Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಬೌನ್ಸ್ ಕೇಸ್​ನಲ್ಲಿ ಸಿಲುಕಿದ್ದ ಗುರು ಪ್ರಸಾದ್; ನವೆಂಬರ್ 19ಕ್ಕೆ ಇತ್ತು ವಿಚಾರಣೆ

ಕನ್ನಡ ಚಿತ್ರ ನಿರ್ದೇಶಕ ಗುರು ಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೇಲೆ ಹಲವು ಕೋಟಿ ರೂಪಾಯಿಗಳ ಸಾಲ ಮತ್ತು ನ್ಯಾಯಾಲಯದ ಪ್ರಕರಣ ಇತ್ತು. ಆನ್‌ಲೈನ್ ಗೇಮ್‌ನಲ್ಲಿ ಭಾರಿ ಹಣ ಕಳೆದುಕೊಂಡಿದ್ದಾರೆ ಎಂಬುದು ಕೂಡ ತಿಳಿದುಬಂದಿದೆ. ಈ ಆರ್ಥಿಕ ಮತ್ತು ಕಾನೂನು ಸಂಕಷ್ಟಗಳಿಂದಾಗಿ ಅವರು ಈ ತೀರ್ಮಾನಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ.

ಚೆಕ್ ಬೌನ್ಸ್ ಕೇಸ್​ನಲ್ಲಿ ಸಿಲುಕಿದ್ದ ಗುರು ಪ್ರಸಾದ್; ನವೆಂಬರ್ 19ಕ್ಕೆ ಇತ್ತು ವಿಚಾರಣೆ
ಗುರುಪ್ರಸಾದ್
Follow us
Mangala RR
| Updated By: ರಾಜೇಶ್ ದುಗ್ಗುಮನೆ

Updated on: Nov 04, 2024 | 3:43 PM

ನಿರ್ದೇಶಕ ಗುರು ಪ್ರಸಾದ್ ಅವರು ಸಂಕಷ್ಟಕ್ಕೆ ಸಿಲುಕಿದ್ದರು. ಮೈತುಂಬ ಸಾಲ ಮಾಡಿಕೊಂಡಿದ್ದ ಅವರು ಕೊನೆಗೆ ಆತ್ಮಹತ್ಯೆಯ ಮೊರೆ ಹೋದರು. ತಾವು ವಾಸವಿದ್ದ ಅಪಾರ್ಟ್​ಮೆಂಟ್​ನಲ್ಲೇ ಕೊನೆಯುಸಿರು ಎಳೆದರು. ಅವರ ಸಾವು ಶಾಕಿಂಗ್ ಎನಿಸಿದೆ. ಕನ್ನಡ ಚಿತ್ರರಂಗದ ಅನೇಕರು ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ. ಅವರು ದುಡುಕಿನ ನಿರ್ಧಾರ ಮಾಡಿದರು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಗುರುಪ್ರಸಾದ್ ಅವರ ಚೆಕ್​ಬೌನ್ಸ್ ಪ್ರಕರಣದ ಬಗ್ಗೆ ಚರ್ಚೆ ನಡೆದಿದೆ.

ವಿ. ಶ್ರೀನಿವಾಸ್ ಅವರಿಗೆ 30 ಲಕ್ಷ ರೂಪಾಯಿ ಹಣವನ್ನು ಗುರುಪ್ರಸಾದ್ ನೀಡಬೇಕಿತ್ತು. ಗುರುಪ್ರಸಾದ್ ಈ ಮೊದಲು ನೀಡಿದ್ದ ಚೆಕ್​ಗಳು ಬೌನ್ಸ್ ಆಗಿದ್ದವು. ಹೀಗಾಗಿ, ಶ್ರೀನಿವಾಸ್ ಅವರು ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣದ ಸಂಬಂಧ ಅಕ್ಟೋಬರ್ 22ರಂದು ಗುರುಪ್ರಸಾದ್ ಅವರು ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ, ಅನಾರೋಗ್ಯದ ಕಾರಣ ಹೇಳಿದ್ದ ಗುರುಪ್ರಸಾದ್ ಅವರು ಮೆಡಿಕಲ್ ಸರ್ಟಿಫಿಕೇಟ್ ಕೂಡ ನೀಡಿದ್ದರು.

ನವೆಂಬರ್ 19ಕ್ಕೆ ಮುಂದಿನ ವಿಚಾರಣೆ ಇತ್ತು. ಸದ್ಯದಲ್ಲೇ ಕೋರ್ಟ್​ನಲ್ಲಿ ಕೇಸ್ ಮುಗಿದು ಶ್ರೀನಿವಾಸ್ ಪರ ತೀರ್ಪು ಬರುವ ಎಲ್ಲಾ ಸಾಧ್ಯತೆ ಇತ್ತು ಎನ್ನಲಾಗಿದೆ. ಈಗಾಗಲೇ ಹಲವು ಬಾರಿ ಕೋರ್ಟ್​​ಗೆ ಬಾರದೆ ಗುರುಪ್ರಸಾದ್ ಅವರು ತಪ್ಪಿಸಿಕೊಂಡಿದ್ದರು. ಸದ್ಯದಲ್ಲೇ ಮತ್ತೊಮ್ಮೆ ಅರೆಸ್ಟ್ ವಾರಂಟ್ ಜಾರಿ ಆಗುವ ಸಾಧ್ಯತೆಗಳು ಇದ್ದವು ಎಂದು ವರದಿ ಆಗಿದೆ.

ಈ ರೀತಿಯ ಹಲವು ತೊಂದರೆಗಳಿಗೆ ಗುರು ಪ್ರಸಾದ್ ಒಳಗಾಗಿದ್ದರು. ಅವರು ತಮ್ಮ ಮಾತಿನ ಮೂಲಕ, ಸಿನಿಮಾಗಳಲ್ಲಿ ಭಿನ್ನ ಸಂಭಾಷಣೆ ಮೂಲಕ ಗಮನ ಸೆಳೆದಿದ್ದರು. ಅವರು ಮೂರು ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಗುರುಪ್ರಸಾದ್ ಗಡ್ಡವನ್ನು ಏಕೆ ಬಿಡುತ್ತಿದ್ದರು? ಇದೆ ರಾಜ್​ಕುಮಾರ್ ಕನೆಕ್ಷನ್

ಈ ಮಧ್ಯೆ ಗುರುಪ್ರಸಾದ್ ಬಗ್ಗೆ ಜಗ್ಗೇಶ್ ವಿವಿಧ ರೀತಿಯ ಹೇಳಿಕೆ ನೀಡುತ್ತಾ ಇದ್ದಾರೆ. ಆನ್​ಲೈನ್​ ಗೇಮ್​ನಲ್ಲಿ ಗುರುಪ್ರಸಾದ್ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದರು ಎಂದು ಜಗ್ಗೇಶ್ ಹೇಳಿದ್ದಾರೆ. ‘ಗುರು ಅನೇಕರ ಬಳಿ ಸಾಲ ಮಾಡಿದ್ದ. ಅಷ್ಟೆಲ್ಲ ಸಾಲ ಆದಾಗ ತೀರಿಸಲು ಆಗಲ್ಲ ಎಂಬುದು ಗೊತ್ತಾದಾಗ ಭಯ ಬರುತ್ತದೆ. ಆ ಭಯವೇ ಆತನಿಗೆ ಆತ್ಮಹತ್ಯೆಯ ಆಲೋಚನೆ ಮೂಡಿಸಿರಬಹುದು’ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ