AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿ ಬಿಲ್ಡರ್​ ಜಿಮ್​ ​ರವಿ ಸಿನಿ ಪ್ರಯತ್ನ; ಸೆನ್ಸಾರ್​ ಪರೀಕ್ಷೆಗೆ ಸಜ್ಜಾದ ‘ಪುರುಷೋತ್ತಮ’ ಚಿತ್ರ

Gym Ravi: ಜಿಮ್​ ರವಿ ಮೊದಲ ಬಾರಿಗೆ ಹೀರೋ ಆಗಿರುವ ‘ಪುರುಷೋತ್ತಮ’ ಚಿತ್ರಕ್ಕೆ ಶೀಘ್ರದಲ್ಲೇ ಸೆನ್ಸಾರ್​ ಆಗಲಿದೆ. 2022ರ ಜನವರಿಯಲ್ಲಿ ಟ್ರೇಲರ್ ರಿಲೀಸ್​ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಬಾಡಿ ಬಿಲ್ಡರ್​ ಜಿಮ್​ ​ರವಿ ಸಿನಿ ಪ್ರಯತ್ನ; ಸೆನ್ಸಾರ್​ ಪರೀಕ್ಷೆಗೆ ಸಜ್ಜಾದ ‘ಪುರುಷೋತ್ತಮ’ ಚಿತ್ರ
ಅಪೂರ್ವಾ, ಜಿಮ್ ರವಿ
TV9 Web
| Edited By: |

Updated on: Dec 29, 2021 | 3:21 PM

Share

ಸಿನಿಮಾ ಮೇಲಿನ ಸೆಳೆತವೇ ಅಂಥದ್ದು. ಎಲ್ಲ ಕ್ಷೇತ್ರದ ಜನರೂ ಇದರತ್ತ ಆಕರ್ಷಿತರಾಗುತ್ತಾರೆ. ಬಾಡಿ ಬಿಲ್ಡಿಂಗ್​  ಕ್ಷೇತ್ರದಲ್ಲಿ ಹೆಸರು ಗಳಿಸಿದ ಜಿಮ್​ ರವಿ (Gym Ravi) ಅವರಿಗೂ ಸಿನಿಮಾ ಸೆಳೆತ ತಪ್ಪಿಲ್ಲ. ಇದೇ ಮೊದಲ ಬಾರಿಗೆ ಅವರು ‘ಪುರುಷೋತ್ತಮ’ ಸಿನಿಮಾ (Purushottama Movie) ಮೂಲಕ ಹೀರೋ ಆಗಿದ್ದಾರೆ. 2021ರ ಆರಂಭದಲ್ಲಿ ಸೆಟ್ಟೇರಿದ ಈ ಚಿತ್ರಕ್ಕೆ ಈಗ ಬಹುತೇಕ ಕೆಲಸಗಳು ಮುಗಿದಿವೆ. ಆ ಮೂಲಕ ಹಿಡಿದ ಕೆಲಸವನ್ನು ಪೂರ್ಣಗೊಳಿಸುವ ಬದ್ಧತೆಯನ್ನು ಜಿಮ್​ ರವಿ (Bodybuilder Ravi) ತೋರಿದ್ದಾರೆ. ಶೀಘ್ರದಲ್ಲೇ ‘ಪುರುಷೋತ್ತಮ’ ಚಿತ್ರಕ್ಕೆ ಸೆನ್ಸಾರ್​ ಪರೀಕ್ಷೆ ಎದುರಾಗಲಿದೆ. ಈ ಚಿತ್ರಕ್ಕೆ ಜಿಮ್​ ರವಿ ಅವರೇ ನಿರ್ಮಾಪಕ.

ಚಿತ್ರೀಕರಣ ಮತ್ತು ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳನ್ನು ಮುಗಿಸಿಕೊಂಡಿರುವ ‘ಪುರುಷೋತ್ತಮ’ ಚಿತ್ರತಂಡ ಈಗ ಕೊನೇ ಹಂತದ ಕೆಲಸಗಳಲ್ಲಿ ಬ್ಯುಸಿ ಆಗಿದೆ. ಈ ಚಿತ್ರಕ್ಕೆ ಅಮರನಾಥ್​ ಎಸ್​.ವಿ. ನಿರ್ದೇಶನ ಮಾಡಿದ್ದಾರೆ. ಕಥೆ-ಚಿತ್ರಕಥೆ ಕೂಡ ಅವರದ್ದೇ. ಈ ಹಿಂದೆ ‘ನಾನು ನಮ್ಮುಡ್ಗಿ ಖರ್ಚ್​ಗೊಂದ್​ ಮಾಫಿಯಾ’ ಹಾಗೂ ‘ದಿಲ್ದಾರ್​’ ಸಿನಿಮಾವನ್ನು ನಿರ್ದೇಶಿಸಿದ್ದ ಅನುಭವನನ್ನು ಇಟ್ಟುಕೊಂಡು ಅಮರನಾಥ್​ ಅವರು ‘ಪುರುಷೋತ್ತಮ’ ಚಿತ್ರವನ್ನು ಕಟ್ಟಿಕೊಡುತ್ತಿದ್ದಾರೆ.

ಈ ಸಿನಿಮಾದಲ್ಲಿ ಜಿಮ್​ ರವಿ ಅವರಿಗೆ ಜೋಡಿಯಾಗಿ ನಟಿ ಅಪೂರ್ವಾ ಅಭಿನಯಿಸಿದ್ದಾರೆ. ಎ.ವಿ. ಹರೀಶ್, ಮೈಸೂರು ಪಭು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಆನಂದ್ ಪ್ರಿಯಾ, ಪ್ರಮೋದ್ ಮರವಂತೆ ಹಾಗೂ ನಿರ್ದೇಶಕ ಅಮರನಾಥ್​ ರಚಿಸಿರುವ ಸಾಹಿತ್ಯಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕುಮಾರ್ ಎಂ. ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಕಲೈ ನೃತ್ಯ ನಿರ್ದೇಶನ ಮಾಡಿದ್ದಾರೆ. ರಾಜನ್ ಅವರು ಎಫೆಕ್ಟ್ಸ್​, ಅಕ್ಷಯ್ ಅವರು ಸಿಜಿ ಮತ್ತು ಕಾರ್ತಿಕ್ ಅವರು ವಿಎಫ್‌ಎಕ್ಸ್ ಕೆಲಸಗಳನ್ನು ನಿಭಾಯಿಸಿದ್ದಾರೆ. 2022ರ ಜನವರಿಯಲ್ಲಿ ಟ್ರೇಲರ್ ರಿಲೀಸ್​ ಮಾಡಲು ‘ಪುರುಷೋತ್ತಮ’ ತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಪರಭಾಷೆ ಚಿತ್ರಗಳ ಪೋಷಕ ಪಾತ್ರಗಳಲ್ಲೂ ನಟಿಸಿ, ಅಲ್ಲಿನ ಪ್ರೇಕ್ಷಕರಿಗೂ ಜಿಮ್​ ರವಿ ಪರಿಚಿತರಾಗಿದ್ದಾರೆ. ಈಗ ಅವರು ಮೊದಲ ಬಾರಿಗೆ ಹೀರೋ ಆಗಿರುವ ‘ಪುರುಷೋತ್ತಮ’ ಚಿತ್ರಕ್ಕೆ ತಮಿಳು-ತೆಲುಗಿನಿಂದ ಡಬ್ಬಿಂಗ್​ಗೆ ಬೇಡಿಕೆ ಬಂದಿದೆ ಎಂಬ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಮೊದಲ ಪ್ರತಿ ಸಿದ್ಧಗೊಂಡ ಬಳಿಕ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಮ್​ ರವಿ ನಿರ್ಧರಿಸಿದ್ದಾರೆ.

ಹಾಡುಗಳ ಮೂಲಕ ಗಮನ ಸೆಳೆಯುವ ಪ್ರಯತ್ನವನ್ನು ‘ಪುರುಷೋತ್ತಮ’ ಸಿನಿಮಾ ಮಾಡಿದೆ. ಗಂಡ-ಹೆಂಡತಿ ನಡುವಿನ ಸಾಮರಸ್ಯದ ಕಥೆಯನ್ನು ಈ ಚಿತ್ರದ ಮೂಲಕ ಹೇಳಲಾಗುವುದು. ವಿಜಯ್‌ ರಾಮೇಗೌಡ ಭೂಕನಕೆರೆ ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.

ಇದನ್ನೂ ಓದಿ:

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​

ಪುನೀತ್​ ನಿಧನದ ಬಳಿಕ ಜಿಮ್​ಗೆ ತೆರಳಲು ಯುವಕರ ಹಿಂದೇಟು; ಪೋಷಕರಲ್ಲೂ ಆವರಿಸಿದೆ ಭಯ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ