AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈಗ’ ನಟಿಗೆ ಸ್ತನ ಕ್ಯಾನ್ಸರ್​; ಹೊಸ ಫೋಟೋ ನೋಡಿ ಶಾಕ್​ ಆದ ಅಭಿಮಾನಿಗಳು

Hamsa Nandini: ಹಂಸ ನಂದಿನಿ ಇತ್ತೀಚೆಗೆ ಸೋಶಿಯಲ್​ ಮೀಡಿಯಾದಿಂದ ದೂರವೇ ಉಳಿದಿದ್ದರು. ಅವರು ಯಾವುದೇ ಪೋಸ್ಟ್​ಗಳನ್ನು ಹಾಕಿರಲಿಲ್ಲ. ಇದನ್ನು ಕಂಡು ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದರು.

‘ಈಗ’ ನಟಿಗೆ ಸ್ತನ ಕ್ಯಾನ್ಸರ್​; ಹೊಸ ಫೋಟೋ ನೋಡಿ ಶಾಕ್​ ಆದ ಅಭಿಮಾನಿಗಳು
ಹಂಸ ನಂದಿನಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 20, 2021 | 1:50 PM

Share

ತೆಲುಗು ಹಾಗೂ ಕನ್ನಡ ಚಿತ್ರರಂಗದಲ್ಲಿ ಬಣ್ಣ ಹಚ್ಚಿದ ಹಂಸ ನಂದಿನಿ (Hamsa Nandini) ಅವರಿಗೆ ಕ್ಯಾನ್ಸರ್​ ಪತ್ತೆ ಆಗಿದೆ. ಅವರನ್ನು ನೋಡಿ ಅಭಿಮಾನಿಗಳು ನಿಜಕ್ಕೂ ಶಾಕ್​ ಆಗಿದ್ದಾರೆ. ಕೂದಲು ಇಲ್ಲದ ತಲೆಯ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಾವು ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಲ್ಲಿ ನಿಜಕ್ಕೂ ಆತಂಕ ಮೂಡಿಸಿದೆ. ಅವರು ಈ ಹೋರಾಟದಲ್ಲಿ ಗೆದ್ದು ಬರಲಿದೆ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಕ್ಯಾನ್ಸರ್​ ಪತ್ತೆ ಆದ ಮಧ್ಯೆಯೂ ಅವರ ಪಾಸಿಟಿವಿಟಿ ನೋಡಿ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಹಂಸ ನಂದಿನಿ ಇತ್ತೀಚೆಗೆ ಸೋಶಿಯಲ್​ ಮೀಡಿಯಾದಿಂದ ದೂರವೇ ಉಳಿದಿದ್ದರು. ಅವರು ಯಾವುದೇ ಪೋಸ್ಟ್​ಗಳನ್ನು ಹಾಕಿರಲಿಲ್ಲ. ಇದನ್ನು ಕಂಡು ಅಭಿಮಾನಿಗಳು ಅನುಮಾನ ವ್ಯಕ್ತಪಡಿಸಿದ್ದರು. ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳನ್ನು ಕೂಡ ಇಟ್ಟಿದ್ದರು. ಇದೆಲ್ಲದಕ್ಕೂ ಅವರು ಒಂದೇ ಪೋಸ್ಟ್​ ಮೂಲಕ ಉತ್ತರ ನೀಡಿದ್ದಾರೆ. ತಲೆಯ ಕೂದಲನ್ನು ಸಂಪೂರ್ಣವಾಗಿ ತೆಗೆದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಅಲ್ಲದೆ, ತಮಗೆ ಕ್ಯಾನ್ಸರ್​ ಇದೆ ಎಂದು ಬರೆದುಕೊಂಡಿದ್ದಾರೆ.

‘ಜೀವನದಲ್ಲಿ ನಡೆಯುವ ಈ ಘಟನೆ ನನಗೆ ಅನ್ಯಾಯವೆಂದು ತೋರುತ್ತದೆಯಾದರೂ, ನಾನು ಬಲಿಪಶು ಆಗೋಕೆ ನಿರಾಕರಿಸುತ್ತೇನೆ. ನನಗೆ ನಾಲ್ಕು ತಿಂಗಳ ಹಿಂದೆ ಸ್ತನ ಕ್ಯಾನ್ಸರ್​ ಪತ್ತೆ ಆಯಿತು. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ನಾನು ಅನೇಕ ಶಸ್ತ್ರಚಿಕಿತ್ಸೆಗಳಿಗೆ ಒಳಪಡಬೇಕಾಗುತ್ತದೆ. ಎಲ್ಲಾ ಅಪಾಯಗಳನ್ನು ತೊಡೆದುಹಾಕುವುದು ಅಸಾಧ್ಯ. ಈ ಕ್ಯಾನ್ಸರ್ ಎಂಬ ಅಪಾಯವು ನಾನು ಬದುಕಿರುವವರೆಗೂ ಇರುತ್ತದೆ. ನಾನು ಈಗಾಗಲೇ 9 ಬಾರಿ ಕೀಮೋಥೆರಪಿಗೆ ಒಳಗಾಗಿದ್ದೇನೆ. ಇನ್ನೂ 7 ಬಾರಿ ಈ ಥೆರಪಿಗೆ ಒಳಗಾಗಬೇಕು’ ಎಂದು ಅವರು ಬರೆದುಕೊಂಡಿದ್ದಾರೆ. ಈಗ ಅವರ ಒಂದು ಸ್ತನಕ್ಕೆ ಮಾತ್ರ ಕ್ಯಾನ್ಸರ್​ ಇದ್ದು, ಮತ್ತೊಂದು ಸ್ತನಕ್ಕೂ ಈ ಕ್ಯಾನ್ಸರ್​ ಹಬ್ಬುವ ಸಾಧ್ಯತೆ ಶೇ. 70 ಇದೆಯಂತೆ.

2004ರಲ್ಲಿ ಹಂಸ ಅವರು ಚಿತ್ರರಂಗಕ್ಕೆ ಕಾಲಿಟ್ಟರು. 2006ರಲ್ಲಿ ತೆರೆಗೆ ಬಂದ ಕನ್ನಡದ ‘ಮೋಹಿನಿ 9886788888’ ಸಿನಿಮಾ ಮೂಲಕ ಅವರು ಸ್ಯಾಂಡಲ್​ವುಡ್​ಗೂ ಕಾಲಿಟ್ಟರು. ಪ್ರಭಾಸ್​ ನಟನೆಯ ‘ಮಿರ್ಚಿ’ ಚಿತ್ರದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದರೆ, ಸುದೀಪ್​ ಅಭಿನಯದ ‘ಈಗ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. 2018ರಲ್ಲಿ ಬಂದ ‘ಪಂತಂ’ ಸಿನಿಮಾ ಕೊನೆ. ಅದಾದ ನಂತರ ಅವರು ಯಾವುದೇ ಚಿತ್ರಗಳಲ್ಲೂ ನಟಿಸಿಲ್ಲ.

ಇದನ್ನೂ ಓದಿ:ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಇಡಿ ಸಮನ್ಸ್​; ಪನಾಮಾ ಪೇಪರ್ಸ್​ ಲೀಕ್​ ಪ್ರಕರಣದಲ್ಲಿ ಮತ್ತೆ ಸಂಕಷ್ಟ 

ಸುದೀಪ್​ ಬಾಡಿಗಾರ್ಡ್​ಗೆ ವಿಡಿಯೋ ಕಾಲ್​ ಮಾಡಿ ಕನ್ನಡದಲ್ಲಿ ಮಾತಾಡಿದ ದೀಪಿಕಾ; ಇದಕ್ಕಿದೆ ವಿಶೇಷ ಕಾರಣ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?