AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಗ’ ನಟಿಗೆ ಸ್ತನ ಕ್ಯಾನ್ಸರ್​; ಹೊಸ ಫೋಟೋ ನೋಡಿ ಶಾಕ್​ ಆದ ಅಭಿಮಾನಿಗಳು

Hamsa Nandini: ಹಂಸ ನಂದಿನಿ ಇತ್ತೀಚೆಗೆ ಸೋಶಿಯಲ್​ ಮೀಡಿಯಾದಿಂದ ದೂರವೇ ಉಳಿದಿದ್ದರು. ಅವರು ಯಾವುದೇ ಪೋಸ್ಟ್​ಗಳನ್ನು ಹಾಕಿರಲಿಲ್ಲ. ಇದನ್ನು ಕಂಡು ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದರು.

‘ಈಗ’ ನಟಿಗೆ ಸ್ತನ ಕ್ಯಾನ್ಸರ್​; ಹೊಸ ಫೋಟೋ ನೋಡಿ ಶಾಕ್​ ಆದ ಅಭಿಮಾನಿಗಳು
ಹಂಸ ನಂದಿನಿ
TV9 Web
| Edited By: |

Updated on: Dec 20, 2021 | 1:50 PM

Share

ತೆಲುಗು ಹಾಗೂ ಕನ್ನಡ ಚಿತ್ರರಂಗದಲ್ಲಿ ಬಣ್ಣ ಹಚ್ಚಿದ ಹಂಸ ನಂದಿನಿ (Hamsa Nandini) ಅವರಿಗೆ ಕ್ಯಾನ್ಸರ್​ ಪತ್ತೆ ಆಗಿದೆ. ಅವರನ್ನು ನೋಡಿ ಅಭಿಮಾನಿಗಳು ನಿಜಕ್ಕೂ ಶಾಕ್​ ಆಗಿದ್ದಾರೆ. ಕೂದಲು ಇಲ್ಲದ ತಲೆಯ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಾವು ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಲ್ಲಿ ನಿಜಕ್ಕೂ ಆತಂಕ ಮೂಡಿಸಿದೆ. ಅವರು ಈ ಹೋರಾಟದಲ್ಲಿ ಗೆದ್ದು ಬರಲಿದೆ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಕ್ಯಾನ್ಸರ್​ ಪತ್ತೆ ಆದ ಮಧ್ಯೆಯೂ ಅವರ ಪಾಸಿಟಿವಿಟಿ ನೋಡಿ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಹಂಸ ನಂದಿನಿ ಇತ್ತೀಚೆಗೆ ಸೋಶಿಯಲ್​ ಮೀಡಿಯಾದಿಂದ ದೂರವೇ ಉಳಿದಿದ್ದರು. ಅವರು ಯಾವುದೇ ಪೋಸ್ಟ್​ಗಳನ್ನು ಹಾಕಿರಲಿಲ್ಲ. ಇದನ್ನು ಕಂಡು ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದರು. ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳನ್ನು ಕೂಡ ಇಟ್ಟಿದ್ದರು. ಇದೆಲ್ಲದಕ್ಕೂ ಅವರು ಒಂದೇ ಪೋಸ್ಟ್​ ಮೂಲಕ ಉತ್ತರ ನೀಡಿದ್ದಾರೆ. ತಲೆಯ ಕೂದಲನ್ನು ಸಂಪೂರ್ಣವಾಗಿ ತೆಗೆದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಅಲ್ಲದೆ, ತಮಗೆ ಕ್ಯಾನ್ಸರ್​ ಇದೆ ಎಂದು ಬರೆದುಕೊಂಡಿದ್ದಾರೆ.

‘ಜೀವನದಲ್ಲಿ ನಡೆಯುವ ಈ ಘಟನೆ ನನಗೆ ಅನ್ಯಾಯವೆಂದು ತೋರುತ್ತದೆಯಾದರೂ, ನಾನು ಬಲಿಪಶು ಆಗೋಕೆ ನಿರಾಕರಿಸುತ್ತೇನೆ. ನನಗೆ ನಾಲ್ಕು ತಿಂಗಳ ಹಿಂದೆ ಸ್ತನ ಕ್ಯಾನ್ಸರ್​ ಪತ್ತೆ ಆಯಿತು. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ನಾನು ಅನೇಕ ಶಸ್ತ್ರಚಿಕಿತ್ಸೆಗಳಿಗೆ ಒಳಪಡಬೇಕಾಗುತ್ತದೆ. ಎಲ್ಲಾ ಅಪಾಯಗಳನ್ನು ತೊಡೆದುಹಾಕುವುದು ಅಸಾಧ್ಯ. ಈ ಕ್ಯಾನ್ಸರ್ ಎಂಬ ಅಪಾಯವು ನಾನು ಬದುಕಿರುವವರೆಗೂ ಇರುತ್ತದೆ. ನಾನು ಈಗಾಗಲೇ 9 ಬಾರಿ ಕೀಮೋಥೆರಪಿಗೆ ಒಳಗಾಗಿದ್ದೇನೆ. ಇನ್ನೂ 7 ಬಾರಿ ಈ ಥೆರಪಿಗೆ ಒಳಗಾಗಬೇಕು’ ಎಂದು ಅವರು ಬರೆದುಕೊಂಡಿದ್ದಾರೆ. ಈಗ ಅವರ ಒಂದು ಸ್ತನಕ್ಕೆ ಮಾತ್ರ ಕ್ಯಾನ್ಸರ್​ ಇದ್ದು, ಮತ್ತೊಂದು ಸ್ತನಕ್ಕೂ ಈ ಕ್ಯಾನ್ಸರ್​ ಹಬ್ಬುವ ಸಾಧ್ಯತೆ ಶೇ. 70 ಇದೆಯಂತೆ.

2004ರಲ್ಲಿ ಹಂಸ ಅವರು ಚಿತ್ರರಂಗಕ್ಕೆ ಕಾಲಿಟ್ಟರು. 2006ರಲ್ಲಿ ತೆರೆಗೆ ಬಂದ ಕನ್ನಡದ ‘ಮೋಹಿನಿ 9886788888’ ಸಿನಿಮಾ ಮೂಲಕ ಅವರು ಸ್ಯಾಂಡಲ್​ವುಡ್​ಗೂ ಕಾಲಿಟ್ಟರು. ಪ್ರಭಾಸ್​ ನಟನೆಯ ‘ಮಿರ್ಚಿ’ ಚಿತ್ರದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದರೆ, ಸುದೀಪ್​ ಅಭಿನಯದ ‘ಈಗ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. 2018ರಲ್ಲಿ ಬಂದ ‘ಪಂತಂ’ ಸಿನಿಮಾ ಕೊನೆ. ಅದಾದ ನಂತರ ಅವರು ಯಾವುದೇ ಚಿತ್ರಗಳಲ್ಲೂ ನಟಿಸಿಲ್ಲ.

ಇದನ್ನೂ ಓದಿ:ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ 

ಸುದೀಪ್​ ಬಾಡಿಗಾರ್ಡ್​ಗೆ ವಿಡಿಯೋ ಕಾಲ್​ ಮಾಡಿ ಕನ್ನಡದಲ್ಲಿ ಮಾತಾಡಿದ ದೀಪಿಕಾ; ಇದಕ್ಕಿದೆ ವಿಶೇಷ ಕಾರಣ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ