AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಸಲೇಖ 70ನೇ ಜನ್ಮದಿನ: ಸಂಗೀತ, ಸಾಹಿತ್ಯ, ಸಂಭಾಷಣೆ, ಚಿತ್ರಕಥೆಯಲ್ಲಿ ಗೆದ್ದ ನಾದಬ್ರಹ್ಮನ ಒಂದು ಯೋಜನೆ ಇನ್ನೂ ಕೈಗೂಡಿಲ್ಲ; ಏನದು?

Happy Birthday Hamsalekha: ಸಂಗೀತ, ಸಾಹಿತ್ಯ ಮಾತ್ರವಲ್ಲದೆ ಚಿತ್ರರಂಗದ ಹಲವು ವಿಭಾಗಗಳಲ್ಲಿ ದುಡಿದವರು ಹಂಸಲೇಖ. ಆದರೂ ಅವರು ಅಂದುಕೊಂಡ ಆ ಒಂದು ಕೆಲಸ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಹಂಸಲೇಖ 70ನೇ ಜನ್ಮದಿನ: ಸಂಗೀತ, ಸಾಹಿತ್ಯ, ಸಂಭಾಷಣೆ, ಚಿತ್ರಕಥೆಯಲ್ಲಿ ಗೆದ್ದ ನಾದಬ್ರಹ್ಮನ ಒಂದು ಯೋಜನೆ ಇನ್ನೂ ಕೈಗೂಡಿಲ್ಲ; ಏನದು?
ನಾದಬ್ರಹ್ಮ ಹಂಸಲೇಖ
TV9 Web
| Updated By: ಆಯೇಷಾ ಬಾನು|

Updated on: Jun 23, 2021 | 7:18 AM

Share

ಕನ್ನಡ ಚಿತ್ರರಂಗಕ್ಕೆ ‘ನಾದಬ್ರಹ್ಮ’ ಹಂಸಲೇಖ ನೀಡಿದ ಕೊಡುಗೆ ಅಪಾರ. ಇಂದು (ಜೂ.23) ಅವರು 70ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಅನೇಕರು ಶುಭಾಶಯ ತಿಳಿಸುತ್ತಿದ್ದಾರೆ. ಕೋಟ್ಯಂತರ ಅಭಿಮಾನಿಗಳು, ಅಪಾರ ಸಂಖ್ಯೆಯ ಶಿಷ್ಯವರ್ಗ ಹಾಗೂ ಚಿತ್ರರಂಗದ ಸ್ನೇಹಿತರಿಂದ ಈ ದಿಗ್ಗಜನಿಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. 350ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಆದರೆ ಚಿತ್ರರಂಗದಲ್ಲಿ ಅವರು ಅಂದುಕೊಂಡ ಒಂದು ಯೋಜನೆ ಮಾತ್ರ ಈವರೆಗೂ ಕೈಗೂಡಿಲ್ಲ.

ಸಂಗೀತ ನಿರ್ದೇಶಕನಾಗಿ ಫೇಮಸ್​ ಆಗಿರುವ ಹಂಸಲೇಖ ನೀಡಿದ ಹಿಟ್ ಸಾಂಗ್​ಗಳಿಗೆ ಲೆಕ್ಕವಿಲ್ಲ. ಅವರ ಸಾಹಿತ್ಯವಂತೂ ಎವರ್​ಗ್ರೀನ್​. ಪ್ರೀತಿ-ಪ್ರೇಮ, ತುಂಟತನ, ರೊಮ್ಯಾನ್ಸ್​ನಿಂದ ಹಿಡಿದು ಅಧ್ಯಾತ್ಮದವರೆಗೆ ಎಲ್ಲ ಬಗೆಯ ಹಾಡುಗಳನ್ನೂ ಅವರು ಬರೆದು ಸೈ ಎನಿಸಿಕೊಂಡಿದ್ದಾರೆ. ಪ್ರೇಮಲೋಕ, ರಣಧೀರ, ಯುಗಪುರುಷ, ಹಳ್ಳಿಮೇಷ್ಟ್ರು ಮುಂತಾದ ಚಿತ್ರಗಳಿಗೆ ಸಂಭಾಷಣೆಯನ್ನೂ ಬರೆದರು. ಕೆಲವು ಸಿನಿಮಾಗಳಿಗೆ ಕಥೆ ಮತ್ತು ಚಿತ್ರಕಥೆಯನ್ನೂ ಬರೆದರು. ಆದರೆ ಹಂಸಲೇಖ ಅವರು ಕೈಹಾಕಿದ ಒಂದು ಕೆಲಸ ಮಾತ್ರ ಇನ್ನೂ ಈಡೇರಲಿಲ್ಲ. ಅದು ನಿರ್ದೇಶನ!

ಹೌದು, ಹಲವು ವರ್ಷಗಳ ಹಿಂದೆಯೇ ಸಿನಿಮಾ ನಿರ್ದೇಶನ ಮಾಡಲು ಹಂಸಲೇಖ ಪ್ಲ್ಯಾನ್​ ಮಾಡಿಕೊಂಡಿದ್ದರು. ನಾಲ್ಕೂವರೆ ದಶಕಗಳಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಹಂಸಲೇಖ ಅವರ ಅನುಭವ ಅಪಾರವಾದದ್ದು. ನೂರಾರು ನಟ-ನಟಿಯರ ಜೊತೆ, ನಿರ್ದೇಶಕ-ನಿರ್ಮಾಪಕರ ಜೊತೆ ಅವರು ಕೆಲಸ ಮಾಡಿದ್ದಾರೆ. ಈ ಎಲ್ಲ ಅನುಭವದ ಆಧಾರದ ಮೇಲೆ ದಶಕದ ಹಿಂದೆಯೇ ಅವರು ಒಂದು ಸಿನಿಮಾ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ ಅದು ಕಾರಣಾಂತರಗಳಿಂದ ಕೈಗೂಡಲಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಅವರು ಮತ್ತೆ ನಿರ್ದೇಶನದ ಬಗ್ಗೆ ಆಸಕ್ತಿ ತೋರಿಸಿದ್ದರು. ‘ಶಾಕುಂತ್ಲೆ’ ಎಂಬ ಸಿನಿಮಾವನ್ನು ನಿರ್ದೇಶಿಸುವ ಕುರಿತು ಪ್ರಸ್ತಾಪ ಮಾಡಿದ್ದರು. ಅದಕ್ಕಾಗಿ ಪೂರ್ವ ತಯಾರಿಯನ್ನೂ ಅವರು ಮಾಡಿಕೊಂಡಿದ್ದರು. ಅದಾಗಿ ಎರಡು-ಮೂರು ವರ್ಷಗಳು ಕಳೆದರೂ ಆ ಚಿತ್ರ ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಅವರ ನಿರ್ದೇಶನದಲ್ಲಿ ಮೂಡಿಬರುವ ಸಿನಿಮಾವನ್ನು ಕಣ್ತುಂಬಿಕೊಳ್ಳಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ. ಆದಷ್ಟು ಬೇಗ ಅವರು ತಮ್ಮ ನಿರ್ದೇಶನದ ಯೋಜನೆಯನ್ನು ಪೂರ್ಣಗೊಳಿಸುವಂತಾಗಲಿ ಎಂಬುದು ಸಿನಿಪ್ರಿಯರ ಆಶಯ.

ಇದನ್ನೂ ಓದಿ:

ಮಹಾನ್ ಗಾಯಕನ ಆರೋಗ್ಯಕ್ಕಾಗಿ ರಮಣೀಯ ಹಿನ್ನೆಲೆಯಲ್ಲಿ ಹಾಡು ಸಂಯೋಜಿಸಿದ ನಾದ ಬ್ರಹ್ಮ

ಮೂಲತಃ ತೆಲುಗಿನವರಾದರೂ ಎಸ್​ಪಿಬಿಗೆ ಕರ್ನಾಟಕದ ಮೇಲಿತ್ತು ಬೆಟ್ಟದಷ್ಟು ಪ್ರೀತಿ; ಕಾರಣ ಏನು?

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್