AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ವಿವಾದವನ್ನು ಬೆಳೆಸಬೇಡಿ’; ಜೈನ ಧರ್ಮದವರ ಬಳಿ ಕ್ಷಮೆ ಕೇಳಿದ ಹಂಸಲೇಖ

ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಹಂಸಲೇಖ ಅವರು ‘ಜೈನರ ಫಿಲಾಸಫಿಯಲ್ಲಿ 24 ಜನ್ಮಗಳು ಇವೆಯಂತೆ. ಅದೆಲ್ಲ ಸುಳ್ಳು, ಬುಲ್​ಶಿಟ್’ ಎಂದು ಹೇಳಿದ್ದರು ಹಂಸಲೇಖ. ಇದಕ್ಕೆ ಅನೇಕರು ವಿರೋಧ ಹೊರ ಹಾಕಿದ್ದರು. ಈಗ ಹಂಸಲೇಖ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

‘ಈ ವಿವಾದವನ್ನು ಬೆಳೆಸಬೇಡಿ’; ಜೈನ ಧರ್ಮದವರ ಬಳಿ ಕ್ಷಮೆ ಕೇಳಿದ ಹಂಸಲೇಖ
ಹಂಸಲೇಖ
ರಾಜೇಶ್ ದುಗ್ಗುಮನೆ
|

Updated on: Jul 20, 2024 | 7:31 AM

Share

ಹಂಸಲೇಖ ಅವರು ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಾಡುಗಳನ್ನು ನೀಡಿದ್ದಾರೆ. ಅವರ ಹಾಡುಗಳು ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ. ಹಂಸಲೇಖ ಗೀತ ಸಾಹಿತ್ಯಕ್ಕೆ ಮರುಳಾಗದವರೇ ಇಲ್ಲ. ಅವರ ಹಾಡುಗಳ ಬಗ್ಗೆ ಯಾರಿಗೂ ತಕರಾರು ಇಲ್ಲ. ಆದರೆ, ವೈಯಕ್ತಿವಾಗಿ ಕೆಲವೊಮ್ಮೆ ಅವರು ವಿವಾದಗಳನ್ನು ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ಜೈನ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಇದು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಅನೇಕರು ಹಂಸಲೇಖ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದರು. ಅಂತೆಯೇ ಹಂಸಲೇಖ ಅವರು ಕ್ಷಮೆ ಕೇಳಿದ್ದಾರೆ.

ಹಂಸಲೇಖ ಹೇಳಿದ್ದು ಏನು?

ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಹಂಸಲೇಖ ಅವರು ‘ಜೈನರ ಫಿಲಾಸಫಿಯಲ್ಲಿ 24 ಜನ್ಮಗಳು ಇವೆಯಂತೆ. ಅದೆಲ್ಲ ಸುಳ್ಳು, ಬುಲ್​ಶಿಟ್’ ಎಂದು ಹೇಳಿದ್ದರು ಹಂಸಲೇಖ. ಇದಕ್ಕೆ ಜೈನ ಧರ್ಮದವರು ವಿರೋಧ ವ್ಯಕ್ತಪಡಿಸಿದ್ದಾರೆ. ‘ಹಂಸಲೇಖ ಅವರು ಸಾರ್ವಜನಿಕವಾಗಿ ಜೈನ ಧರ್ಮವನ್ನು ಹೀಯಾಳಿಸಿದ್ದು ಸರಿ ಅಲ್ಲ. ಜಗತ್ತಿನ ಅತೀ ದೊಡ್ಡ ಅಂಹಿಸಾಮಯ ಹಾಗೂ ದಾನಧರ್ಮಗಳಲ್ಲಿ ಅಗ್ರ ಸ್ಥಾನದಲ್ಲಿ ಇರುವ ಜೈನ ಧರ್ಮವನ್ನು ಟೀಕಿಸಿದ ಹಂಸಲೇಖ ಈಗಲೇ ಕ್ಷಮೆ ಕೇಳಬೇಕು’ ಎಂದು ಜೈನ ಧರ್ಮದವರು ಆಗ್ರಹಿಸಿದ್ದರು.

ವಿಡಿಯೋ..

ಈಗ ಹಂಸಲೇಖ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಇದು ಬಾಯ್ತಪ್ಪಿನಿಂದ ಆಡಿರೋ ಮಾತು ಎಂದಿರೋ ಅವರು, ಇನ್ಮುಂದೆ ಈ ರೀತಿಯ ತಪ್ಪನ್ನು ಮಾಡುವುದಿಲ್ಲ ಎನ್ನುವ ಭರವಸೆ ನಿಡಿದ್ದಾರೆ.

ಇದನ್ನೂ ಓದಿ: ‘ಪ್ಯಾನ್ ಇಂಡಿಯಾ ಅಂದ್ರೆ ಹೀರೋಗಳ ಶೋಕಿ; ದಾಡಿ, ಬಾಡಿ ಬೆಳೆಯತ್ತೆ ಅಷ್ಟೇ’: ಹಂಸಲೇಖ ಗರಂ

‘ದಯಮಾಡಿ ಕ್ಷಮಿಸಿ. ನಾನು ಯಾವತ್ತೂ ಅದರ ವಿರುದ್ಧ ಮಾತನಾಡಬೇಕು ಎಂದು ಯೋಚನೆ ಮಾಡಿದವನಲ್ಲ. ಆ ಪದವನ್ನು ಬಳಕೆ ಮಾಡಬೇಕು ಎಂದು ಕೂಡ ನಾನು ಅಂದುಕೊಂಡಿಲ್ಲ. ನಾನಿದ್ದ ಜಾಗದಲ್ಲಿ ಎಲ್ಲರೂ ಎಳೆದಾಡುತ್ತಿದ್ದರು. ಅವರಿಗೆ ಗದರೋಕೆ ಹೋಗಿ ಈಕಡೆ ಬಂದೆ. ಆ ಮಾತು ಬಂದಿದ್ದು ತಪ್ಪಾಯ್ತು. ಇನ್ನು ಎಂದಿಗೂ ಆ ಮಾತನ್ನು ಆಡಲ್ಲ. ನಾನು ಪಂಪನ ದಾಸಾನು ದಾಸ. ಕನ್ನಡ ಕಟ್ಟಿದ ಆ ಮಹಾನ್ ವ್ಯಕ್ತಿಯ ಸೇವೆಗೆ ನಿಂತಿದ್ದೇನೆ. ಇದನ್ನು ದಯಮಾಡಿ ಬೆಳೆಸಬೇಡಿ. ಪತ್ರದಲ್ಲಿ ಬರೆದು ಪೋಸ್ಟ್ ಮಾಡಿ ಕ್ಷಮೆ ಕೇಳಿದ್ದೇನೆ. ಅದೇ ನನ್ನ ಧ್ವನಿ ಎಂದುಕೊಳ್ಳಿ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು