AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hamsalekha Birthday: ಚಂದನವನಕ್ಕೆ ‘ನಾದಬ್ರಹ್ಮ’ ಹಂಸಲೇಖ ನೀಡಿದ ಕೊಡುಗೆಯ ಅಳೆಯಲು ಸಾಧ್ಯವೇ?

Happy Birthday Hamsalekha: ಹಂಸಲೇಖ ಎಂದರೆ ಯಾವುದೋ ಒಂದು ಪ್ರಕಾರಕ್ಕೆ ಸೀಮಿತವಾದವರಲ್ಲ. ಸಾವಿರಾರು ಸೂಪರ್​ ಹಿಟ್​ ಗೀತೆಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

Hamsalekha Birthday: ಚಂದನವನಕ್ಕೆ ‘ನಾದಬ್ರಹ್ಮ’ ಹಂಸಲೇಖ ನೀಡಿದ ಕೊಡುಗೆಯ ಅಳೆಯಲು ಸಾಧ್ಯವೇ?
ಹಂಸಲೇಖ
TV9 Web
| Edited By: |

Updated on:Jun 23, 2022 | 8:26 AM

Share

ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರ ಬಗ್ಗೆ ಮಾತನಾಡದೇ ಕನ್ನಡ ಚಿತ್ರರಂಗವನ್ನು ಬಣ್ಣಿಸಲು ಸಾಧ್ಯವಿಲ್ಲ. ತಮ್ಮ ಸಂಗೀತದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದ ಹಂಸಲೇಖ ಅವರಿಗೆ ಇಂದು (ಜೂನ್​ 23) ಹುಟ್ಟುಹಬ್ಬದ (Hamsalekha Birthday) ಸಂಭ್ರಮ. ಈ ಸಂಗೀತ ಮಾಂತ್ರಿಕನಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಸೋಶಿಯಲ್​ ಮೀಡಿಯಾ ಮೂಲಕ ವಿಶ್​ ಮಾಡುತ್ತಿದ್ದಾರೆ. ಚಂದನವನವನ್ನು (Sandalwood) ಚಂದಗೊಳಿಸುವಲ್ಲಿ ಹಂಸಲೇಖ ಅವರ ಸಂಗೀತ ಮತ್ತು ಸಾಹಿತ್ಯದ ಕೊಡುಗೆ ಅಪಾರ. ಹಲವು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಈಗಲೂ ಬ್ಯುಸಿ ಆಗಿದ್ದಾರೆ. 71ನೇ ವಯಸ್ಸಿಗೆ ಅವರು ಕಾಲಿಟ್ಟಿದ್ದಾರೆ. ದಣಿವರಿಯದೇ ಅವರು ಕೆಲಸ ಮಾಡುತ್ತಿದ್ದಾರೆ. ಚಿತ್ರರಂಗದಲ್ಲಿ ಅಪಾರ ಸಂಖ್ಯೆಯ ಜನರಿಗೆ ‘ನಾದಬ್ರಹ್ಮ’ ಹಂಸಲೇಖ (Nada Brahma Hamsalekha) ಅವರೇ ಮಾದರಿ. ಅವರನ್ನು ಮಾನಸ ಗುರುಗಳು ಎಂದು ಅನೇಕರು ಕರೆದಿದ್ದಾರೆ.

ಹಂಸಲೇಖ ಅವರ ಸಾಧನೆಗೆ ಸಿಕ್ಕ ಪ್ರಶಸ್ತಿಗಳು ಹಲವು. ಒಂದು ರಾಷ್ಟ್ರ ಪ್ರಶಸ್ತಿ, 6 ಬಾರಿ ಫಿಲ್ಮ್​ ಫೇರ್​ ಪ್ರಶಸ್ತಿ, 10 ಬಾರಿ ರಾಜ್ಯ ಪ್ರಶಸ್ತಿ ಪಡೆದ ಪ್ರತಿಭಾವಂತ ಅವರು. ಹಂಸಲೇಖ ಅವರ ಮೂಲ ಹೆಸರು ಗಂಗರಾಜು. ಚಿಕ್ಕ ವಯಸ್ಸಿನಲ್ಲೇ ಸಂಗೀತದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು ಅವರು ನಂತರ ಕನ್ನಡ ಚಿತ್ರರಂಗವನ್ನೇ ಆಳುವ ಸಂಗೀತ ನಿರ್ದೇಶಕನಾಗಿ ಬೆಳೆದುನಿಂತರು. ಬಹುತೇಕ ಎಲ್ಲ ಸ್ಟಾರ್​ ನಟರ ಸಿನಿಮಾಗಳಿಗೂ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಸಾವಿರಾರು ಸೂಪರ್​ ಹಿಟ್​ ಗೀತೆಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಹಂಸಲೇಖ ಎಂದರೆ ಯಾವುದೋ ಒಂದು ಪ್ರಕಾರಕ್ಕೆ ಸೀಮಿತವಾದವರಲ್ಲ. ‘ಇದು ನನ್ನ ನಿನ್ನ ಪ್ರೇಮಗೀತೆ ಚಿನ್ನ..’ ರೀತಿಯ ಡ್ಯುಯೆಟ್​ ಸಾಂಗ್​ ಬರೆದ ಹಂಸಲೇಖ ಅವರೇ ‘ಒಬ್ಬನೇ ಒಬ್ಬನೇ ಮಂಜುನಾಥನೊಬ್ಬನೇ..’ ಎಂದು ಭಕ್ತಿಪ್ರಧಾನ ಗೀತೆಯನ್ನೂ ಬರೆದರು. ‘ನಿಂಬೆ ಹಣ್ಣಿನಂಥ ಹುಡುಗಿ ಬಂತು ನೋಡು..’ ಎಂದು ಬರೆದು ಪಡ್ಡೆಗಳಿಗೆ ಮನರಂಜನೆ ನೀಡಿದ ಹಂಸಲೇಖ ಅವರೇ ‘ಹುಟ್ಟಿದರೇ ಕನ್ನಡ ನಾಡಲ್​ ಹುಟ್ಟುಬೇಕು..’ ಅಂತ ಬರೆದರು. ‘ಕಾಯಿ ಕಾಯಿ ನುಗ್ಗೆಕಾಯಿ..’ ಎಂದವರೂ ಅವರೇ, ‘ಬಾಳುವಂಥ ಹೂವೇ ಬಾಡುವಾಸೆ ಏಕೆ..’ ಎಂದು ಬುದ್ಧಿಮಾತಿನ ಹಾಡು ಬರೆದವರು ಅವರೇ. ಹೀಗೆ ಹಂಸಲೇಖ ಅವರ ಪ್ರತಿಭೆ ಅಪಾರ.

ಇದನ್ನೂ ಓದಿ
Image
ನಿಘಂಟುಗಳಿಂದ ಶೂದ್ರ ಪದ ತೆಗೆದುಹಾಕಬೇಕು: ಶೂದ್ರ ಹೋಗಿ ಶುದ್ಧವಾಗಬೇಕು; ಹಂಸಲೇಖ
Image
‘ನೀನೇ ಬೇಕು ನೀನೇ ಬೇಕು ಎನ್ನುವಂತಾಗಲಿ’: ವಸಿಷ್ಠ ಸಿಂಹ, ಡಾಲಿ ಧನಂಜಯಗೆ ಹಂಸಲೇಖ ಹಾರೈಕೆ
Image
‘ನನ್ನನ್ನು ಮನುಷ್ಯನನ್ನಾಗಿಸಿದ ಗುರುಗಳು ನೀವು’: ಹಂಸಲೇಖ ಬಗ್ಗೆ ಡಾಲಿ ಧನಂಜಯ ಮಾತು
Image
‘ನಾನು ಭಯಸ್ತ ಅಲ್ಲ, ಮಾಗಡಿ ರೋಡ್​ನಲ್ಲಿ ಪೋಲಿ ಆಟಗಳನ್ನ ಆಡಿ ಬಂದವನು’; ಹಂಸಲೇಖ

ಸಿನಿಮಾ ಸಂಗೀತ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಹತ್ತಾರು ಬಗೆಯ ಪ್ರಯೋಗಗಳನ್ನು ಮಾಡಿ ಸೈ ಎನಿಸಿಕೊಂಡವರು ಹಂಸಲೇಖ. ಅವರಿಗೆ ಸರಿಸಾಟಿಯಾಗುವಂತಹ ಮತ್ತೋರ್ವ ವ್ಯಕ್ತಿ ಇಲ್ಲ ಎನ್ನಬಹುದು. ಅವರು ನೀಡಿದ ಕೊಡುಗೆಯನ್ನು ಅಳೆಯಲು ಸಾಧ್ಯವಿಲ್ಲ. ಸದ್ಯ ಅವರು ‘ನಡೆದಾಡೋ ದೇವರ ಬಸವ ಭಾರತ’ ಮಿನಿ ಸಿನಿ ಸೀರಿಸ್​ನ ಸಾರಥ್ಯ ವಹಿಸಿದ್ದಾರೆ. ಸಿದ್ದಗಂಗಾ ಶ್ರೀಗಳ ಕುರಿತು ಈ ಕಿರುಚಿತ್ರ ಸರಣಿ ಸಿದ್ಧವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:50 am, Thu, 23 June 22

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ