AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hamsalekha Birthday: ಚಂದನವನಕ್ಕೆ ‘ನಾದಬ್ರಹ್ಮ’ ಹಂಸಲೇಖ ನೀಡಿದ ಕೊಡುಗೆಯ ಅಳೆಯಲು ಸಾಧ್ಯವೇ?

Happy Birthday Hamsalekha: ಹಂಸಲೇಖ ಎಂದರೆ ಯಾವುದೋ ಒಂದು ಪ್ರಕಾರಕ್ಕೆ ಸೀಮಿತವಾದವರಲ್ಲ. ಸಾವಿರಾರು ಸೂಪರ್​ ಹಿಟ್​ ಗೀತೆಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

Hamsalekha Birthday: ಚಂದನವನಕ್ಕೆ ‘ನಾದಬ್ರಹ್ಮ’ ಹಂಸಲೇಖ ನೀಡಿದ ಕೊಡುಗೆಯ ಅಳೆಯಲು ಸಾಧ್ಯವೇ?
ಹಂಸಲೇಖ
TV9 Web
| Edited By: |

Updated on:Jun 23, 2022 | 8:26 AM

Share

ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರ ಬಗ್ಗೆ ಮಾತನಾಡದೇ ಕನ್ನಡ ಚಿತ್ರರಂಗವನ್ನು ಬಣ್ಣಿಸಲು ಸಾಧ್ಯವಿಲ್ಲ. ತಮ್ಮ ಸಂಗೀತದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದ ಹಂಸಲೇಖ ಅವರಿಗೆ ಇಂದು (ಜೂನ್​ 23) ಹುಟ್ಟುಹಬ್ಬದ (Hamsalekha Birthday) ಸಂಭ್ರಮ. ಈ ಸಂಗೀತ ಮಾಂತ್ರಿಕನಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಸೋಶಿಯಲ್​ ಮೀಡಿಯಾ ಮೂಲಕ ವಿಶ್​ ಮಾಡುತ್ತಿದ್ದಾರೆ. ಚಂದನವನವನ್ನು (Sandalwood) ಚಂದಗೊಳಿಸುವಲ್ಲಿ ಹಂಸಲೇಖ ಅವರ ಸಂಗೀತ ಮತ್ತು ಸಾಹಿತ್ಯದ ಕೊಡುಗೆ ಅಪಾರ. ಹಲವು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಈಗಲೂ ಬ್ಯುಸಿ ಆಗಿದ್ದಾರೆ. 71ನೇ ವಯಸ್ಸಿಗೆ ಅವರು ಕಾಲಿಟ್ಟಿದ್ದಾರೆ. ದಣಿವರಿಯದೇ ಅವರು ಕೆಲಸ ಮಾಡುತ್ತಿದ್ದಾರೆ. ಚಿತ್ರರಂಗದಲ್ಲಿ ಅಪಾರ ಸಂಖ್ಯೆಯ ಜನರಿಗೆ ‘ನಾದಬ್ರಹ್ಮ’ ಹಂಸಲೇಖ (Nada Brahma Hamsalekha) ಅವರೇ ಮಾದರಿ. ಅವರನ್ನು ಮಾನಸ ಗುರುಗಳು ಎಂದು ಅನೇಕರು ಕರೆದಿದ್ದಾರೆ.

ಹಂಸಲೇಖ ಅವರ ಸಾಧನೆಗೆ ಸಿಕ್ಕ ಪ್ರಶಸ್ತಿಗಳು ಹಲವು. ಒಂದು ರಾಷ್ಟ್ರ ಪ್ರಶಸ್ತಿ, 6 ಬಾರಿ ಫಿಲ್ಮ್​ ಫೇರ್​ ಪ್ರಶಸ್ತಿ, 10 ಬಾರಿ ರಾಜ್ಯ ಪ್ರಶಸ್ತಿ ಪಡೆದ ಪ್ರತಿಭಾವಂತ ಅವರು. ಹಂಸಲೇಖ ಅವರ ಮೂಲ ಹೆಸರು ಗಂಗರಾಜು. ಚಿಕ್ಕ ವಯಸ್ಸಿನಲ್ಲೇ ಸಂಗೀತದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು ಅವರು ನಂತರ ಕನ್ನಡ ಚಿತ್ರರಂಗವನ್ನೇ ಆಳುವ ಸಂಗೀತ ನಿರ್ದೇಶಕನಾಗಿ ಬೆಳೆದುನಿಂತರು. ಬಹುತೇಕ ಎಲ್ಲ ಸ್ಟಾರ್​ ನಟರ ಸಿನಿಮಾಗಳಿಗೂ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಸಾವಿರಾರು ಸೂಪರ್​ ಹಿಟ್​ ಗೀತೆಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಹಂಸಲೇಖ ಎಂದರೆ ಯಾವುದೋ ಒಂದು ಪ್ರಕಾರಕ್ಕೆ ಸೀಮಿತವಾದವರಲ್ಲ. ‘ಇದು ನನ್ನ ನಿನ್ನ ಪ್ರೇಮಗೀತೆ ಚಿನ್ನ..’ ರೀತಿಯ ಡ್ಯುಯೆಟ್​ ಸಾಂಗ್​ ಬರೆದ ಹಂಸಲೇಖ ಅವರೇ ‘ಒಬ್ಬನೇ ಒಬ್ಬನೇ ಮಂಜುನಾಥನೊಬ್ಬನೇ..’ ಎಂದು ಭಕ್ತಿಪ್ರಧಾನ ಗೀತೆಯನ್ನೂ ಬರೆದರು. ‘ನಿಂಬೆ ಹಣ್ಣಿನಂಥ ಹುಡುಗಿ ಬಂತು ನೋಡು..’ ಎಂದು ಬರೆದು ಪಡ್ಡೆಗಳಿಗೆ ಮನರಂಜನೆ ನೀಡಿದ ಹಂಸಲೇಖ ಅವರೇ ‘ಹುಟ್ಟಿದರೇ ಕನ್ನಡ ನಾಡಲ್​ ಹುಟ್ಟುಬೇಕು..’ ಅಂತ ಬರೆದರು. ‘ಕಾಯಿ ಕಾಯಿ ನುಗ್ಗೆಕಾಯಿ..’ ಎಂದವರೂ ಅವರೇ, ‘ಬಾಳುವಂಥ ಹೂವೇ ಬಾಡುವಾಸೆ ಏಕೆ..’ ಎಂದು ಬುದ್ಧಿಮಾತಿನ ಹಾಡು ಬರೆದವರು ಅವರೇ. ಹೀಗೆ ಹಂಸಲೇಖ ಅವರ ಪ್ರತಿಭೆ ಅಪಾರ.

ಇದನ್ನೂ ಓದಿ
Image
ನಿಘಂಟುಗಳಿಂದ ಶೂದ್ರ ಪದ ತೆಗೆದುಹಾಕಬೇಕು: ಶೂದ್ರ ಹೋಗಿ ಶುದ್ಧವಾಗಬೇಕು; ಹಂಸಲೇಖ
Image
‘ನೀನೇ ಬೇಕು ನೀನೇ ಬೇಕು ಎನ್ನುವಂತಾಗಲಿ’: ವಸಿಷ್ಠ ಸಿಂಹ, ಡಾಲಿ ಧನಂಜಯಗೆ ಹಂಸಲೇಖ ಹಾರೈಕೆ
Image
‘ನನ್ನನ್ನು ಮನುಷ್ಯನನ್ನಾಗಿಸಿದ ಗುರುಗಳು ನೀವು’: ಹಂಸಲೇಖ ಬಗ್ಗೆ ಡಾಲಿ ಧನಂಜಯ ಮಾತು
Image
‘ನಾನು ಭಯಸ್ತ ಅಲ್ಲ, ಮಾಗಡಿ ರೋಡ್​ನಲ್ಲಿ ಪೋಲಿ ಆಟಗಳನ್ನ ಆಡಿ ಬಂದವನು’; ಹಂಸಲೇಖ

ಸಿನಿಮಾ ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಹತ್ತಾರು ಬಗೆಯ ಪ್ರಯೋಗಗಳನ್ನು ಮಾಡಿ ಸೈ ಎನಿಸಿಕೊಂಡವರು ಹಂಸಲೇಖ. ಅವರಿಗೆ ಸರಿಸಾಟಿಯಾಗುವಂತಹ ಮತ್ತೋರ್ವ ವ್ಯಕ್ತಿ ಇಲ್ಲ ಎನ್ನಬಹುದು. ಅವರು ನೀಡಿದ ಕೊಡುಗೆಯನ್ನು ಅಳೆಯಲು ಸಾಧ್ಯವಿಲ್ಲ. ಸದ್ಯ ಅವರು ‘ನಡೆದಾಡೋ ದೇವರ ಬಸವ ಭಾರತ’ ಮಿನಿ ಸಿನಿ ಸೀರಿಸ್​ನ ಸಾರಥ್ಯ ವಹಿಸಿದ್ದಾರೆ. ಸಿದ್ದಗಂಗಾ ಶ್ರೀಗಳ ಕುರಿತು ಈ ಕಿರುಚಿತ್ರ ಸರಣಿ ಸಿದ್ಧವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:50 am, Thu, 23 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್