AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟರ್​ನಲ್ಲಿ ದರ್ಶನ್​​ ಜೊತೆ ಸಪ್ಲೈಯರ್​ ಹುಡುಗನ ಫೋಟೋ; ಅಚ್ಚರಿ ಮೂಡಿಸಿದ ‘ಝೂ’ ಚಿತ್ರ

‘ಝೂ’ ಚಿತ್ರದ ಮೂಲಕ ಡಿ ಬಾಸ್​ ದರ್ಶನ್​ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದು ಚಿತ್ರತಂಡ ಹೇಳಿಕೊಂಡಿದೆ. ಮೋಷನ್​ ಪೋಸ್ಟರ್​ನಲ್ಲಿ ಹಲವು ಅಂಶಗಳು ಗಮನ ಸೆಳೆಯುತ್ತಿವೆ.

ಪೋಸ್ಟರ್​ನಲ್ಲಿ ದರ್ಶನ್​​ ಜೊತೆ ಸಪ್ಲೈಯರ್​ ಹುಡುಗನ ಫೋಟೋ; ಅಚ್ಚರಿ ಮೂಡಿಸಿದ ‘ಝೂ’ ಚಿತ್ರ
ಪೋಸ್ಟರ್​ನಲ್ಲಿ ದರ್ಶನ್​​ ಜೊತೆ ಸಪ್ಲೈಯರ್​ ಹುಡುಗನ ಫೋಟೋ
TV9 Web
| Edited By: |

Updated on: Jul 25, 2021 | 12:35 PM

Share

ನಟ ದರ್ಶನ್​ (Darshan) ಅವರಿಗೆ ಸಿನಿಮಾ ಅಲ್ಲದೆ ಇನ್ನೂ ಹಲವು ಕ್ಷೇತ್ರಗಳಲ್ಲಿ ಆಸಕ್ತಿ ಇದೆ. ಕೃಷಿ, ಹೈನುಗಾರಿಕೆ, ಫೋಟೋಗ್ರಫಿ ಮುಂತಾದ ವಿಷಯಗಳ ಬಗ್ಗೆ ಡಿ ಬಾಸ್​ (D Boss) ಆಸಕ್ತಿ ಇಟ್ಟುಕೊಂಡಿದ್ದಾರೆ. ಅದೇ ರೀತಿ ಅವರಿಗೆ ಪರಿಸರ ಮತ್ತು ಪ್ರಾಣಿಗಳು ಎಂದರೆ ಸಖತ್​ ಪ್ರೀತಿ. ಅದನ್ನು ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಅದೇ ಕಾರಣಕ್ಕಾಗಿ ಅವರು ಇತ್ತೀಚೆಗೆ ಕರ್ನಾಟಕದಲ್ಲಿನ ಮೃಗಾಲಯಗಳ ಕಷ್ಟಕ್ಕೆ ಮಿಡಿದಿದ್ದರು. ಲಾಕ್​ಡೌನ್​ನಿಂದಾಗಿ ಸಂಕಷ್ಟ ಎದುರಿಸುತ್ತಿರುವ ಝೂಗಳಿಗೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ದರ್ಶನ್​ ಮನವಿ ಮಾಡಿಕೊಂಡಿದ್ದರು. ಅಚ್ಚರಿ ಎಂದರೆ ‘ಝೂ’ (Zoo) ಎಂಬ ಶೀರ್ಷಿಕೆಯಲ್ಲೇ ಈಗೊಂದು ಸಿನಿಮಾ ಮೂಡಿಬರುತ್ತಿದೆ!

ಕನ್ನಡಲ್ಲಿ ರಾಜಾಹುಲಿ, ರುದ್ರತಾಂಡವ ಮುಂತಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಗುರು ದೇಶಪಾಂಡೆ ಅವರು ‘ಝೂ’ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆಗೆ ‘ಕೇರ್​ ಆಫ್​ ಡಿ ಬಾಸ್​’ ಎಂಬ ಅಡಿಬರಹ ಕೂಡ ಇದೆ. ಜು.25ರಂದು ಗುರು ದೇಶಪಾಂಡೆ ಅವರ ಜನ್ಮದಿನದ ಅಂಗವಾಗಿ ಈ ಸಿನಿಮಾದ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಆನಂದ್​ ಆಡಿಯೋ ಮೂಲಕ ಮೋಷನ್​ ಪೋಸ್ಟರ್​ ಹೊರಬಂದಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

‘ಝೂ’ ಚಿತ್ರದ ಮೂಲಕ ಡಿ ಬಾಸ್​ ದರ್ಶನ್​ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದು ಚಿತ್ರತಂಡ ಹೇಳಿಕೊಂಡಿದೆ. ಮೋಷನ್​ ಪೋಸ್ಟರ್​ನಲ್ಲಿ ಹಲವು ಅಂಶಗಳು ಗಮನ ಸೆಳೆಯುತ್ತಿವೆ. ದರ್ಶನ್​ ಫೋಟೋ ಹಿನ್ನೆಲೆಯಲ್ಲಿ ಇದೆ. ಒಬ್ಬ ಸಪ್ಲೈಯರ್​ ಹುಡುಗ ಟೀ ಕೊಡಲು ಬರುತ್ತಿರುವ ಫೋಟೋ ಕೂಡ ಹೈಲೈಟ್ ಆಗಿದೆ. ನವಿಲಿನ ಚಿತ್ರ ಸಹ ಕುತೂಹಲ ಮೂಡಿಸುವಂತಿದೆ. ಒಟ್ಟಾರೆ ಈ ಸಿನಿಮಾ ಮೂಲಕ ಗುರು ದೇಶಪಾಂಡೆ ಯಾವ ಕಥೆ ಹೇಳಲಿದ್ದಾರೆ ಎಂಬ ಕೌತುಕದ ಪ್ರಶ್ನೆ ಸಿನಿಪ್ರಿಯರ ಮನದಲ್ಲಿ ಹುಟ್ಟಿಕೊಂಡಿದೆ.

ಈ ಚಿತ್ರಕ್ಕೆ ಕಥೆ ಬರೆದು ನಿರ್ಮಾಣ ಮಾಡುವುದರ ಜೊತೆಗೆ ಕ್ರಿಯೇಟಿವ್​ ಹೆಡ್​ ಆಗಿಯೂ ಗುರು ದೇಶಪಾಂಡೆ ಕೆಲಸ ಮಾಡುತ್ತಿದ್ದಾರೆ. ಮಣಿಕಾಂತ್​ ಕದ್ರಿ ಸಂಗೀತ ನಿರ್ದೇಶನ, ಅಭಿಲಾಶ್​ ಛಾಯಾಗ್ರಹಣ ಮಾಡಲಿದ್ದಾರೆ. ಇತ್ತೀಚೆಗೆ ದರ್ಶನ್​ ಮತ್ತು ಇಂದ್ರಜಿತ್​ ಲಂಕೇಶ್​ ನಡುವೆ ದೊಡ್ಡ ವಿವಾದ ಆಗಿತ್ತು. ಈ ಜಟಾಪಟಿಯಲ್ಲಿ ಅನೇಕ ಸೆಲೆಬ್ರಿಟಿಗಳು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ದರ್ಶನ್​ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​

‘ನನ್ನ ಪ್ರೀತಿ, ನಂಬಿಕೆ, ಸ್ಫೂರ್ತಿಗೆ ಇನ್ನೊಂದು ಹೆಸರು ಡಿ ಬಾಸ್’; ದರ್ಶನ್​ ಬೆಂಬಲಕ್ಕೆ ನಿಂತ ಯುವ ನಟ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ