AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಆಯ್ರಾ ಜನ್ಮದಿನಕ್ಕೆ ವಿಶೇಷ ಕಿವಿಮಾತು ಹೇಳಿದ ನಟಿ ರಾಧಿಕಾ ಪಂಡಿತ್
ಆಯ್ರಾ
shruti hegde
|

Updated on:Dec 02, 2020 | 11:50 AM

Share

ಬೆಂಗಳೂರು: ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿ ಪುತ್ರಿ ಆಯ್ರಾಗೆ ಇಂದು ಎರಡನೇ ವರ್ಷದ ಜನ್ಮದಿನದ ಸಂಭ್ರಮ. ಈ ವಿಶೇಷ ದಿನದಂದು ರಾಧಿಕಾ ಪಂಡಿತ್​ ಮಗಳಿಗೆ ಜನ್ಮದಿನದ ಶುಭಾಶಯ ಕೋರುವುದರ ಜೊತೆಗೆ ಕಿವಿಮಾತೊಂದನ್ನು ಹೇಳಿದ್ದಾರೆ.

ಕಳೆದ ವರ್ಷ ಆಯ್ರಾ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದ ದಂಪತಿ, ಕೊರೋನಾ ಇರುವ ಕಾರಣ ಈ ಬಾರಿ ಮನೆಯಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಜನ್ಮದಿನಕ್ಕೆ ವಿಶೇಷ ವಿಶ್​ ಕೂಡ ಮಾಡಿದ್ದಾರೆ ರಾಧಿಕಾ ಪಂಡಿತ್​.

2018 ರ ಡಿಸೆಂಬರ್ 2ರಂದು ಆಯ್ರಾ ಜನಿಸಿದ್ದಳು. ಮಗಳು ಹುಟ್ಟಿದ ನಂತರದಲ್ಲಿ ಯಶ್​ ದಂಪತಿ ಹೆಚ್ಚು ಸಂಭ್ರಮಿಸಿದ್ದರು. ಅಭಿಮಾನಿಗಳು ಕೂಡ ಯಶ್​ಗೆ ಮಗಳು ಹುಟ್ಟಿದ್ದ ವಿಚಾರ ಕೇಳಿ ಖುಷಿಯಾಗಿದ್ದರು. ಯಶ್​ ಮಗಳಿಗೆ ಏನು ಹೆಸರಿಡುತ್ತಾರೆ ಎನ್ನುವ ವಿಚಾರ ಕೂಡ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸ್ಟಾರ್​ ದಂಪತಿಗೆ ಮಗಳ ಮೇಲೆ ಎಲ್ಲಿಲ್ಲದ ಪ್ರೀತಿ. ಇದೇ ಕಾರಣಕ್ಕೆ ರಾಧಿಕಾ ವಿಶೇಷವಾಗಿ ಹಾರೈಸಿದ್ದಾರೆ.

ನೀನು ನಮ್ಮ ಜೀವನದಲ್ಲಿ ಸಂತೋಷ ನೀಡಿದ್ದೀಯಾ ನಮ್ಮ ಪುಟಾಣಿ ಏಂಜಲ್​ಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ರಾಧಿಕಾ ಪಂಡಿತ್​ ಇನ್ಸ್​ಟಾಗ್ರಾಂನಲ್ಲಿ ವಿಶ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬೇಗ ಬೆಳೆಯ ಬೇಡ, ಸಣ್ಣವಳಾಗಿಯೇ ಇರು ಎನ್ನುವ ಕಿವಿಮಾತು ಕೂಡ ಹೇಳಿದ್ದಾರೆ.

ಇನ್ನು ಯಶ್​ ಕೂಡ ಆಯ್ರಾ ಜನ್ಮದಿಕ್ಕೆ ಶುಭಾಶಯ ಕೋರಿ ವಿಡಿಯೋ ಒಂದನ್ನು ಹಾಕಿದ್ದಾರೆ.

View this post on Instagram

A post shared by Yash (@thenameisyash)

Published On - 11:09 am, Wed, 2 December 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್