AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಬಹುಬೇಡಿಕೆಯ ಡೈಲಾಗ್​ ರೈಟರ್​​ ಗುರು ಕಶ್ಯಪ್​ ನಿಧನ; ಕಂಬನಿ ಮಿಡಿಯುತ್ತಿರುವ ಸ್ಯಾಂಡಲ್​ವುಡ್​

ಚಂದನವನದಲ್ಲಿ ಅನೇಕ ಸಿನಿಮಾಗಳಿಗೆ ಡೈಲಾಗ್​ ಬರೆಯುತ್ತಿದ್ದ ಗುರು ಕಶ್ಯಪ್​ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಸೋಮವಾರ (ಸೆ.13) ರಾತ್ರಿ ಅವರು ಇಹಲೋಕ ತ್ಯಜಿಸಿದರು.

ಕನ್ನಡದ ಬಹುಬೇಡಿಕೆಯ ಡೈಲಾಗ್​ ರೈಟರ್​​ ಗುರು ಕಶ್ಯಪ್​ ನಿಧನ; ಕಂಬನಿ ಮಿಡಿಯುತ್ತಿರುವ ಸ್ಯಾಂಡಲ್​ವುಡ್​
ಗುರು ಕಶ್ಯಪ್
TV9 Web
| Edited By: |

Updated on:Sep 14, 2021 | 9:09 AM

Share

ಕನ್ನಡದ ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್​ ಅವರು ಸೋಮವಾರ (ಸೆ.13) ರಾತ್ರಿ ನಿಧನರಾದರು. ಹೃದಯಾಘಾತದಿಂದ ಅವರು ಮೃತ್ತಪಟ್ಟರು ಎಂಬ ಮಾಹಿತಿ ಸಿಕ್ಕಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರು ಎಳೆದರು ಎನ್ನಲಾಗುತ್ತಿದೆ.  ಗಣೇಶ್​ ಅಭಿನಯದ ‘ಸುಂದರಾಂಗ ಜಾಣ’, ರಮೇಶ್​ ಅರವಿಂದ್​ ನಟನೆಯ ‘ಪುಷ್ಪಕ ವಿಮಾನ’, ಪ್ರಿಯಾಂಕಾ ಉಪೇಂದ್ರ ಅಭಿನಯದ ‘ದೇವಕಿ’ ಮುಂತಾದ ಸಿನಿಮಾಗಳಿಗೆ ಗುರು ಕಶ್ಯಪ್ ಸಂಭಾಷಣೆ ಬರೆದಿದ್ದರು. ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿಯುತ್ತಿದ್ದಾರೆ.

15ಕ್ಕೂ ಹೆಚ್ಚು ಸಿನಿಮಾಗಳಿಗೆ ಗುರು ಕಶ್ಯಪ್​ ಕೆಲಸ ಮಾಡಿದ್ದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ನಿಧನಕ್ಕೂ ಮುನ್ನ ಅನೇಕ ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದರು. ಡಾಲಿ ಧನಂಜಯ ನಟನೆಯ ‘ಮಾನ್ಸೂನ್​ ರಾಗ’, ಶಿವರಾಜ್​ಕುಮಾರ್​ ಅಭಿನಯದ ‘ಬೈರಾಗಿ’, ‘ವ್ಹೀಲ್​ ಚೇರ್​ ರೋಮಿಯೋ’ ಮುಂತಾದ ಸಿನಿಮಾಗಳಿಗೆ ಅವರು ಡೈಲಾಗ್​ ಬರೆಯುತ್ತಿದ್ದರು. ಆ ಸಿನಿಮಾಗಳು ತೆರೆಕಾಣುವುದಕ್ಕೂ ಮುನ್ನವೇ ಅವರು ನಿಧನರಾಗಿದ್ದಾರೆ. ಪತ್ನಿ ಮತ್ತು ಮಗಳನ್ನು ಗುರು ಕಶ್ಯಪ್​ ಅಗಲಿದ್ದಾರೆ.

ಗುರು ಕಶ್ಯಪ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ‘ಗುರು ದೇವರಂಥ ಮನುಷ್ಯ ಆಗಿದ್ದರು. ಅತ್ಯುತ್ತಮ ಸಂಭಾಷಣಕಾರನನ್ನು ಚಂದನವನ ಇಂದು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ‘ಪುಷ್ಪಕ ವಿಮಾನ’ ನಿರ್ದೇಶಕ ರವೀಂದ್ರನಾಥ್​ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

‘ಇದು ನಿಜಕ್ಕೂ ಶಾಕಿಂಗ್​. ಈ ಸತ್ಯವನ್ನು ಒಪ್ಪಿಕೊಳ್ಳಲು ಆಗುತ್ತಿಲ್ಲ. ಸದಾ ತಾಳ್ಮೆಯಿಂದ ನನ್ನ ಕಥೆಗಳನ್ನು ಕೇಳಿ, ಅವುಗಳಿಗೆ ಮೆಚ್ಚುಗೆ ಸೂಚಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಬರಹಗಳ ಫಸ್ಟ್​ ಡ್ರಾಫ್ಟ್​ ಓದುವುದನ್ನು ಮಿಸ್​ ಮಾಡಿಕೊಳ್ಳುತ್ತೇನೆ ಸರ್​’ ಎಂದು ನಟಿ ಆರೋಹಿ ನಾರಾಯಣ್​ ಪೋಸ್ಟ್​ ಮಾಡಿದ್ದಾರೆ.

‘ಗುರು ಕಶ್ಯಪ್​ ತುಂಬ ಪ್ರತಿಭಾವಂತ ವ್ಯಕ್ತಿ ಆಗಿದ್ದರು. ಕೆಲವೇ ದಿನಗಳ ಹಿಂದೆ ಅವರ ಜೊತೆ ಕೆಲಸ ಮಾಡಿದ್ದೆ. ಒಂದೊಳ್ಳೆಯ ಪ್ರತಿಭೆಯನ್ನು ನಾವು ಕಳೆದುಕೊಂಡೆವು. ಇದು ಶಾಕಿಂಗ್​. ಈ ಸುದ್ದಿ ಕೇಳಲು ಬೇಸರ ಆಗುತ್ತಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸಹೋದರನೇ’ ಎಂದು ‘ಶಿವಾಜಿ ಸುರತ್ಕಲ್​’ ನಿರ್ದೇಶಕ ಆಕಾಶ್​ ಶ್ರೀವತ್ಸ ಅವರು ಗುರು ಕಶ್ಯಪ್​ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:

‘ನೀನೂ ಸತ್ತು ಹೋಗು’: ಸಿದ್ದಾರ್ಥ್​ ಶುಕ್ಲಾ ನಿಧನದ ಬಳಿಕ ಕಿಡಿಗೇಡಿಗಳಿಂದ ನಟಿಗೆ ಮೆಸೇಜ್​; ಆಸ್ಪತ್ರೆಗೆ ದಾಖಲು

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

Published On - 8:35 am, Tue, 14 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ