AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್
ಆಯ್ರಾ
shruti hegde
|

Updated on:Dec 02, 2020 | 11:50 AM

Share

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಕಳೆದ ವರ್ಷ ಆಯ್ರಾ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದ ದಂಪತಿ, ಕೊರೋನಾ ಇರುವ ಕಾರಣ ಈ ಬಾರಿ ಮನೆಯಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಜನ್ಮದಿನಕ್ಕೆ ವಿಶೇಷ ವಿಶ್​ ಕೂಡ ಮಾಡಿದ್ದಾರೆ ರಾಧಿಕಾ ಪಂಡಿತ್​.

2018 ರ ಡಿಸೆಂಬರ್ 2ರಂದು ಆಯ್ರಾ ಜನಿಸಿದ್ದಳು. ಮಗಳು ಹುಟ್ಟಿದ ನಂತರದಲ್ಲಿ ಯಶ್​ ದಂಪತಿ ಹೆಚ್ಚು ಸಂಭ್ರಮಿಸಿದ್ದರು. ಅಭಿಮಾನಿಗಳು ಕೂಡ ಯಶ್​ಗೆ ಮಗಳು ಹುಟ್ಟಿದ್ದ ವಿಚಾರ ಕೇಳಿ ಖುಷಿಯಾಗಿದ್ದರು. ಯಶ್​ ಮಗಳಿಗೆ ಏನು ಹೆಸರಿಡುತ್ತಾರೆ ಎನ್ನುವ ವಿಚಾರ ಕೂಡ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸ್ಟಾರ್​ ದಂಪತಿಗೆ ಮಗಳ ಮೇಲೆ ಎಲ್ಲಿಲ್ಲದ ಪ್ರೀತಿ. ಇದೇ ಕಾರಣಕ್ಕೆ ರಾಧಿಕಾ ವಿಶೇಷವಾಗಿ ಹಾರೈಸಿದ್ದಾರೆ.

ನೀನು ನಮ್ಮ ಜೀವನದಲ್ಲಿ ಸಂತೋಷ ನೀಡಿದ್ದೀಯಾ ನಮ್ಮ ಪುಟಾಣಿ ಏಂಜಲ್​ಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ರಾಧಿಕಾ ಪಂಡಿತ್​ ಇನ್ಸ್​ಟಾಗ್ರಾಂನಲ್ಲಿ ವಿಶ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬೇಗ ಬೆಳೆಯ ಬೇಡ, ಸಣ್ಣವಳಾಗಿಯೇ ಇರು ಎನ್ನುವ ಕಿವಿಮಾತು ಕೂಡ ಹೇಳಿದ್ದಾರೆ.

ಇನ್ನು ಯಶ್​ ಕೂಡ ಆಯ್ರಾ ಜನ್ಮದಿಕ್ಕೆ ಶುಭಾಶಯ ಕೋರಿ ವಿಡಿಯೋ ಒಂದನ್ನು ಹಾಕಿದ್ದಾರೆ.

View this post on Instagram

A post shared by Yash (@thenameisyash)

Published On - 11:09 am, Wed, 2 December 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ