AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ ಎಲ್ಲಿಯೂ ಹೋಗಿಲ್ಲ, ಅವರು ನಮ್ಮ ಜತೆಯೇ ಇದ್ದಾರೆ; ಸುಮಲತಾ ಭಾವುಕ ನುಡಿ

Ambareesh Birthday: ಅಂಬರೀಷ್​ ನಮ್ಮಿಂದ ದೂರವಾದರೂ ಅವರು ಮಾಡಿದ ಕೆಲಸ, ಸಿನಿಮಾಗಳ ಮೂಲಕ ನಮ್ಮೊಂದಿಗೇ ಇದ್ದಾರೆ ಎನ್ನುವ ಭಾವನೆ ಅಭಿಮಾನಿಗಳದ್ದು. ಸುಮಲತಾ ಕೂಡ ಇದೇ ಮನೋಭಾವ ಹೊಂದಿದ್ದಾರೆ.

ಅಂಬರೀಷ್​ ಎಲ್ಲಿಯೂ ಹೋಗಿಲ್ಲ, ಅವರು ನಮ್ಮ ಜತೆಯೇ ಇದ್ದಾರೆ; ಸುಮಲತಾ ಭಾವುಕ ನುಡಿ
ಸುಮಲತಾ-ಅಂಬರೀಷ್​
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:May 29, 2021 | 9:55 AM

Share

2018ರಂದು ರೆಬೆಲ್​ ಸ್ಟಾರ್​ ಅಂಬರೀಷ್​ ಮೃತಪಟ್ಟಿದ್ದರು. ಇದು ಕರ್ನಾಟಕದ ಜನತೆಗೆ ಆಘಾತ ಉಂಟು ಮಾಡಿತ್ತು. ಅವರು ನಮ್ಮನ್ನು ಅಗಲಿ ಎರಡು ವರ್ಷವೇ ಕಳೆದಿದೆ. ಅವರು ಇಲ್ಲದೆಯೇ ಮೂರನೇ ಬಾರಿಗೆ ಅವರ ಜನ್ಮದಿನ ಆಚರಣೆ ಮಾಡಲಾಗುತ್ತಿದೆ. ಈ ಬಾರಿ ಕೊರೊನಾ ಕಾರಣದಿಂದ ಅಂಬರೀಷ್​ ಜನ್ಮದಿನಾಚರಣೆ ಆಚರಿಸಲಾಗುತ್ತಿಲ್ಲ. ಅಂಬರೀಷ್​ ನಮ್ಮಿಂದ ದೂರವಾದರೂ ಅವರು ಮಾಡಿದ ಕೆಲಸ, ಸಿನಿಮಾಗಳ ಮೂಲಕ ನಮ್ಮೊಂದಿಗೇ ಇದ್ದಾರೆ ಎನ್ನುವ ಭಾವನೆ ಅಭಿಮಾನಿಗಳದ್ದು. ಸುಮಲತಾ ಕೂಡ ಇದೇ ಮನೋಭಾವ ಹೊಂದಿದ್ದಾರೆ. ಟಿವಿ9 ಕನ್ನಡಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಆ ಬಗ್ಗೆ ಮಾತನಾಡಿದ್ದಾರೆ.

 ಅನುಭವಿಸಿದ ನೋವು ನನಗೆ ಮಾತ್ರ ಗೊತ್ತು

ಅಂಬರೀಷ್​ ಮೃತಪಟ್ಟ ನಂತರ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಗೆ ನಿಂತು ಗೆದ್ದರು. ಈ ಹಾದಿ ಅಷ್ಟು ಸುಲಭವಾಗಿರಲಿಲ್ಲ. ಈ ವೇಳೆ ಅವರು ಸಾಕಷ್ಟು ಅವಮಾನಗಳನ್ನು ಕೂಡ ಎದುರಿಸಿದರು. ಈ ಬಗ್ಗೆ ಸುಮಲತಾ ಮಾತನಾಡಿದ್ದಾರೆ.

‘ಅಂಬರೀಷ್​ ಮೃತಪಟ್ಟ ನಂತರ ಒಂದು ವರ್ಷಗಳ ಕಾಲ ನಾನು ಅನುಭವಿಸಿದ ನೋವು ನನಗೆ ಗೊತ್ತು. ಸಾರ್ವಜನಿಕವಾಗಿ ಅದನ್ನು ಹೇಳಿಕೊಂಡು ಡ್ರಾಮಾ ಮಡೋಕೆ ಇಷ್ಟ ಇಲ್ಲ’ ಎಂದಿದ್ದಾರೆ ಸುಮಲತಾ.

‘ನಾನು ಹೋಗುವ ಪ್ರತಿಯೊಂದು ಕಡೆಗಳಲ್ಲೂ ಅಂಬರೀಷ್ ಇದಾರೆ. ನಾನು ನಿತ್ಯ ಭೇಟಿ ಮಾಡುವ ವ್ಯಕ್ತಿ ಅಂಬರೀಷ್​ ಬಗ್ಗೆ ಕಥೆ ಹೇಳುತ್ತಾರೆ. ಅವರನ್ನು ಭೇಟಿ ಮಾಡಿದಾಗ ಯಾವ ರೀತಿ ಇತ್ತು, ಅವರು ನನಗೆ ಸಹಾಯ ಮಾಡಿದ್ದರು ಎಂಬುದನ್ನು ವಿವರಿಸುತ್ತಾರೆ. ಅಂಬರೀಷ್ ಎಲ್ಲೂ ಹೋಗಿಲ್ಲ ಎಂಬುದನ್ನು ಪದೇಪದೇ ಸಾಬೀತು ಮಾಡುತ್ತಿದ್ದಾರೆ. ಅಂಬರೀಷ್​ ಅವರೇ ನನ್ನ ಶಕ್ತಿ. ನಾನು ಅವರನ್ನು ಮಿಸ್​ ಮಾಡಿಕೊಳ್ಳುತ್ತಿದ್ದೇನೆ ಎನ್ನುವ ಮಾತಿಲ್ಲ. ಅವರು ಇದಾರೆ ಎನ್ನುವ ಧೈರ್ಯ ಇದೆ’ ಎಂದಿದ್ದಾರೆ ಸುಮಲತಾ.

 ಈ ವರ್ಷ ಆಚರಣೆ ಇಲ್ಲ

ಕೊವಿಡ್​ ಸಂಕಷ್ಟದಲ್ಲಿದ್ದೇವೆ. ನಮಗೆ ಸೆಲೆಬ್ರೇಷನ್ ಮಾಡುವ ಉದ್ದೇಶ ಇಲ್ಲ. ಅಂಬರೀಷ್​ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದರು. ಅದೇರೀತಿ ಮಾಡಬೇಕು ಎನ್ನುವ ಆಸೆ ಇದೆ. ಮುಂದಿನ ವರ್ಷ 70 ವಸಂತವಾಗುತ್ತದೆ. ಒಂದೊಮ್ಮೆ ಕೊರೊನಾ ಮಹಾಮಾರಿ ಹೋದರೆ ಮುಂದಿನ ವರ್ಷ ಏನಾದರೂ ಆಚರಣೆ ಮಾಡಬಹುದು.

ಇದನ್ನೂ ಓದಿ: ಅಂಬರೀಷ್​ ಇಲ್ಲದೆ ಅನುಭವಿಸಿದ ನೋವು ನನಗೆ ಮಾತ್ರ ಗೊತ್ತು; ಭಾವುಕರಾದ ಸುಮಲತಾ ಅಂಬರೀಷ್​

ಅಂಬರೀಷ್​ ಜನ್ಮದಿನದಂದು ಯಾವುದೇ ಸಂಭ್ರಮಾಚರಣೆ ಬೇಡ; ಅಭಿಮಾನಿಗಳಿಗೆ ಸುಮಲತಾ ಮನವಿ 

Published On - 7:26 am, Sat, 29 May 21

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ