Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎದ್ದೇಳು ಮಂಜುನಾಥ 2’ ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ, ನಿರ್ಮಾಪಕರು ಕೆಂಡ

Eddelu Manjunatha 2: ನಿರ್ದೇಶಕ ಗುರುಪ್ರಸಾದ್ ನಟಿಸಿದ್ದ ಕೊನೆಯ ಸಿನಿಮಾ ‘ಎದ್ದೇಳು ಮಂಜುನಾಥ 2’ ಸಿನಿಮಾ ಬಿಡುಗಡೆಗೆ ತಡೆ ತರಲಾಗಿದೆ. ಗುರುಪ್ರಸಾದ್ ಅವರ ಎರಡನೇ ಪತ್ನಿ ಸುಮಿತ್ರಾ ಅವರು ಸಿನಿಮಾ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್​ನಲ್ಲಿ ದಾವೆ ಹೂಡಿ ತಡೆ ತಂದಿದ್ದಾರೆ. ಇದರಿಂದಾಗಿ ಸಿನಿಮಾದ ನಿರ್ಮಾಪಕರುಗಳು ಸುಮಿತ್ರಾ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

‘ಎದ್ದೇಳು ಮಂಜುನಾಥ 2’ ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ, ನಿರ್ಮಾಪಕರು ಕೆಂಡ
Eddelu Manjunatha 2
Follow us
ಮಂಜುನಾಥ ಸಿ.
|

Updated on: Feb 20, 2025 | 8:00 AM

ದಿವಂಗತ ಗುರುಪ್ರಸಾದ್ ನಟಿಸಿದ್ದ ‘ಎದ್ದೇಳು ಮಂಜುನಾಥ 2’ ಸಿನಿಮಾ ಬಿಡುಗಡೆಗೆ ನ್ಯಾಯಾಲಯ ತಡೆ ನೀಡಿದೆ. ಗುರುಪ್ರಸಾದ್ ಅವರ ಎರಡನೇ ಪತ್ನಿ ನ್ಯಾಯಾಲಯದ ಮೊರೆ ಹೋಗಿ, ಸಿನಿಮಾ ಬಿಡುಗಡೆಗೆ ತಡೆ ತಂದಿದ್ದಾರೆ. ಸಿನಿಮಾದ ಹೆಸರಿನ ವರ್ಗಾವಣೆ ಪ್ರಕ್ರಿಯೆ ಕುರಿತಂತು ಗುರುಪ್ರಸಾದ್ ಎರಡನೇ ಪತ್ನಿ ಸುಮಿತ್ರಾ ಅವರು ನ್ಯಾಯಾಲಯದ ಮೊರೆ ಹೋದ ಕಾರಣ ಸಿಟಿ ಸಿವಿಲ್ ನ್ಯಾಯಾಲಯವು ‘ಎದ್ದೇಳು ಮಂಜುನಾಥ 2’ ಸಿನಿಮಾ ಬಿಡುಗಡೆ ಮಾಡದಂತೆ ತಡೆ ನೀಡಿದೆ. ಆದರೆ ಇದರಿಂದ ಸಿನಿಮಾದ ನಿರ್ಮಾಪಕರು ಸುಮಿತ್ರಾ ವಿರುದ್ಧ ಕೆರಳಿ ಕೆಂಡವಾಗಿದ್ದಾರೆ.

ಸುಮಿತ್ರಾ ಅವರು ನಮ್ಮಿಂದ ಹಣ ವಸೂಲಿ ಮಾಡಲೆಂದು ಹೀಗೆ ಮಾಡುತ್ತಿದ್ದಾರೆ. ಗುರುಪ್ರಸಾದ್ ನಮ್ಮಿಂದ 40 ಲಕ್ಷ ರೂಪಾಯಿ ಹಣ ಪಡೆದಿದ್ದರು. ಸಾಯುವ ಮುನ್ನ ಸಿನಿಮಾದ ಫುಟೇಜ್ ಅನ್ನು ಡಿಲೀಟ್ ಮಾಡಿದ್ದರು. ನಾವು ಹೇಗೋ ಎಲ್ಲವನ್ನೂ ರಿಕವರಿ ಮಾಡಿದೆವು, ಆ ನಂತರ ಫಿಲಂ ಚೇಂಬರ್​ನಲ್ಲಿ ಮೀಟಿಂಗ್ ಮಾಡಿ ಸಿನಿಮಾ ಬಿಡುಗಡೆ ಆದ ಬಳಿಕ ಬರುವ ಲಾಭದಲ್ಲಿ 51% ಅನ್ನು ಗುರುಪ್ರಸಾದ್ ಪತ್ನಿಯವರಿಗೆ ನೀಡಬೇಕು ಎನ್ನಲಾಯಿತು. ಅದಕ್ಕೆ ನಾವು ಒಪ್ಪಿಕೊಂಡಿದ್ದೆವು. ಆದರೆ ಈಗ ಸುಮಿತ್ರ ನ್ಯಾಯಾಲಯಕ್ಕೆ ಹೋಗಿ ಸಿನಿಮಾದ ವಿರುದ್ಧ ತಡೆ ತಂದಿದ್ದಾರೆ ಎಂದಿದ್ದಾರೆ ನಿರ್ಮಾಪಕ ರಮೇಶ್.

ಗುರುಪ್ರಸಾದ್ ಅವರ ಕೊನೆಯ ಸಿನಿಮಾ ಮೂಲಕ ಅವರಿಗೆ ಗೌರವ ಸಲ್ಲಿಸುವ ನಮ್ಮ ಅಭಿಲಾಶೆಯನ್ನು ಹಾಳು ಮಾಡಲಾಗುತ್ತಿದೆ. ಗುರುಪ್ರಸಾದ್​ ಅವರಿಗೆ ಗೌರವ ಸಲ್ಲಿಸುವ ರೀತಿಯಲ್ಲಿ ಸಿನಿಮಾ ಬಿಡುಗಡೆ ಮಾಡಬೇಕಿತ್ತು, ಆದರೆ ಅದಕ್ಕೆ ಅವರ ಪತ್ನಿಯೇ ಅಡ್ಡ ಬರುತ್ತಿದ್ದಾರೆ. ಕೆಲ ವಾರಗಳ ಹಿಂದೆ ಸುಮಿತ್ರಾ ಅವರು ನಾಲ್ಕು ಲಕ್ಷ ಹಣ ನೀಡುವಂತೆ ಕೇಳಿದ್ದರು. ನಾನು ಕೊಟ್ಟಿರಲಿಲ್ಲ. ಹಾಗಾಗಿ ಈಗ ನ್ಯಾಯಾಲಯಕ್ಕೆ ಹೋಗಿ ಸ್ಟೇ ತಂದಿದ್ದಾರೆ ಎಂದಿದ್ದಾರೆ ರಮೇಶ್.

ಇದನ್ನೂ ಓದಿ:‘ಪುಷ್ಪ 2’ ತಂಡಕ್ಕೆ ‘ಎದ್ದೇಳು ಮಂಜುನಾಥ..’ ಸಾಂಗ್ ಕೇಳಿಸಿದ ಅಲ್ಲು ಅರ್ಜುನ್ ಅಭಿಮಾನಿಗಳು

ಸುಮಿತ್ರಾ ಅವರು ಸಿನಿಮಾದ ಹೆಸರು ಬದಲಾವಣೆಗೆ ಅವಕಾಶ ಕೊಟ್ಟು ಬರೆದುಕೊಟ್ಟಿರುವ ಪತ್ರ ಹಾಗೂ ಸುಮಿತ್ರಾ ಅವರು ಹಣಕ್ಕಾಗಿ ಬೇಡಿಕೆ ಇಟ್ಟು ತಮಗೆ ಮಾಡಿರುವ ವಾಟ್ಸ್ ಆಪ್ ಸಂದೇಶಗಳನ್ನು ರಮೇಶ್ ಅವರು ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ‘ಎದ್ದೇಳು ಮಂಜುನಾಥ 2’ ಸಿನಿಮಾ ಗುರುಪ್ರಸಾದ್ ನಟಿಸಿದ್ದ ಕೊನೆಯ ಸಿನಿಮಾ ಆಗಿದೆ. ಗುರುಪ್ರಸಾದ್ ಅವರು ಕೆಲ ತಿಂಗಳ ಹಿಂದೆ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡು ನಿಧನ ಹೊಂದಿದ್ದರು. ಅವರು ಸಾಲ ಬಾಧೆಯಲ್ಲಿದ್ದರು ಎನ್ನಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ