AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್
ಆಯ್ರಾ
shruti hegde
|

Updated on:Dec 02, 2020 | 11:50 AM

Share

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಕಳೆದ ವರ್ಷ ಆಯ್ರಾ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದ ದಂಪತಿ, ಕೊರೋನಾ ಇರುವ ಕಾರಣ ಈ ಬಾರಿ ಮನೆಯಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಜನ್ಮದಿನಕ್ಕೆ ವಿಶೇಷ ವಿಶ್​ ಕೂಡ ಮಾಡಿದ್ದಾರೆ ರಾಧಿಕಾ ಪಂಡಿತ್​.

2018 ರ ಡಿಸೆಂಬರ್ 2ರಂದು ಆಯ್ರಾ ಜನಿಸಿದ್ದಳು. ಮಗಳು ಹುಟ್ಟಿದ ನಂತರದಲ್ಲಿ ಯಶ್​ ದಂಪತಿ ಹೆಚ್ಚು ಸಂಭ್ರಮಿಸಿದ್ದರು. ಅಭಿಮಾನಿಗಳು ಕೂಡ ಯಶ್​ಗೆ ಮಗಳು ಹುಟ್ಟಿದ್ದ ವಿಚಾರ ಕೇಳಿ ಖುಷಿಯಾಗಿದ್ದರು. ಯಶ್​ ಮಗಳಿಗೆ ಏನು ಹೆಸರಿಡುತ್ತಾರೆ ಎನ್ನುವ ವಿಚಾರ ಕೂಡ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸ್ಟಾರ್​ ದಂಪತಿಗೆ ಮಗಳ ಮೇಲೆ ಎಲ್ಲಿಲ್ಲದ ಪ್ರೀತಿ. ಇದೇ ಕಾರಣಕ್ಕೆ ರಾಧಿಕಾ ವಿಶೇಷವಾಗಿ ಹಾರೈಸಿದ್ದಾರೆ.

ನೀನು ನಮ್ಮ ಜೀವನದಲ್ಲಿ ಸಂತೋಷ ನೀಡಿದ್ದೀಯಾ ನಮ್ಮ ಪುಟಾಣಿ ಏಂಜಲ್​ಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ರಾಧಿಕಾ ಪಂಡಿತ್​ ಇನ್ಸ್​ಟಾಗ್ರಾಂನಲ್ಲಿ ವಿಶ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬೇಗ ಬೆಳೆಯ ಬೇಡ, ಸಣ್ಣವಳಾಗಿಯೇ ಇರು ಎನ್ನುವ ಕಿವಿಮಾತು ಕೂಡ ಹೇಳಿದ್ದಾರೆ.

ಇನ್ನು ಯಶ್​ ಕೂಡ ಆಯ್ರಾ ಜನ್ಮದಿಕ್ಕೆ ಶುಭಾಶಯ ಕೋರಿ ವಿಡಿಯೋ ಒಂದನ್ನು ಹಾಕಿದ್ದಾರೆ.

View this post on Instagram

A post shared by Yash (@thenameisyash)

Published On - 11:09 am, Wed, 2 December 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ