AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶನಕ್ಕೆ ಕಂಬ್ಯಾಕ್ ಮಾಡಲಿದ್ದಾರೆ ‘ಅಂಬಿ ನಿಂಗ್ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ ಗಾಣಿಗ

‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ನಿರ್ದೇಶನ ಮಾಡುವಾಗ ಗುರುದತ್​ಗೆ ಸಣ್ಣ ವಯಸ್ಸು. ಹಲವು ದೊಡ್ಡ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದರು. ಎಲ್ಲವನ್ನೂ ಅವರು ಯಶಸ್ವಿಯಾಗಿ ನಿಭಾಯಿಸಿ ಭೇಷ್ ಎನಿಸಿಕೊಂಡರು. ಈ ಮೂಲಕ ಭರವಸೆಯ ನಿರ್ದೇಶಕನಾಗಿ ಹೊರಹೊಮ್ಮಿದರು.

ನಿರ್ದೇಶನಕ್ಕೆ ಕಂಬ್ಯಾಕ್ ಮಾಡಲಿದ್ದಾರೆ ‘ಅಂಬಿ ನಿಂಗ್ ವಯಸ್ಸಾಯ್ತೋ' ಖ್ಯಾತಿಯ ಗುರುದತ್ ಗಾಣಿಗ
ರಾಜೇಶ್ ದುಗ್ಗುಮನೆ
|

Updated on:Oct 11, 2023 | 10:41 AM

Share

2018ರಲ್ಲಿ ರಿಲೀಸ್ ಆದ ‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ಮೆಚ್ಚುಗೆ ಪಡೆಯಿತು. ಅಂಬರೀಷ್ (Ambareesh) ಮುಖ್ಯಭೂಮಿಕೆಯಲ್ಲಿ ನಟಿಸಿದ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಇದು ವಿಶೇಷ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಸುದೀಪ್, ಸುಹಾಸಿನಿ, ಶ್ರುತಿ ಹರಿಹರನ್ ಮೊದಲಾದವರು ನಟಿಸಿದ್ದರು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಗುರುದತ್ ಗಾಣಿಗ. ಕಳೆದ ಐದು ವರ್ಷಗಳಲ್ಲಿ ಅವರು ಯಾವುದೇ ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ. ಈಗ ಅವರು ನಿರ್ದೇಶನಕ್ಕೆ ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ. ಸ್ಟಾರ್ ಕಲಾವಿದರ ಜೊತೆ ಅವರು ಕೈ ಜೋಡಿಸಿದ್ದಾರೆ. ಈ ಬಗ್ಗೆ ಶೀಘ್ರವೇ ಅಪ್​ಡೇಟ್ ಸಿಗಲಿದೆ.

‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ನಿರ್ದೇಶನ ಮಾಡುವಾಗ ಗುರುದತ್​ಗೆ ಸಣ್ಣ ವಯಸ್ಸು. ಹಲವು ದೊಡ್ಡ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದರು. ಎಲ್ಲವನ್ನೂ ಅವರು ಯಶಸ್ವಿಯಾಗಿ ನಿಭಾಯಿಸಿ ಭೇಷ್ ಎನಿಸಿಕೊಂಡರು. ಈ ಮೂಲಕ ಭರವಸೆಯ ನಿರ್ದೇಶಕನಾಗಿ ಹೊರಹೊಮ್ಮಿದರು. ಅವರ ಎರಡನೇ ಸಿನಿಮಾ ಬಗ್ಗೆ ಶೀಘ್ರವೇ ದೊಡ್ಡ ಸುದ್ದಿ ಸಿಗಲಿದೆ.

ಒಂದು ಗ್ಯಾಪ್​ನ ಬಳಿಕ ಗುರುದತ್ ಅವರು ನಿರ್ದೇಶಕನ ಕ್ಯಾಪ್ ಧರಿಸುತ್ತಿದ್ದಾರೆ. ಈ ಬಾರಿ ಗುರುದತ್ ಅವರು ಯಾವ ಕಲಾವಿದರ ಜೊತೆ ಸಿನಿಮಾ ಮಾಡುತ್ತಾರೆ? ಇದಕ್ಕೆ ಬಂಡವಾಳ ಹೂಡುವವರು ಯಾರು ಎನ್ನುವ ಕುತೂಹಲ ಮೂಡಿದೆ. ಸದ್ಯದಲ್ಲೇ ಸಿನಿಮಾದ ಟೈಟಲ್ ಹಾಗೂ ಹೀರೋ ಹೆಸರನ್ನು ಅವರು ರಿವೀಲ್ ಮಾಡಲಿದ್ದಾರೆ. ಈ ಬಾರಿ ಅವರು ಭಿನ್ನ ಕಾನ್ಸೆ‌ಪ್ಟ್‌ನ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡಕ್ಕೆ ನಿರೂಪ್ ಭಂಡಾರಿ ಎಂಟ್ರಿ; ಸ್ವಾಗತ ಕೋರಿದ ದಿಗಂತ್​

ಇನ್ನು ನಿರ್ಮಾಣದಲ್ಲೂ ಗುರುದತ್ ಬ್ಯುಸಿ ಆಗಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ಅವರು  ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ದಿಗಂತ್, ನರೂಪ್ ಬಂಡಾರಿ ಮೊದಲಾದವರು ನಟಿಸಿದ್ದಾರೆ. ಸದ್ಯ, ಗುರುದತ್ ಅವರ ಹೊಸ ಸಿನಿಮಾ ಘೋಷಣೆಗೆ ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:40 am, Wed, 11 October 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?