AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 14ಕ್ಕೆ ‘ರಾಜು ಜೇಮ್ಸ್ ಬಾಂಡ್’ ರಿಲೀಸ್​; ಪ್ರೇಮಿಗಳ ದಿನಕ್ಕೆ ಈ ಕೊಡುಗೆ

‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಈ ಚಿತ್ರದಲ್ಲಿ ಗುರುನಂದನ್ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಮೃದುಲಾ, ಚಿಕ್ಕಣ್ಣ, ಸಾಧು ಕೋಕಿಲ, ಅಚ್ಯುತ್ ಕುಮಾರ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ಫೆಬ್ರವರಿ 14ರಂದು ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಫೆಬ್ರವರಿ 14ಕ್ಕೆ ‘ರಾಜು ಜೇಮ್ಸ್ ಬಾಂಡ್’ ರಿಲೀಸ್​; ಪ್ರೇಮಿಗಳ ದಿನಕ್ಕೆ ಈ ಕೊಡುಗೆ
Gurunandan
ಮದನ್​ ಕುಮಾರ್​
|

Updated on: Jan 01, 2025 | 9:11 PM

Share

ಹೊಸ ವರ್ಷ ಬಂದಿದೆ. ಚಿತ್ರರಂಗ ಕೂಡ ಹೊಸ ಭರವಸೆಯೊಂದಿಗೆ ಸಕ್ರಿಯವಾಗಿದೆ. 2025ರಲ್ಲಿ ಯಾವೆಲ್ಲ ಸಿನಿಮಾಗಳು ಸೂಪರ್​ ಹಿಟ್ ಆಗಲಿವೆ ಎಂಬುದನ್ನು ನೋಡುವ ಕೌತುಕ ಮೂಡಿದೆ. ಹೊಸ ವರ್ಷದ ಮೊದಲ ದಿನವೇ ಅನೇಕ ಸಿನಿಮಾ ತಂಡಗಳಿಂದ ಸಾಕಷ್ಟು ಅಪ್​ಡೇಟ್ಸ್​ ಸಿಕ್ಕಿವೆ. ‘ರಾಜು ಜೇಮ್ಸ್ ಬಾಂಡ್’ ಚಿತ್ರತಂಡ ಕೂಡ ಸಿಹಿ ಸುದ್ದಿಯನ್ನು ಹಂಚಿಕೊಂಡಿದೆ. ಹೌದು, ಹೊಸ ವರ್ಷದ ಪ್ರಯುಕ್ತ ಈ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್ ಮಾಡಲಾಗಿದೆ. ಗುರುನಂದನ್ ಪ್ರಮುಖ ಪಾತ್ರ ಮಾಡುತ್ತಿರುವ ಈ ಸಿನಿಮಾ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ರಾಜು ಜೇಮ್ಸ್ ಬಾಂಡ್’ ಚಿತ್ರವು ‘ಕರ್ಮ ಬ್ರೋಸ್ ಪ್ರೊಡಕ್ಷನ್ಸ್’ ಮೂಲಕ ನಿರ್ಮಣ ಆಗುತ್ತಿದೆ. ದೀಪಕ್ ಮಧುವನಹಳ್ಳಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಫಸ್ಟ್ ರ‍್ಯಾಂಕ್ ರಾಜು’ ಖ್ಯಾತಿಯ ಗುರುನಂದನ್ ಅವರು ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸಿದ್ದು, ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಹಾಸ್ಯವೇ ಪ್ರಧಾನವಾಗಿ ಇರಲಿದೆ. ಫೆಬ್ರವರಿ 14ರಂದು ‘ರಾಜು ಜೇಮ್ಸ್ ಬಾಂಡ್’ ರಿಲೀಸ್ ಆಗಲಿದೆ.

ಈ ಮೊದಲು ಪ್ರೇಮಿಗಳ ದಿನದಂದು (ಫೆ.14) ಬಿಡುಗಡೆಯಾಗಿ ಸೂಪರ್​ ಹಿಟ್​ ಆದ ಅನೇಕ ಸಿನಿಮಾಗಳು ಇವೆ. ಅವುಗಳ ಸಾಲಿಗೆ ‘ರಾಜು ಜೇಮ್ಸ್ ಬಾಂಡ್’ ಕೂಡ ಸೇರ್ಪಡೆ ಆಗುತ್ತಾ ಎಂಬುದನ್ನು ತಿಳಿಯುವ ಸಮಯ ಹತ್ತಿರ ಆಗುತ್ತಿದೆ. ಪ್ರಚಾರದ ಸಲುವಾಗಿ ಶೀಘ್ರದಲ್ಲೇ ಈ ಸಿನಿಮಾದಿಂದ ಹೊಸ ಹಾಡು ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಗುರುನಂದನ್ ಜೊತೆ ಮೃದುಲಾ, ಅಚ್ಯುತ್ ಕುಮಾರ್, ಸಾಧು ಕೋಕಿಲ, ಚಿಕ್ಕಣ್ಣ, ಜೈ ಜಗದೀಶ್, ರವಿಶಂಕರ್ ಮುಂತಾದ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ: 2025ರ ಬಹು ನಿರೀಕ್ಷಿತ ಕನ್ನಡ ಸಿನಿಮಾಗಳಿವು

‘ರಾಜು ಜೇಮ್ಸ್ ಬಾಂಡ್’ ಚಿತ್ರದಲ್ಲಿ ಮನಮೋಹಕ ಕಥೆ ಇದೆ ಎಂದು ಸಿನಿಮಾ ತಂಡ ಹೇಳಿಕೊಂಡಿದೆ. ಲಂಡನ್‌ನಲ್ಲಿ ಶೂಟಿಂಗ್ ಮಾಡಲಾಗಿದೆ. ಸಂಗೀತ ಕೂಡ ಈ ಸಿನಿಮಾದ ಹೈಲೈಟ್ ಎಂದು ನಿರ್ದೇಶಕರು ಭರವಸೆ ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಡಿಸೆಂಬರ್ 27ರಂದು ಈ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಉಪೇಂದ್ರ ನಟನೆಯ ‘ಯುಐ’, ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾಗಳು ಡಿಸೆಂಬರ್ ಕೊನೆಯಲ್ಲಿ ರಿಲೀಸ್​ ಆದ ಕಾರಣ ‘ರಾಜು ಜೇಮ್ಸ್ ಬಾಂಡ್’ ಸಿನಿಮಾದ ರಿಲೀಸ್​ ಡೇಟ್​ ಮುಂದಕ್ಕೆ ಹೋಗಬೇಕಾಯಿತು ಎಂದು ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರು ಹೇಳಿದ್ದಾರೆ. ಈಗ ಫೆಬ್ರವರಿ 14ಕ್ಕೆ ಸಿನಿಮಾ ತೆರೆಕಾಣಲಿಸಲು ನಿರ್ಧರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು