟರ್​ ವಿವೇಕ್​
TV9 Web
| Edited By: |

Updated on: Aug 11, 2021 | 7:33 PM

Share

ಅಜಯ್​ ರಾವ್ ಮತ್ತು ರಚಿತಾ ರಾಮ್  ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದ ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಫೈಟರ್​ ವಿವೇಕ್​ ಮೃತಪಟ್ಟ ಬಳಿಕ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಪರಾರಿ ಆಗಿದ್ದಾರೆ. ಈ ಬೆನ್ನಲ್ಲೇ ಅವರ ಪತ್ನಿ ಪ್ರತೀಕ್ಷಾ ಅವರು ಸುದ್ದಿಗೋಷ್ಠಿ ನಡೆಸಿದ್ದು, ಮೃತರ ಕುಟುಂಬದ ಕಣ್ಣೀರು ಒರೆಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

‘ನಮ್ಮ ಪ್ರೊಡಕ್ಷನ್ ಹೌಸ್​​ನಲ್ಲಿ ಒಂದು ಅವಘಡ ಸಂಭವಿಸಿದೆ. ಅವರಿಗೆ ಮಗನನ್ನು ತಂದು ಕೊಡೋಕೆ ಸಾಧ್ಯವಿಲ್ಲ. ಆದರೆ, ಅವರ ಕಣ್ಣೀರು ಒರೆಸುವ ಕೆಲಸವನ್ನು ನಾವು ಮಾಡುತ್ತೇವೆ. ಮೃತ ವಿವೇಕ್​ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡೋದಾಗಿ ತೀರ್ಮಾನಿಸಿದ್ದೇವೆ. ವಿವೇಕ್ ಕುಟುಂಬಕ್ಕೆ ಈಗ 5 ಲಕ್ಷ ಪರಿಹಾರ ಚೆಕ್​ ನೀಡುತ್ತೇವೆ. ಮುಂದಿನ ದಿನಗಳಲ್ಲಿ ಮತ್ತೆ 5 ಲಕ್ಷ ರೂ. ಪರಿಹಾರ ಕೊಡುತ್ತೇವೆ’ ಎಂದಿದ್ದಾರೆ ಪ್ರತೀಕ್ಷಾ.

ರಾಮನಗರ ತಾಲೂಕಿನ ಜೋಗನಪಾಳ್ಯದ ಬಳಿ ಸೋಮವಾರ (ಆ.9) ಈ ಅವಘಡ ಸಂಭವಿಸಿತ್ತು. ಘಟನೆ ಬಳಿಕ ನಿರ್ಮಾಪಕ ಗುರು ದೇಶಪಾಂಡೆ ಪರಾರಿ ಆಗಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಗುರು ದೇಶಪಾಂಡೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಈ ಮಧ್ಯೆ ಅವರ ಪತ್ನಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಘಟನೆ ನಡೆದು ಒಂದು ದಿನ ಕಳೆದ ಬಳಿಕ ರಚಿತಾ ರಾಮ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿವೇಕ್​ಗೆ ಶ್ರದ್ಧಾಂಜಲಿ ಅರ್ಪಿಸಿದ್ದರು. ‘ವಿದ್ಯುತ್​ ಅವಘಡದಿಂದ ಸಾವನ್ನಪಿದ ಫೈಟರ್​ ವಿವೇಕ್​ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ’ ಎಂದು ರಚಿತಾ ಪೋಸ್ಟ್​ ಮಾಡಿದ್ದರು. ಆದರೆ ಇಷ್ಟು ಮಾತ್ರದಿಂದ ಜನರು ಸಮಾಧಾನ ಆಗಿಲ್ಲ. ಮೃತ ವಿವೇಕ್​ ಕುಟುಂಬಕ್ಕೆ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ರಂಜಿತ್​ ಅವರಿಗೆ ಹಣದ ಸಹಾಯ ಮಾಡಿ ಎಂದು ಜನರು ಒತ್ತಾಯಿಸಿದ್ದರು.

ಇದನ್ನೂ ಓದಿ: ಫೈಟರ್​ ವಿವೇಕ್​ ಸಾವಿಗೆ ರಚಿತಾ ರಾಮ್ ಶ್ರದ್ಧಾಂಜಲಿ; ಓಂ ಶಾಂತಿ ಎನ್ನುವ ಬದಲು ಸಹಾಯ ಮಾಡಿ ಎಂದ ಜನರು

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು