AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಬೌನ್ಸ್ ಕೇಸ್​ನಲ್ಲಿ ಸಿಲುಕಿದ್ದ ಗುರು ಪ್ರಸಾದ್; ನವೆಂಬರ್ 19ಕ್ಕೆ ಇತ್ತು ವಿಚಾರಣೆ

ಕನ್ನಡ ಚಿತ್ರ ನಿರ್ದೇಶಕ ಗುರು ಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೇಲೆ ಹಲವು ಕೋಟಿ ರೂಪಾಯಿಗಳ ಸಾಲ ಮತ್ತು ನ್ಯಾಯಾಲಯದ ಪ್ರಕರಣ ಇತ್ತು. ಆನ್‌ಲೈನ್ ಗೇಮ್‌ನಲ್ಲಿ ಭಾರಿ ಹಣ ಕಳೆದುಕೊಂಡಿದ್ದಾರೆ ಎಂಬುದು ಕೂಡ ತಿಳಿದುಬಂದಿದೆ. ಈ ಆರ್ಥಿಕ ಮತ್ತು ಕಾನೂನು ಸಂಕಷ್ಟಗಳಿಂದಾಗಿ ಅವರು ಈ ತೀರ್ಮಾನಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ.

ಚೆಕ್ ಬೌನ್ಸ್ ಕೇಸ್​ನಲ್ಲಿ ಸಿಲುಕಿದ್ದ ಗುರು ಪ್ರಸಾದ್; ನವೆಂಬರ್ 19ಕ್ಕೆ ಇತ್ತು ವಿಚಾರಣೆ
ಗುರುಪ್ರಸಾದ್
Mangala RR
| Edited By: |

Updated on: Nov 04, 2024 | 3:43 PM

Share

ನಿರ್ದೇಶಕ ಗುರು ಪ್ರಸಾದ್ ಅವರು ಸಂಕಷ್ಟಕ್ಕೆ ಸಿಲುಕಿದ್ದರು. ಮೈತುಂಬ ಸಾಲ ಮಾಡಿಕೊಂಡಿದ್ದ ಅವರು ಕೊನೆಗೆ ಆತ್ಮಹತ್ಯೆಯ ಮೊರೆ ಹೋದರು. ತಾವು ವಾಸವಿದ್ದ ಅಪಾರ್ಟ್​ಮೆಂಟ್​ನಲ್ಲೇ ಕೊನೆಯುಸಿರು ಎಳೆದರು. ಅವರ ಸಾವು ಶಾಕಿಂಗ್ ಎನಿಸಿದೆ. ಕನ್ನಡ ಚಿತ್ರರಂಗದ ಅನೇಕರು ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ. ಅವರು ದುಡುಕಿನ ನಿರ್ಧಾರ ಮಾಡಿದರು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಗುರುಪ್ರಸಾದ್ ಅವರ ಚೆಕ್​ಬೌನ್ಸ್ ಪ್ರಕರಣದ ಬಗ್ಗೆ ಚರ್ಚೆ ನಡೆದಿದೆ.

ವಿ. ಶ್ರೀನಿವಾಸ್ ಅವರಿಗೆ 30 ಲಕ್ಷ ರೂಪಾಯಿ ಹಣವನ್ನು ಗುರುಪ್ರಸಾದ್ ನೀಡಬೇಕಿತ್ತು. ಗುರುಪ್ರಸಾದ್ ಈ ಮೊದಲು ನೀಡಿದ್ದ ಚೆಕ್​ಗಳು ಬೌನ್ಸ್ ಆಗಿದ್ದವು. ಹೀಗಾಗಿ, ಶ್ರೀನಿವಾಸ್ ಅವರು ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣದ ಸಂಬಂಧ ಅಕ್ಟೋಬರ್ 22ರಂದು ಗುರುಪ್ರಸಾದ್ ಅವರು ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ, ಅನಾರೋಗ್ಯದ ಕಾರಣ ಹೇಳಿದ್ದ ಗುರುಪ್ರಸಾದ್ ಅವರು ಮೆಡಿಕಲ್ ಸರ್ಟಿಫಿಕೇಟ್ ಕೂಡ ನೀಡಿದ್ದರು.

ನವೆಂಬರ್ 19ಕ್ಕೆ ಮುಂದಿನ ವಿಚಾರಣೆ ಇತ್ತು. ಸದ್ಯದಲ್ಲೇ ಕೋರ್ಟ್​ನಲ್ಲಿ ಕೇಸ್ ಮುಗಿದು ಶ್ರೀನಿವಾಸ್ ಪರ ತೀರ್ಪು ಬರುವ ಎಲ್ಲಾ ಸಾಧ್ಯತೆ ಇತ್ತು ಎನ್ನಲಾಗಿದೆ. ಈಗಾಗಲೇ ಹಲವು ಬಾರಿ ಕೋರ್ಟ್​​ಗೆ ಬಾರದೆ ಗುರುಪ್ರಸಾದ್ ಅವರು ತಪ್ಪಿಸಿಕೊಂಡಿದ್ದರು. ಸದ್ಯದಲ್ಲೇ ಮತ್ತೊಮ್ಮೆ ಅರೆಸ್ಟ್ ವಾರಂಟ್ ಜಾರಿ ಆಗುವ ಸಾಧ್ಯತೆಗಳು ಇದ್ದವು ಎಂದು ವರದಿ ಆಗಿದೆ.

ಈ ರೀತಿಯ ಹಲವು ತೊಂದರೆಗಳಿಗೆ ಗುರು ಪ್ರಸಾದ್ ಒಳಗಾಗಿದ್ದರು. ಅವರು ತಮ್ಮ ಮಾತಿನ ಮೂಲಕ, ಸಿನಿಮಾಗಳಲ್ಲಿ ಭಿನ್ನ ಸಂಭಾಷಣೆ ಮೂಲಕ ಗಮನ ಸೆಳೆದಿದ್ದರು. ಅವರು ಮೂರು ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಗುರುಪ್ರಸಾದ್ ಗಡ್ಡವನ್ನು ಏಕೆ ಬಿಡುತ್ತಿದ್ದರು? ಇದೆ ರಾಜ್​ಕುಮಾರ್ ಕನೆಕ್ಷನ್

ಈ ಮಧ್ಯೆ ಗುರುಪ್ರಸಾದ್ ಬಗ್ಗೆ ಜಗ್ಗೇಶ್ ವಿವಿಧ ರೀತಿಯ ಹೇಳಿಕೆ ನೀಡುತ್ತಾ ಇದ್ದಾರೆ. ಆನ್​ಲೈನ್​ ಗೇಮ್​ನಲ್ಲಿ ಗುರುಪ್ರಸಾದ್ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದರು ಎಂದು ಜಗ್ಗೇಶ್ ಹೇಳಿದ್ದಾರೆ. ‘ಗುರು ಅನೇಕರ ಬಳಿ ಸಾಲ ಮಾಡಿದ್ದ. ಅಷ್ಟೆಲ್ಲ ಸಾಲ ಆದಾಗ ತೀರಿಸಲು ಆಗಲ್ಲ ಎಂಬುದು ಗೊತ್ತಾದಾಗ ಭಯ ಬರುತ್ತದೆ. ಆ ಭಯವೇ ಆತನಿಗೆ ಆತ್ಮಹತ್ಯೆಯ ಆಲೋಚನೆ ಮೂಡಿಸಿರಬಹುದು’ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು