AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್
ಆಯ್ರಾ
shruti hegde
|

Updated on:Dec 02, 2020 | 11:50 AM

Share

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಕಳೆದ ವರ್ಷ ಆಯ್ರಾ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದ ದಂಪತಿ, ಕೊರೋನಾ ಇರುವ ಕಾರಣ ಈ ಬಾರಿ ಮನೆಯಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಜನ್ಮದಿನಕ್ಕೆ ವಿಶೇಷ ವಿಶ್​ ಕೂಡ ಮಾಡಿದ್ದಾರೆ ರಾಧಿಕಾ ಪಂಡಿತ್​.

2018 ರ ಡಿಸೆಂಬರ್ 2ರಂದು ಆಯ್ರಾ ಜನಿಸಿದ್ದಳು. ಮಗಳು ಹುಟ್ಟಿದ ನಂತರದಲ್ಲಿ ಯಶ್​ ದಂಪತಿ ಹೆಚ್ಚು ಸಂಭ್ರಮಿಸಿದ್ದರು. ಅಭಿಮಾನಿಗಳು ಕೂಡ ಯಶ್​ಗೆ ಮಗಳು ಹುಟ್ಟಿದ್ದ ವಿಚಾರ ಕೇಳಿ ಖುಷಿಯಾಗಿದ್ದರು. ಯಶ್​ ಮಗಳಿಗೆ ಏನು ಹೆಸರಿಡುತ್ತಾರೆ ಎನ್ನುವ ವಿಚಾರ ಕೂಡ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸ್ಟಾರ್​ ದಂಪತಿಗೆ ಮಗಳ ಮೇಲೆ ಎಲ್ಲಿಲ್ಲದ ಪ್ರೀತಿ. ಇದೇ ಕಾರಣಕ್ಕೆ ರಾಧಿಕಾ ವಿಶೇಷವಾಗಿ ಹಾರೈಸಿದ್ದಾರೆ.

ನೀನು ನಮ್ಮ ಜೀವನದಲ್ಲಿ ಸಂತೋಷ ನೀಡಿದ್ದೀಯಾ ನಮ್ಮ ಪುಟಾಣಿ ಏಂಜಲ್​ಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ರಾಧಿಕಾ ಪಂಡಿತ್​ ಇನ್ಸ್​ಟಾಗ್ರಾಂನಲ್ಲಿ ವಿಶ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬೇಗ ಬೆಳೆಯ ಬೇಡ, ಸಣ್ಣವಳಾಗಿಯೇ ಇರು ಎನ್ನುವ ಕಿವಿಮಾತು ಕೂಡ ಹೇಳಿದ್ದಾರೆ.

ಇನ್ನು ಯಶ್​ ಕೂಡ ಆಯ್ರಾ ಜನ್ಮದಿಕ್ಕೆ ಶುಭಾಶಯ ಕೋರಿ ವಿಡಿಯೋ ಒಂದನ್ನು ಹಾಕಿದ್ದಾರೆ.

View this post on Instagram

A post shared by Yash (@thenameisyash)

Published On - 11:09 am, Wed, 2 December 20

Follow Us
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ