Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ ಜನ್ಮದಿನ; ಸಂಸದೆ ಸುಮಲತಾ ಅಂಬರೀಷ್ ಮಾಡುವ ಕೆಲಸಗಳೇನು?

ಕೊವಿಡ್​ ಲಾಕ್​ಡೌನ್​ ಇರುವ ಕಾರಣ ಸಮಾಧಿ ಬಳಿ ಅಭಿಮಾನಿಗಳಿಗೆ ತೆರಳಲು ಅವಕಾಶ ಇರುವುದಿಲ್ಲ. ಬೆಳಗ್ಗೆ 8-9 ಗಂಟೆವರೆಗೆ ಸಮಾಧಿ ಬಳಿ ನಮನ ಸಲ್ಲಿಸಿದ ನಂತರ ಸುಮಲತಾ ದೊಡ್ಡರಸಿನಕರೆಗೆ ತೆರಳಲಿದ್ದಾರೆ.

ಅಂಬರೀಷ್​ ಜನ್ಮದಿನ; ಸಂಸದೆ ಸುಮಲತಾ ಅಂಬರೀಷ್ ಮಾಡುವ ಕೆಲಸಗಳೇನು?
ಎಲ್ಲವೂ ಸುಸ್ಥಿತಿಯಲ್ಲಿದ್ದರೆ ಅಂಬಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದರು. ಅನೇಕ ಕಡೆಗಳಲ್ಲಿ ಅನ್ನಸಂತರ್ಪಣೆ ನಡೆಯುತ್ತಿತ್ತು. ಕೆಲವು ಕಡೆಗಳಲ್ಲಿ ಅಂಬಿ ಕಟೌಟ್​ ಹಾಕಿ ಹಾಲಿನ ಅಭಿಷೇಕ ಮಾಡಲಾಗುತ್ತಿತ್ತು.
Follow us
ರಾಜೇಶ್ ದುಗ್ಗುಮನೆ
|

Updated on: May 28, 2021 | 8:44 PM

ಶನಿವಾರ (ಮೇ 29) ರೆಬೆಲ್​ ಸ್ಟಾರ್​ ಅಂಬರೀಷ್​​ ಜನ್ಮದಿನ. ಪರಿಸ್ಥಿತಿ ಸರಿಯಿದ್ದು, ಅವರು ನಮ್ಮೊಂದಿಗೆ ಇದ್ದಿದ್ದರೆ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಕೇಕ್​ ಕತ್ತರಿಸಿ ಸಂಭ್ರಮಿಸುತ್ತಿದ್ದರು. ಆದರೆ, ಅಂಬರೀಷ್​ ಈಗ ನಮ್ಮೊಂದಿಗಿಲ್ಲ. ಹೀಗಾಗಿ, ಅವರ ಪತ್ನಿ, ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್​​ ಕಂಠೀರವ ಸ್ಟುಡಿಯೋಗೆ ತೆರಳಿ ಅಂಬರೀಷ್​ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ.

ಕೊವಿಡ್​ ಲಾಕ್​ಡೌನ್​ ಇರುವ ಕಾರಣ ಸಮಾಧಿ ಬಳಿ ಅಭಿಮಾನಿಗಳಿಗೆ ತೆರಳಲು ಅವಕಾಶ ಇರುವುದಿಲ್ಲ. ಬೆಳಗ್ಗೆ 8-9 ಗಂಟೆವರೆಗೆ ಸಮಾಧಿ ಬಳಿ ನಮನ ಸಲ್ಲಿಸಿದ ನಂತರ ಸುಮಲತಾ ದೊಡ್ಡರಸಿನಕರೆಗೆ ತೆರಳಲಿದ್ದಾರೆ. ಬೆಳಗ್ಗೆ 11:15ರಿಂದ 11:45ರವರೆಗೆ ಅವರು ಅಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ದೊಡ್ಡರಸಿನಕರೆಯೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಲತಾ ಭೇಟಿ ಮಾಡಲಿದ್ದಾರೆ. 12:45ಕ್ಕೆ ಎಂಐಎಂಎಸ್​ ಕ್ಯಾಂಪಸ್​ನಲ್ಲಿ ಆಹಾರ ವಿತರಣೆ ಮಾಡಲಿದ್ದಾರೆ. ಮಧ್ಯಾಹ್ನ ಅವರು ಊಟವನ್ನು ಮಂಡ್ಯದ ಮನೆಯಲ್ಲೇ ಮಾಡಲಿದ್ದಾರೆ. 2:15ರ ಸುಮಾರಿಗೆ ಅವರು ಪ್ರೆಸ್​ಕ್ಲಬ್​ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರೆಸ್​ಕ್ಲಬ್​ನಲ್ಲಿ ಮಾಧ್ಯಮದವರಿಗೆ ಕೊವಿಡ್​ ಕಿಟ್​ ವಿತರಣೆ ಮಾಡಲಾಗುತ್ತದೆ. ಅಲ್ಲದೆ, ಸುಮಲತಾ ಸುದ್ದಿಗೋಷ್ಠಿ ಕೂಡ ನಡೆಸುತ್ತಿದ್ದಾರೆ. ಮಧ್ಯಾಹ್ನ 3:15ಕ್ಕೆ ಕಾರ್ಯಕ್ರಮ ಪೂರ್ಣಗೊಳ್ಳಳಿದೆ.

ಮೇ 23ಕ್ಕೆ ಸಂಸದೆಯಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಡ್ಯ ಜನರಿಗೆ ಸುಮಲತಾ ಅವರು ಧನ್ಯವಾದ ಹೇಳಿದ್ದರು. ಕರೊನಾ ಸಂಕಷ್ಟದಲ್ಲೂ ಮಂಡ್ಯಕ್ಕೆ ಅವರು ಬರದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಮಂಡ್ಯದಲ್ಲಿ ಕರೊನಾ ಅಬ್ಬರದಿಂದ ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗಿದ್ದರೂ ಅವರು ಅತ್ತ ಮುಖಮಾಡಿಲ್ಲ ಎಂದು ಜನರು ಕಿಡಿಕಾರಿದ್ದರು. ಆದರೆ, ಸುಮಲತಾ ಇದಕ್ಕೆ ಪ್ರತಿಕ್ರಿಯಿಸಿರಲಿಲ್ಲ. ಈಗ ಅವರೇ ಖುದ್ದಾಗಿ ಮಂಡ್ಯಕ್ಕೆ ತೆರಳುತ್ತಿದ್ದು, ಜನರ ಸಮಸ್ಯೆ ಆಲಿಸುತ್ತಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಟ್ರೋಲ್‌ ಮಾಡೋದೆ ಒಂದು ಬಿಸಿನೆಸ್‌. ಏನ್ಮಾಡೋಕ್ಕಾಗುತ್ತೆ : ಸುಮಲತಾ ಅಂಬರೀಶ್‌

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ