AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya Birthday: ನಟಿ ಅಮೂಲ್ಯ ಹುಟ್ಟುಹಬ್ಬ: ಪತಿ ಜಗದೀಶ್​ಗೆ ಈ ದಿನವೇ ವ್ಯಾಲೆಂಟೈನ್ ಡೇ

Happy Birthday Amulya: ಅಮೂಲ್ಯ ಅವರು ಆದಷ್ಟು ಬೇಗ ನಟನೆಗೆ ಮರಳಬೇಕು ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ಆ ಕೋರಿಕೆಯ ಜೊತೆಯಲ್ಲಿ ಎಲ್ಲರೂ ಬರ್ತ್​ಡೇ ವಿಶ್​ ಮಾಡುತ್ತಿದ್ದಾರೆ.

Amulya Birthday: ನಟಿ ಅಮೂಲ್ಯ ಹುಟ್ಟುಹಬ್ಬ: ಪತಿ ಜಗದೀಶ್​ಗೆ ಈ ದಿನವೇ ವ್ಯಾಲೆಂಟೈನ್ ಡೇ
ಅಮೂಲ್ಯ, ಜಗದೀಶ್
TV9 Web
| Updated By: ಮದನ್​ ಕುಮಾರ್​|

Updated on:Sep 14, 2022 | 8:38 AM

Share

ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ (Amulya) ಅವರು ಇಂದು (ಸೆ.14) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ನೆಚ್ಚಿನ ನಟಿಯ ಜನ್ಮದಿನಕ್ಕೆ (Amulya Birthday) ಶುಭ ಕೋರುತ್ತಿದ್ದಾರೆ. ಕುಟುಂಬದವರು, ಸೆಲೆಬ್ರಿಟಿಗಳು ಮತ್ತು ಸ್ನೇಹಿತರಿಂದಲೂ ಶುಭಾಶಯಗಳು ಹರಿದುಬರುತ್ತಿವೆ. ಜಗದೀಶ್​ ಆರ್​. ಚಂದ್ರ ಜೊತೆ ಮದುವೆ ಆದ ಬಳಿಕ ಅಮೂಲ್ಯ ಅವರು ನಟನೆಯಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. ಅವರು ಆದಷ್ಟು ಬೇಗ ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂಬುದು ಅಭಿಮಾನಿಗಳ ಬಯಕೆ. ಈ ವರ್ಷ ಜೂನ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮನೀಡಿದ ಅಮೂಲ್ಯ ಅವರು ಸದ್ಯಕ್ಕೆ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಪತಿ ಜಗದೀಶ್​ (Jagadish R Chandra) ಅವರು ವಿಶೇಷವಾಗಿ ವಿಶ್​ ಮಾಡಿಕೊಂಡಿದ್ದಾರೆ. ತಮ್ಮ ಪಾಲಿಗೆ ಈ ದಿನವೇ ‘ವ್ಯಾಲೆಂಟೈನ್​ ಡೇ’ ಎಂದು ಅವರು ಹೇಳಿದ್ದಾರೆ.

ಅಮೂಲ್ಯ ಜತೆ ಕ್ಲಿಕ್ಕಿಸಿಕೊಂಡಿರುವ ಹತ್ತಾರು ಫೋಟೋಗಳನ್ನು ಜಗದೀಶ್​ ಅವರು ಹಂಚಿಕೊಂಡಿದ್ದಾರೆ. ‘ನನಗೆ ಸೆಪ್ಟೆಂಬರ್​ 14 ವ್ಯಾಲೆಂಟೈನ್​ ಡೇ. ಹುಟ್ಟುಹಬ್ಬದ ಶುಭಾಶಯಗಳು ಅಮೂಲ್ಯ. ನೀನು ಯಾವಾಗಲೂ ಮಿನುಗುವ ನಕ್ಷತ್ರವಾಗಿರಬೇಕು. ಇದು ನಾವು ಕಳೆದ ಪ್ರೀತಿಯ ಕ್ಷಣಗಳು’ ಎಂದು ಈ ಪೋಸ್ಟ್​ಗೆ ಅವರು ಕ್ಯಾಪ್ಷನ್​ ನೀಡಿದ್ದಾರೆ.

ಇದನ್ನೂ ಓದಿ
Image
ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ನಟಿ ಅಮೂಲ್ಯ; ಸಂತೂರ್ ಮಮ್ಮಿ ಎಂದ ಫ್ಯಾನ್ಸ್
Image
ಮಗುವಿನ ಜತೆ ಮೊದಲ ಬಾರಿ ಫೋಟೋ ಹಂಚಿಕೊಂಡ ನಟಿ ಅಮೂಲ್ಯ; ಆದ್ರೂ ಫ್ಯಾನ್ಸ್ ಬೇಸರ
Image
Amulya: ಅಮೂಲ್ಯ- ಜಗದೀಶ್; ತಾರಾ ದಂಪತಿಯ ಮುದ್ದಾದ ಫೋಟೋಗಳು ಇಲ್ಲಿವೆ
Image
Amulya: ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ; ಸಂತಸ ಹಂಚಿಕೊಂಡ ನಟಿಯ ಪತಿ ಜಗದೀಶ್

ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು ಅಮೂಲ್ಯ. ನಂತರ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್​ ಆಗಿ ಬಡ್ತಿ ಪಡೆದರು. ಆ ಸಿನಿಮಾದಿಂದ ಅವರಿಗೆ ಸಿಕ್ಕ ಗೆಲುವು ತುಂಬ ದೊಡ್ಡದು. ‘ಗೋಲ್ಡನ್​ ಸ್ಟಾರ್​’ ಗಣೇಶ್​ ಜತೆ ನಟಿಸಿದ ಆ ಚಿತ್ರ ಸೂಪರ್​ ಹಿಟ್​ ಆಯಿತು. ನಂತರ ಅಮೂಲ್ಯ ಹಿಂತಿರುಗಿ ನೋಡಲೇ ಇಲ್ಲ. ಯಶ್​, ಚಿರಂಜೀವಿ ಸರ್ಜಾ, ನೆನಪಿರಲಿ ಪ್ರೇಮ್, ದುನಿಯಾ ವಿಜಯ್​, ಕೃಷ್ಣ ಅಜಯ್​ ರಾವ್​, ಪ್ರಕಾಶ್​ ರಾಜ್​ ಮುಂತಾದ ಸ್ಟಾರ್​ ನಟರ ಜೊತೆ ಅಭಿನಯಿಸುವ ಚಾನ್ಸ್​ ಪಡೆದುಕೊಂಡರು. ‘ಶ್ರಾವಣಿ ಸುಬ್ರಹ್ಮಣ್ಯ’ ಚಿತ್ರದಲ್ಲಿನ ನಟನೆಗಾಗಿ ಫಿಲ್ಮ್​ಫೇರ್​ ಪ್ರಶಸ್ತಿ ಅವರಿಗೆ ಒಲಿಯಿತು.

2017ರಲ್ಲಿ ಬಂದ ‘ಮುಗುಳು ನಗೆ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ ಬಳಿಕ ಅಮೂಲ್ಯ ಅವರು ಬೇರೆ ಯಾವುದೇ ಸಿನಿಮಾದಲ್ಲೂ ನಟಿಸಿಲ್ಲ. ಮತ್ತೆ ಅವರನ್ನು ದೊಡ್ಡ ಪರದೆಯಲ್ಲಿ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ. ಆ ಆಸೆ ಯಾವಾಗ ನೆರವೇರಲಿದೆಯೋ ತಿಳಿದಿಲ್ಲ. ಒಂದೊಳ್ಳೆಯ ಕಥೆ ಮತ್ತು ಪಾತ್ರದ ಮೂಲಕ ಬೆಳ್ಳಿಪರದೆಗೆ ಅಮೂಲ್ಯ ರೀ-ಎಂಟ್ರಿ ನೀಡಿದರೆ ಅಭಿಮಾನಿಗಳಿಗೆ ಸಖತ್​ ಖುಷಿ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:38 am, Wed, 14 September 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ