AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಮಿ, ಸಾಲ, ಖಿನ್ನತೆ, ಕಾಯಿಲೆ ಬಗ್ಗೆ ನಿರ್ದೇಶಕ ಗುರುಪ್ರಸಾದ್​ ಪತ್ನಿ ಸುಮಿತ್ರಾ ಸ್ಪಷ್ಟನೆ

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾದ ಬಳಿಕ ಒಂದಷ್ಟು ಆರೋಪಗಳು ಕೇಳಿಬಂದಿದ್ದವು. ಅವರಿಗೆ ಸಾಲ ಹೆಚ್ಚಾಗಿತ್ತು, ಅನಾರೋಗ್ಯ ಉಂಟಾಗಿತ್ತು, ಆನ್​ಲೈನ್​ ರಮ್ಮಿ ಚಟಕ್ಕೆ ಅಡಿಕ್ಟ್​ ಆಗಿದ್ದರು ಎಂಬಿತ್ಯಾದಿ ವಿಷಯಗಳು ಹರಿದಾಡಿದ್ದವು. ಅವುಗಳ ಬಗ್ಗೆ ಗುರುಪ್ರಸಾದ್ ಪತ್ನಿ ಸುಮಿತ್ರಾ ಅವರು ಸ್ಪಷ್ಟನೆ ನೀಡಿದ್ದಾರೆ.

ರಮ್ಮಿ, ಸಾಲ, ಖಿನ್ನತೆ, ಕಾಯಿಲೆ ಬಗ್ಗೆ ನಿರ್ದೇಶಕ ಗುರುಪ್ರಸಾದ್​ ಪತ್ನಿ ಸುಮಿತ್ರಾ ಸ್ಪಷ್ಟನೆ
ಗುರುಪ್ರಸಾದ್
ಮಾಲತೇಶ ಜಗ್ಗೀನ್
| Edited By: |

Updated on: Dec 06, 2024 | 4:59 PM

Share

ಸಂದೇಶ ಕಳಿಸುವ ಮೂಲಕ ಗುರುಪ್ರಸಾದ್ ಪತ್ನಿ ಸಮಿತ್ರಾ ಅವರು ಕೆಲವು ಸ್ಪಷ್ಟನೆಗಳನ್ನು ನೀಡಿದ್ದಾರೆ. ಆ ಸಂದೇಶ ಇಲ್ಲಿದೆ.. ‘ಸಮಸ್ತ ಕನ್ನಡ ನಾಡ ಜನತೆಗೆ ನಿಮ್ಮ ಸುಮಿತ್ರಾ ಗುರುಪ್ರಸಾದ್ ಮಾಡುವ ನಮಸ್ಕಾರಗಳು. ಎಲ್ಲಾ ಸ್ನೇಹದ ವರ್ಗದವರಿಗೂ ಸಿನಿಮಾ ವರ್ಗದವರಿಗೂ ಹಾಗೂ ಮಾಧ್ಯಮ ವರ್ಗದವರಿಗೂ ತಿಳಿಸುವುದಿದೆ, ಹಂಚಿಕೊಳ್ಳುವುದಿದೆ. ನೀವೆಲ್ಲರೂ ನನಗೆ ಸಂಪೂರ್ಣವಾಗಿ ಸಹಕರಿಸುತ್ತೀರಿ ಎಂದು ನಂಬಿ ಹೇಳಿಕೊಳ್ಳುತ್ತಿದ್ದಾನೆ. ಕೈ ಮುಗಿದು ಬೇಡ್ಕೋತೀನಿ, ದಯವಿಟ್ಟು ಈಗಾಗಲೇ ನಮ್ಮ ಕುಟುಂಬ ನೊಂದಿದ್ದೀವಿ. ನೋವಲ್ಲೇ ಬದುಕ್ತಿದ್ದೀವಿ. ಕಾರಣ, ತಮ್ಮೆಲ್ಲರಿಗೂ ಗೊತ್ತಿದೆ. ಒಬ್ಬ ವ್ಯಕ್ತಿ ಸತ್ತ ಮೇಲೆ ಅದು ಯಾರೇ ಆಗಿರಲಿ ಅವರನ್ನು ದೇವರು ಅಂತ ಪರಿಗಣಿಸ್ತಾರೆ ಅಂತ ಹೇಳಿರುವುದನ್ನು ಕೇಳಿಸಿಕೊಂಡಿರುವುದು ನನ್ನ ತಿಳುವಳಿಕೆ. ಸತ್ತ ವ್ಯಕ್ತಿ ಬಗ್ಗೆ ಯಾಕೆ ಇಲ್ಲದ ಸಲ್ಲದ ಮಾತುಗಳು?’

‘1) ಅವರಿಗೆ ಯಾವ ಕೋಟಿ ಕೋಟಿ ಕಟ್ಟುವಷ್ಟು ಸಾಲ ಇರಲಿಲ್ಲ. 2) ಆನ್​ಲೈನ್​ ರಮ್ಮಿ ಇತ್ತು, ಅದು ಎಷ್ಟಕ್ಕೆ ಬೇಕೋ ಅಷ್ಟು. ತನ್ನ ಬಿಡುವಿನ ಟೈಂಪಾಸ್​ಗಾಗಿ. ಗಳಿಸಿದ್ದು ಉಂಟು, ಕಳೆದುಕೊಂಡಿದ್ದು ಉಂಟು. ಅದು ಅತಿರೇಕಕ್ಕೆ ಇರಲಿಲ್ಲ. 3) ಸಾಲಗಾರ ಎಂದು ಕೇಸ್ ನಡೆಯುತ್ತಿತ್ತಂತೆ, ಆದರೆ ನಂಬಿಕಸ್ತರಿಂದ ಮೋಸದ ವಂಚನೆ ಅದು ಕಾನೂನು ಮೂಲಕ ಸಾಬೀತಾಗಿರಲಿಲ್ಲ. 4) ಡಿಪ್ರೆಷನ್​ ಪೇಷಂಟ್​ ಹೌದು. ಅದಕ್ಕೆ ವೈದ್ಯರ ಸಲಹೆ ಮೇರೆಗೆ ಮಾತ್ರೆಗಳು ತೆಗೆದುಕೊಳ್ಳುತ್ತಿದ್ದರು. 5) ಒತ್ತಡಗಳು ಎಂಬ ಕಾಯಿಲೆ. ಸೋರಿಸಿಸ್ (ಚರ್ಮರೋಗ) ಯಾವುದು ಇಲ್ಲ. 6) ಸುಮಿತ್ರಾ ಗುರು ಪ್ರಸಾದ್ ಆದ ನಾನು ಮತ್ತೆ ಪ್ರಗ್ನೆಂಟ್ ಎನ್ನುವುದು ಸುಳ್ಳು ಸುದ್ದಿ.’

‘ಇವೆಲ್ಲ ಹರಿದಾಡುತ್ತಿದೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಆತನ ಪ್ರತಿಭೆ ಅಗಾಧವಾದದ್ದು. ಆತನ ಬರವಣಿಗೆ, ಆತನ ಚಿಂತನೆಗಳು ಆತನ ಪ್ರಯೋಗಗಳು ಹಾಗೂ ಆತನ ವ್ಯಕ್ತಿತ್ವ ಎಲ್ಲವೂ ಒಂದು ರೀತಿ ವಿಭಿನ್ನವಾಗಿ ಇತ್ತು. ಅದು ತಮ್ಮೆಲ್ಲರಿಗೂ ತಿಳಿದಿರುವುದೇ. ಹಾಗಾಗಿ ಆತನ ಕೊಡುಗೆಗಳಿಗೆ, ಆತನ ಬರವಣಿಗೆಗೆ, ಆತನ ಪ್ರತಿಭೆಗೆ ಆತನ ಚಿಂತನೆಗಳಿಗೆ, ಆತನ ಯಶಸ್ವಿಗೆ, ಆತನ ಮಾತಿನ ಚಾತಿಗೆ ನಕ್ಕು ನಲಿದು ಮೈಮರೆತಿದ್ದೀರಿ. ಅಷ್ಟರಮಟ್ಟಿಗೆ ಚತುರರು ಎಂದು ನಿಮ್ಮೆಲ್ಲರಿಗೂ ಗೊತ್ತಿದೆ.’

‘ಹಾಗೆ, ತಾವೆಲ್ಲರೂ ಕೈಜೋಡಿಸಿದ್ದೀರಿ ಸಹಕರಿಸಿದ್ದೀರಿ ಹಾಗೆ ಪ್ರೋತ್ಸಾಹಿಸಿದ್ದೀರಿ. ಹಾಗೆ ಕೆಲವೊಂದು ತಮ್ಮೆಲ್ಲರಿಗೂ ಸರಿ ಹೋಗದಿದ್ದು ಉಂಟು. ಏಕೆಂದರೆ ನೇರ ನುಡಿ ಮಾತುಗಾರ ಕೆಲವೊಂದು ಎಲ್ಲರಿಗೂ ಸರಿ ಅನಿಸಿದ್ದು ಆತನಿಗೆ ಸರಿ ಇಲ್ಲ ಎನಿಸಿದ್ದು ಕೆಲವೊಬ್ಬರಿಂದ ಮನಸ್ತಾಪಕ್ಕೆ ಒಳಗಾಗಿದ್ದು ಎಲ್ಲವೂ ಉಂಟು. ಇವುಗಳಿಂದ ಖುಷಿಪಟ್ಟವರು ಇದ್ದಾರೆ, ನೋವುಪಟ್ಟವರು ಇದ್ದಾರೆ. ಮನುಷ್ಯ ಅಂದಮೇಲೆ ಸರಿ-ತಪ್ಪು ಕೆಟ್ಟದ್ದು-ಒಳ್ಳೆಯ ಮಾಡಿಯೇ ತೀರುತ್ತಾನೆ ಎನ್ನುವುದು ಎಲ್ಲರಿಗೂ ಗೊತ್ತಿರುವುದೇ.’

‘ಆತ ಕುಡುಕ ಆಗಿದ್ದ. ಹೀಗಿತ್ತು, ಹಾಗಿತ್ತು ನೋವುಂಟು ಮಾಡಿದ್ದ ಅದು, ಇದು ಹಾಗೆ ಹೀಗೆ ಆತ ಸರಿ ಇಲ್ಲ, ಹೆಂಡ್ತಿ ಮಕ್ಕಳು ಸರಿ ಇಟ್ಕೊಂಡಿರ್ಲಿಲ್ಲ ಎಂಬ ಮಾತುಗಳು ಎಲ್ಲರೂ ಸಾಮಾಜಿಕವಾಗಿ ಮಾಡೋದೇ. ತಮ್ಮ ಸಂಸಾರಗಳಲ್ಲಿ ನಡೆಯುವುದೇ. ಜೊತೆಗೆ ಇಂಥ ಮಾತುಗಳಿಗೆ ಸಂದರ್ಭಕ್ಕೆ ಆ ಸಮಯಕ್ಕೆ ಅವರುಗಳು ಸಹಕರಿಸಿದ್ದು ಉಂಟು ಅವರೊಟ್ಟಿಗೆ ಕಾಲ ಕಳೆದಿದ್ದು ಇತ್ತು. ಏನು ಹೇಳಬೇಕಾದರೂ ಆತ ಬದುಕಿದ್ದಾಗ ಅಥವಾ ಒಬ್ಬ ವ್ಯಕ್ತಿ ಬದುಕಿದ್ದಾಗ ಅವನನ್ನು ತಿದ್ದು ಬುದ್ಧಿ ಹೇಳುವುದು ಪ್ರಾಮಾಣಿಕರ, ಮನುಷ್ಯರ ಮಹತ್ವ ಕಾರ್ಯ. ಅದು ಬಿಟ್ಟು ಸತ್ತ ಮೇಲೆ ವ್ಯಕ್ತಿಯ ವ್ಯಕ್ತಿತ್ವವನ್ನು ಅವಮಾನಿಸುವುದು ಎಷ್ಟರಮಟ್ಟಿಗೆ ಸರಿ?’

ಇದನ್ನೂ ಓದಿ: ಗುರುಪ್ರಸಾದ್ ಸಾವಿನ ಬಳಿಕ ಟೀಕೆ ಮಾಡಿದ ಜಗ್ಗೇಶ್​ಗೆ ಜಗದೀಶ್ ಕ್ಲಾಸ್

‘ಕೆಲವೊಂದು ವೈಯುಕ್ತಕ ವಿಚಾರಗಳು ಅವರಿಗೆ ಸಂಬಂಧಪಟ್ಟದ್ದು. ಅವರ ಕುಟುಂಬಕ್ಕೆ ಸಂಬಂಧಪಟ್ಟದ್ದುಅಲ್ಲವಾ? ಹೆಂಡತಿಯಾಗಿ ಪೊಲೀಸ್ ಕಂಪ್ಲೇಂಟ್ ಕೊಟ್ಟಿದ್ದು, ನಾನು ವಿಚಾರ ಮಾಹಿತಿಗಳು ಮೊದಲು ಗೊತ್ತಾಗ್ಬೇಕಿರೋದು ತಿಳ್ಕೊಬೇಕಾಗಿರೋದು ನನಗೆ. ಅದು ಬಿಟ್ಟು ಒಂದು ತಿಂಗಳ ಬಳಿಕ ಆ ಮಾಹಿತಿ ಹೊರಗೆ ಬಿತ್ತು, ಈ ಮಾಹಿತಿ ಹೊರಗೆ ಬಿತ್ತು ಅಂತ ಹೇಳಿಕೆಗಳು.. 3 ಕೋಟಿ ಮೀರಿದೆ ರಮ್ಮಿ ಚಟ ಸಾಲದ ಹೊರೆಗಳು ಎಂತಲ್ಲ ಆರೋಪಗಳು ದಿನೇ ದಿನೇ ನಡಿತಾನೆ ಇದೆ. ದಯವಿಟ್ಟು ಇದನ್ನೆಲ್ಲ ನಿಲ್ಲಿಸಿ.’

‘ಇದ್ಯಾವುದು ಸತ್ಯ ಅಲ್ಲ. ಹೆಂಡತಿಯಾಗಿ ನನಗೆ ಯಾವ ವಿಚಾರಗಳು ಸರಿಯಾಗಿ ಕಡಾ ಖಂಡಿತವಾಗಿ ಪೊಲೀಸರು ಇನ್ನು ತಿಳಿಸಿಲ್ಲ. ಅದಕ್ಕೆ ಆದಂತಹ ಸಮಯ ತೆಗೆದುಕೊಂಡಿದ್ದಾರೆ. ನನ್ನ ಕಡೆಯಿಂದ ಸಹಕಾರವು ನಡೆಯುತ್ತಿದ. ಅವರ ಬಳಿ ಐಫೋನ್ ಇರಲಿಲ್ಲ. ಏಳು ಮೊಬೈಲ್​ಗಳಂತೂ ಇತ್ತು. ಕೆಲವೊಂದು ಹಳೆಯದ್ದು ಕೆಲವೊಂದು ಹೊಸದು. ಸಮಾಜಕ್ಕೆ ತಪ್ಪು ಮಾಹಿತಿ ನೀಡಬಾರದೆಂದು ಕೇಳಿಕೊಳ್ಳುತ್ತಿದ್ದೇನೆ. ನನ್ನಿಂದ ಏನಾದರೂ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನೋವಾಗಿದ್ದಲ್ಲಿ ಕ್ಷಮೆ ಯೋಚಿಸುತ್ತೇನೆ. ದಯವಿಟ್ಟು ಎಲ್ಲರೂ ಆತನ ಯಶಸ್ವಿಗೆ ಆತನ ಸಾಧನೆಗೆ ಕೈಜೋಡಿಸಿ ಎಂದುಕೇಳಿಕೊಳ್ಳುತ್ತಿದ್ದೇನೆ.’

ಇಂತಿ.. ನಿಮ್ಮ ಮನೆಯ ಮಗಳು ಸುಮಿತ್ರಾ ಗುರುಪ್ರಸಾದ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ