AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಪ್ರಸಾದ್ ಗಡ್ಡವನ್ನು ಏಕೆ ಬಿಡುತ್ತಿದ್ದರು? ಇದೆ ರಾಜ್​ಕುಮಾರ್ ಕನೆಕ್ಷನ್

ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರ ಅನುಮಾನಾಸ್ಪದ ಸಾವಿನ ಬಗ್ಗೆ ಅನೇಕ ಪ್ರಶ್ನೆಗಳು ಮೂಡಿವೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಅವರ ಗಡ್ಡವನ್ನು ಬಿಡಲು ರಾಜ್‌ಕುಮಾರ್ ಅವರೊಂದಿಗಿನ ಒಂದು ಘಟನೆ ಕಾರಣ ಎಂದು ಹೇಳಲಾಗಿದೆ.

ಗುರುಪ್ರಸಾದ್ ಗಡ್ಡವನ್ನು ಏಕೆ ಬಿಡುತ್ತಿದ್ದರು? ಇದೆ ರಾಜ್​ಕುಮಾರ್ ಕನೆಕ್ಷನ್
ಗುರುಪ್ರಸಾದ್-ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on: Nov 04, 2024 | 2:38 PM

Share

ಕನ್ನಡದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ನಮ್ಮ ಜೊತೆಗೆ ಇಲ್ಲ. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗುರುಪ್ರಸಾದ್ ಅವರು ಗಡ್ಡವಿಲ್ಲದೆ ಯಾವಾಗಲೂ ಕಾಣಿಸಿಕೊಂಡಿಲ್ಲ. ಗುರುಪ್ರಸಾದ್ ಅವರು ಈ ರೀತಿ ಗಡ್ಡ ಬಿಡಲು ಒಂದು ಕಾರಣ ಇತ್ತು. ಅವರು ಸಂದರ್ಶನ ಒಂದರಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರು.

ರಾಜ್​ಕುಮಾರ್ ಅವರನ್ನು ಹತ್ತಿರದಿಂದ ಕಂಡವರು ಗುರುಪ್ರಸಾದ್. ಅವರನ್ನು ಗುರುಪ್ರಸಾದ್ ಭೇಟಿ ಮಾಡಿದ್ದರು. ಆಗ ಗುರುಪ್ರಸಾದ್ ಅವರು ಗಡ್ಡ ಬಿಟ್ಟಿದ್ದರು. ಈ ಗಡ್ಡವನ್ನು ಮುಟ್ಟಿದ್ದ ರಾಜ್​ಕುಮಾರ್ ಅವರು, ‘ಗಡ್ಡ ಚೆನ್ನಾಗಿದೆ. ನಿಮಗೆ ಚೆನ್ನಾಗಿ ಕಾಣುತ್ತದೆ’ ಎಂದು ಹೇಳಿದ್ದರು. ಅದರಿಂದ ಖುಷಿಪಟ್ಟಿದ್ದ ಗುರುಪ್ರಸಾದ್ ಅವರು, ‘ರಾಜ್​ಕುಮಾರ್ ಅವರೇ ನನ್ನ ಗಡ್ಡ ಮುಟ್ಟಿರುವಾಗ ಇದನ್ನೇಕೆ ಶೇವ್ ಮಾಡಬೇಕು’ ಎಂದು ಅವರು ನಿರ್ಧರಿಸಿದರು.

ಇದಾದ ಬಳಿಕ ಗುರುಪ್ರಸಾದ್ ಅವರು ಎಂದಿಗೂ ಗಡ್ಡವನ್ನು ಶೇವ್ ಮಾಡಲೇ ಇಲ್ಲ. ಆಗಾಗ, ಗುರುಪ್ರಸಾದ್ ಅವರು ಗಡ್ಡಕ್ಕೆ ಕತ್ತರಿ ಹಾಕುತ್ತಿದ್ದರು ಅಷ್ಟೇ. ಈ ವಿಚಾರವನ್ನು ಅವರೇ ಈ ಮೊದಲು ಹೇಳಿಕೊಂಡಿದ್ದರು.

ಗುರುಪ್ರಸಾದ್ ಅವರ ಸಾವಿನ ಹಿಂದೆ ಸಾಕಷ್ಟು ಅನುಮಾನಗಳು ಮೂಡಿವೆ. ಮೇಲ್ನೋಟಕ್ಕೆ ಗುರುಪ್ರಸಾದ್ ಅವರದ್ದು ಆತ್ಮಹತ್ಯೆ ರೀತಿಯೇ ಕಾಣಿಸಿದೆ. ಆದರೆ, ಸೂಕ್ತ ತನಿಖೆ ಬಳಿಕ ಅಸಲಿ ವಿಷಯ ತಿಳಿಯಲಿದೆ. ಅವರ ಸಾವಿನ ಬಗ್ಗೆ 4 ಪ್ರಮುಖ ಅನುಮಾನಗಳು ಮೂಡಿವೆ.

ಇದನ್ನೂ ಓದಿ: ‘ಆನ್​ಲೈನ್ ಗೇಮ್​ನಲ್ಲಿ ಗುರುಪ್ರಸಾದ್ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದ’: ಜಗ್ಗೇಶ್

ಗುರುಪ್ರಸಾದ್ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದರು ಎನ್ನಲಾಗಿದೆ. ಅವರ ಸಿನಿಮಾಗಳು ಇತ್ತೀಚೆಗೆ ಗೆಲುವು ಕಂಡಿರಲಿಲ್ಲ. ಇದರಿಂದ ಅವರು ಬೇಸರಕ್ಕೆ ಒಳಗಾದರೇ ಎನ್ನುವ ಪ್ರಶ್ನೆಯೂ ಮೂಡಿದೆ. ಹಣ ನೀಡದ ಕಾರಣಕ್ಕೆ ಅವರಿಗೆ ಬಂಧನದ ಭಯ ಇತ್ತು. ಅವರು ಎರಡೆರಡು ಮದುವೆ ಆಗಿದ್ದರು. ಹೀಗಾಗಿ, ಕೌಟುಂಬಿಕ ಕಲಹವೂ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!