AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟರ್​ನಲ್ಲಿ ದರ್ಶನ್​​ ಜೊತೆ ಸಪ್ಲೈಯರ್​ ಹುಡುಗನ ಫೋಟೋ; ಅಚ್ಚರಿ ಮೂಡಿಸಿದ ‘ಝೂ’ ಚಿತ್ರ

‘ಝೂ’ ಚಿತ್ರದ ಮೂಲಕ ಡಿ ಬಾಸ್​ ದರ್ಶನ್​ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದು ಚಿತ್ರತಂಡ ಹೇಳಿಕೊಂಡಿದೆ. ಮೋಷನ್​ ಪೋಸ್ಟರ್​ನಲ್ಲಿ ಹಲವು ಅಂಶಗಳು ಗಮನ ಸೆಳೆಯುತ್ತಿವೆ.

ಪೋಸ್ಟರ್​ನಲ್ಲಿ ದರ್ಶನ್​​ ಜೊತೆ ಸಪ್ಲೈಯರ್​ ಹುಡುಗನ ಫೋಟೋ; ಅಚ್ಚರಿ ಮೂಡಿಸಿದ ‘ಝೂ’ ಚಿತ್ರ
ಪೋಸ್ಟರ್​ನಲ್ಲಿ ದರ್ಶನ್​​ ಜೊತೆ ಸಪ್ಲೈಯರ್​ ಹುಡುಗನ ಫೋಟೋ
TV9 Web
| Edited By: |

Updated on: Jul 25, 2021 | 12:35 PM

Share

ನಟ ದರ್ಶನ್​ (Darshan) ಅವರಿಗೆ ಸಿನಿಮಾ ಅಲ್ಲದೆ ಇನ್ನೂ ಹಲವು ಕ್ಷೇತ್ರಗಳಲ್ಲಿ ಆಸಕ್ತಿ ಇದೆ. ಕೃಷಿ, ಹೈನುಗಾರಿಕೆ, ಫೋಟೋಗ್ರಫಿ ಮುಂತಾದ ವಿಷಯಗಳ ಬಗ್ಗೆ ಡಿ ಬಾಸ್​ (D Boss) ಆಸಕ್ತಿ ಇಟ್ಟುಕೊಂಡಿದ್ದಾರೆ. ಅದೇ ರೀತಿ ಅವರಿಗೆ ಪರಿಸರ ಮತ್ತು ಪ್ರಾಣಿಗಳು ಎಂದರೆ ಸಖತ್​ ಪ್ರೀತಿ. ಅದನ್ನು ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಅದೇ ಕಾರಣಕ್ಕಾಗಿ ಅವರು ಇತ್ತೀಚೆಗೆ ಕರ್ನಾಟಕದಲ್ಲಿನ ಮೃಗಾಲಯಗಳ ಕಷ್ಟಕ್ಕೆ ಮಿಡಿದಿದ್ದರು. ಲಾಕ್​ಡೌನ್​ನಿಂದಾಗಿ ಸಂಕಷ್ಟ ಎದುರಿಸುತ್ತಿರುವ ಝೂಗಳಿಗೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ದರ್ಶನ್​ ಮನವಿ ಮಾಡಿಕೊಂಡಿದ್ದರು. ಅಚ್ಚರಿ ಎಂದರೆ ‘ಝೂ’ (Zoo) ಎಂಬ ಶೀರ್ಷಿಕೆಯಲ್ಲೇ ಈಗೊಂದು ಸಿನಿಮಾ ಮೂಡಿಬರುತ್ತಿದೆ!

ಕನ್ನಡಲ್ಲಿ ರಾಜಾಹುಲಿ, ರುದ್ರತಾಂಡವ ಮುಂತಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಗುರು ದೇಶಪಾಂಡೆ ಅವರು ‘ಝೂ’ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆಗೆ ‘ಕೇರ್​ ಆಫ್​ ಡಿ ಬಾಸ್​’ ಎಂಬ ಅಡಿಬರಹ ಕೂಡ ಇದೆ. ಜು.25ರಂದು ಗುರು ದೇಶಪಾಂಡೆ ಅವರ ಜನ್ಮದಿನದ ಅಂಗವಾಗಿ ಈ ಸಿನಿಮಾದ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಆನಂದ್​ ಆಡಿಯೋ ಮೂಲಕ ಮೋಷನ್​ ಪೋಸ್ಟರ್​ ಹೊರಬಂದಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

‘ಝೂ’ ಚಿತ್ರದ ಮೂಲಕ ಡಿ ಬಾಸ್​ ದರ್ಶನ್​ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದು ಚಿತ್ರತಂಡ ಹೇಳಿಕೊಂಡಿದೆ. ಮೋಷನ್​ ಪೋಸ್ಟರ್​ನಲ್ಲಿ ಹಲವು ಅಂಶಗಳು ಗಮನ ಸೆಳೆಯುತ್ತಿವೆ. ದರ್ಶನ್​ ಫೋಟೋ ಹಿನ್ನೆಲೆಯಲ್ಲಿ ಇದೆ. ಒಬ್ಬ ಸಪ್ಲೈಯರ್​ ಹುಡುಗ ಟೀ ಕೊಡಲು ಬರುತ್ತಿರುವ ಫೋಟೋ ಕೂಡ ಹೈಲೈಟ್ ಆಗಿದೆ. ನವಿಲಿನ ಚಿತ್ರ ಸಹ ಕುತೂಹಲ ಮೂಡಿಸುವಂತಿದೆ. ಒಟ್ಟಾರೆ ಈ ಸಿನಿಮಾ ಮೂಲಕ ಗುರು ದೇಶಪಾಂಡೆ ಯಾವ ಕಥೆ ಹೇಳಲಿದ್ದಾರೆ ಎಂಬ ಕೌತುಕದ ಪ್ರಶ್ನೆ ಸಿನಿಪ್ರಿಯರ ಮನದಲ್ಲಿ ಹುಟ್ಟಿಕೊಂಡಿದೆ.

ಈ ಚಿತ್ರಕ್ಕೆ ಕಥೆ ಬರೆದು ನಿರ್ಮಾಣ ಮಾಡುವುದರ ಜೊತೆಗೆ ಕ್ರಿಯೇಟಿವ್​ ಹೆಡ್​ ಆಗಿಯೂ ಗುರು ದೇಶಪಾಂಡೆ ಕೆಲಸ ಮಾಡುತ್ತಿದ್ದಾರೆ. ಮಣಿಕಾಂತ್​ ಕದ್ರಿ ಸಂಗೀತ ನಿರ್ದೇಶನ, ಅಭಿಲಾಶ್​ ಛಾಯಾಗ್ರಹಣ ಮಾಡಲಿದ್ದಾರೆ. ಇತ್ತೀಚೆಗೆ ದರ್ಶನ್​ ಮತ್ತು ಇಂದ್ರಜಿತ್​ ಲಂಕೇಶ್​ ನಡುವೆ ದೊಡ್ಡ ವಿವಾದ ಆಗಿತ್ತು. ಈ ಜಟಾಪಟಿಯಲ್ಲಿ ಅನೇಕ ಸೆಲೆಬ್ರಿಟಿಗಳು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ದರ್ಶನ್​ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​

‘ನನ್ನ ಪ್ರೀತಿ, ನಂಬಿಕೆ, ಸ್ಫೂರ್ತಿಗೆ ಇನ್ನೊಂದು ಹೆಸರು ಡಿ ಬಾಸ್’; ದರ್ಶನ್​ ಬೆಂಬಲಕ್ಕೆ ನಿಂತ ಯುವ ನಟ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ