AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಬಹುಬೇಡಿಕೆಯ ಡೈಲಾಗ್​ ರೈಟರ್​​ ಗುರು ಕಶ್ಯಪ್​ ನಿಧನ; ಕಂಬನಿ ಮಿಡಿಯುತ್ತಿರುವ ಸ್ಯಾಂಡಲ್​ವುಡ್​

ಚಂದನವನದಲ್ಲಿ ಅನೇಕ ಸಿನಿಮಾಗಳಿಗೆ ಡೈಲಾಗ್​ ಬರೆಯುತ್ತಿದ್ದ ಗುರು ಕಶ್ಯಪ್​ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಸೋಮವಾರ (ಸೆ.13) ರಾತ್ರಿ ಅವರು ಇಹಲೋಕ ತ್ಯಜಿಸಿದರು.

ಕನ್ನಡದ ಬಹುಬೇಡಿಕೆಯ ಡೈಲಾಗ್​ ರೈಟರ್​​ ಗುರು ಕಶ್ಯಪ್​ ನಿಧನ; ಕಂಬನಿ ಮಿಡಿಯುತ್ತಿರುವ ಸ್ಯಾಂಡಲ್​ವುಡ್​
ಗುರು ಕಶ್ಯಪ್
TV9 Web
| Updated By: ಮದನ್​ ಕುಮಾರ್​|

Updated on:Sep 14, 2021 | 9:09 AM

Share

ಕನ್ನಡದ ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್​ ಅವರು ಸೋಮವಾರ (ಸೆ.13) ರಾತ್ರಿ ನಿಧನರಾದರು. ಹೃದಯಾಘಾತದಿಂದ ಅವರು ಮೃತ್ತಪಟ್ಟರು ಎಂಬ ಮಾಹಿತಿ ಸಿಕ್ಕಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರು ಎಳೆದರು ಎನ್ನಲಾಗುತ್ತಿದೆ.  ಗಣೇಶ್​ ಅಭಿನಯದ ‘ಸುಂದರಾಂಗ ಜಾಣ’, ರಮೇಶ್​ ಅರವಿಂದ್​ ನಟನೆಯ ‘ಪುಷ್ಪಕ ವಿಮಾನ’, ಪ್ರಿಯಾಂಕಾ ಉಪೇಂದ್ರ ಅಭಿನಯದ ‘ದೇವಕಿ’ ಮುಂತಾದ ಸಿನಿಮಾಗಳಿಗೆ ಗುರು ಕಶ್ಯಪ್ ಸಂಭಾಷಣೆ ಬರೆದಿದ್ದರು. ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿಯುತ್ತಿದ್ದಾರೆ.

15ಕ್ಕೂ ಹೆಚ್ಚು ಸಿನಿಮಾಗಳಿಗೆ ಗುರು ಕಶ್ಯಪ್​ ಕೆಲಸ ಮಾಡಿದ್ದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ನಿಧನಕ್ಕೂ ಮುನ್ನ ಅನೇಕ ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದರು. ಡಾಲಿ ಧನಂಜಯ ನಟನೆಯ ‘ಮಾನ್ಸೂನ್​ ರಾಗ’, ಶಿವರಾಜ್​ಕುಮಾರ್​ ಅಭಿನಯದ ‘ಬೈರಾಗಿ’, ‘ವ್ಹೀಲ್​ ಚೇರ್​ ರೋಮಿಯೋ’ ಮುಂತಾದ ಸಿನಿಮಾಗಳಿಗೆ ಅವರು ಡೈಲಾಗ್​ ಬರೆಯುತ್ತಿದ್ದರು. ಆ ಸಿನಿಮಾಗಳು ತೆರೆಕಾಣುವುದಕ್ಕೂ ಮುನ್ನವೇ ಅವರು ನಿಧನರಾಗಿದ್ದಾರೆ. ಪತ್ನಿ ಮತ್ತು ಮಗಳನ್ನು ಗುರು ಕಶ್ಯಪ್​ ಅಗಲಿದ್ದಾರೆ.

ಗುರು ಕಶ್ಯಪ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ‘ಗುರು ದೇವರಂಥ ಮನುಷ್ಯ ಆಗಿದ್ದರು. ಅತ್ಯುತ್ತಮ ಸಂಭಾಷಣಕಾರನನ್ನು ಚಂದನವನ ಇಂದು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ‘ಪುಷ್ಪಕ ವಿಮಾನ’ ನಿರ್ದೇಶಕ ರವೀಂದ್ರನಾಥ್​ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

‘ಇದು ನಿಜಕ್ಕೂ ಶಾಕಿಂಗ್​. ಈ ಸತ್ಯವನ್ನು ಒಪ್ಪಿಕೊಳ್ಳಲು ಆಗುತ್ತಿಲ್ಲ. ಸದಾ ತಾಳ್ಮೆಯಿಂದ ನನ್ನ ಕಥೆಗಳನ್ನು ಕೇಳಿ, ಅವುಗಳಿಗೆ ಮೆಚ್ಚುಗೆ ಸೂಚಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಬರಹಗಳ ಫಸ್ಟ್​ ಡ್ರಾಫ್ಟ್​ ಓದುವುದನ್ನು ಮಿಸ್​ ಮಾಡಿಕೊಳ್ಳುತ್ತೇನೆ ಸರ್​’ ಎಂದು ನಟಿ ಆರೋಹಿ ನಾರಾಯಣ್​ ಪೋಸ್ಟ್​ ಮಾಡಿದ್ದಾರೆ.

‘ಗುರು ಕಶ್ಯಪ್​ ತುಂಬ ಪ್ರತಿಭಾವಂತ ವ್ಯಕ್ತಿ ಆಗಿದ್ದರು. ಕೆಲವೇ ದಿನಗಳ ಹಿಂದೆ ಅವರ ಜೊತೆ ಕೆಲಸ ಮಾಡಿದ್ದೆ. ಒಂದೊಳ್ಳೆಯ ಪ್ರತಿಭೆಯನ್ನು ನಾವು ಕಳೆದುಕೊಂಡೆವು. ಇದು ಶಾಕಿಂಗ್​. ಈ ಸುದ್ದಿ ಕೇಳಲು ಬೇಸರ ಆಗುತ್ತಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸಹೋದರನೇ’ ಎಂದು ‘ಶಿವಾಜಿ ಸುರತ್ಕಲ್​’ ನಿರ್ದೇಶಕ ಆಕಾಶ್​ ಶ್ರೀವತ್ಸ ಅವರು ಗುರು ಕಶ್ಯಪ್​ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:

‘ನೀನೂ ಸತ್ತು ಹೋಗು’: ಸಿದ್ದಾರ್ಥ್​ ಶುಕ್ಲಾ ನಿಧನದ ಬಳಿಕ ಕಿಡಿಗೇಡಿಗಳಿಂದ ನಟಿಗೆ ಮೆಸೇಜ್​; ಆಸ್ಪತ್ರೆಗೆ ದಾಖಲು

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

Published On - 8:35 am, Tue, 14 September 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!