AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna Birthday: ಡಾರ್ಲಿಂಗ್​ ಕೃಷ್ಣ ಹುಟ್ಟುಹಬ್ಬದ ದಿನ ಮಿಲನಾ ನಾಗರಾಜ್​ ನೀಡಿದ ಗಿಫ್ಟ್​ ಏನು?

Love Mocktail 2: ‘ಲವ್​ ಮಾಕ್ಟೇಲ್​ 2’ ಸಿನಿಮಾದಲ್ಲಿ ಕೃಷ್ಣ ಅವರ ಒಂದು ಗೆಟಪ್​ ಹೇಗಿರಲಿದೆ ಎಂಬುದು ಈಗಾಗಲೇ ಗೊತ್ತಾಗಿತ್ತು. ಅದೇ ಗೆಟಪ್​ನ ಇನ್ನೊಂದು ಪೋಸ್ಟರ್​ ಅನ್ನು ಮಿಲನಾ ಶೇರ್​ ಮಾಡಿಕೊಂಡು ಕೃಷ್ಣಗೆ ವಿಶ್​ ಮಾಡಿದ್ದಾರೆ.

Darling Krishna Birthday: ಡಾರ್ಲಿಂಗ್​ ಕೃಷ್ಣ ಹುಟ್ಟುಹಬ್ಬದ ದಿನ ಮಿಲನಾ ನಾಗರಾಜ್​ ನೀಡಿದ ಗಿಫ್ಟ್​ ಏನು?
ಡಾರ್ಲಿಂಗ್​ ಕೃಷ್ಣ - ಮಿಲನಾ ನಾಗರಾಜ್​
ಮದನ್​ ಕುಮಾರ್​
|

Updated on: Jun 12, 2021 | 9:36 AM

Share

ಸ್ಯಾಂಡಲ್​ವುಡ್​ನ ಬಹುಬೇಡಿಕೆ ನಟರಲ್ಲಿ ಡಾರ್ಲಿಂಗ್ ಕೃಷ್ಣ ಹೆಸರು ಕೂಡ ಮುಂಚೂಣಿಯಲ್ಲಿದೆ. 2020ರ ಆರಂಭದಲ್ಲಿ ತೆರೆಕಂಡ ‘ಲವ್​ ಮಾಕ್ಟೇಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ. ಆ ಚಿತ್ರದ ಯಶಸ್ಸಿನ ಬಳಿಕ ಬಹುಕಾಲದ ಪ್ರೇಯಸಿ ಮಿಲನಾ ನಾಗರಾಜ್​ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಂದು (ಜೂ.12) ಡಾರ್ಲಿಂಗ್​ ಕೃಷ್ಣ ಅವರ ಜನ್ಮದಿನ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಕೃಷ್ಣ ಅವರಿಗೆ ಶುಭ ಕೋರುತ್ತಿದ್ದಾರೆ.

ಕೊವಿಡ್​ ಹಾವಳಿ ಇರುವುದರಿಂದ ಕೃಷ್ಣ ಹುಟ್ಟುಹಬ್ಬವನ್ನು ಜೋರಾಗಿ ಸಂಭ್ರಮಿಸಲು ಸಾಧ್ಯವಾಗುತ್ತಿಲ್ಲ. ‘ಲವ್​ ಮಾಕ್ಟೇಲ್​’ ಯಶಸ್ಸಿನ ಬಳಿಕ ಆ ಚಿತ್ರದ ಸೀಕ್ವೆಲ್​ ಮಾಡುವುದಾಗಿ ಚಿತ್ರತಂಡ ಘೋಷಿಸಿಕೊಂಡಿತ್ತು. ಅದರಂತೆ ಆ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿವೆ. ಡಾರ್ಲಿಂಗ್​ ಕೃಷ್ಣ ಜನ್ಮದಿನದ ವಿಶೇಷ ದಿನದಂದು ‘ಲವ್​ ಮಾಕ್ಟೇಲ್​ 2’ ಚಿತ್ರದ ಒಂದು ಹೊಸ ಪೋಸ್ಟರ್​ ಅನ್ನು ಗಿಫ್ಟ್​ ರೂಪದಲ್ಲಿ ಹಂಚಿಕೊಂಡಿದ್ದಾರೆ ನಟಿ ಮಿಲನಾ ನಾಗರಾಜ್​.

‘ಲವ್​ ಮಾಕ್ಟೇಲ್​ 2’ ಸಿನಿಮಾದಲ್ಲಿ ಕೃಷ್ಣ ಅವರ ಒಂದು ಗೆಟಪ್​ ಹೇಗಿರಲಿದೆ ಎಂಬುದು ಈಗಾಗಲೇ ಗೊತ್ತಾಗಿತ್ತು. ಅದೇ ಗೆಟಪ್​ನ ಇನ್ನೊಂದು ಪೋಸ್ಟರ್​ ಅನ್ನು ಮಿಲನಾ ಶೇರ್​ ಮಾಡಿಕೊಂಡು ಕೃಷ್ಣಗೆ ವಿಶ್​ ಮಾಡಿದ್ದಾರೆ. ಈ ವರ್ಷ ಫೆಬ್ರವರಿ 14ರಂದು ಮಿಲನಾ ಮತ್ತು ಕೃಷ್ಣ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಅವರ ಮದುವೆ ದಿನವೇ ‘ಲವ್​ ಮಾಕ್​ಟೇಲ್​ 2’ ಚಿತ್ರದ ಮೊದಲ ಸಾಂಗ್ ಬಿಡುಗಡೆ ಆಗಿತ್ತು. ಆ ಗೀತೆಗೆ ಜನಮೆಚ್ಚಿಗೆ ಸಿಕ್ಕಿದೆ.

ಸದ್ಯ ಮಿಸ್ಟರ್​ ಬ್ಯಾಚುಲರ್​, ಶುಗರ್​ ಫ್ಯಾಕ್ಟರಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಡಾರ್ಲಿಂಗ್​ ಕೃಷ್ಣ ನಟಿಸುತ್ತಿದ್ದಾರೆ. ಬರ್ತ್​ಡೇ ಪ್ರಯುಕ್ತ ಇಂದು ಬೆಳಗ್ಗೆ 11.30ಕ್ಕೆ ಶುಗರ್​ ಫ್ಯಾಕ್ಟರಿ ತಂಡದಿಂದ ಟೀಸರ್​ ಬಿಡುಗಡೆ ಆಗಲಿದೆ.

ಹುಟ್ಟುಹಬ್ಬದ ದಿನವೇ ‘ನಾರಾಯಣ ಮಹಾದೇವ ಧೋನಿ’ ಎಂದು ಹೊಸ ಸಿನಿಮಾ ಪೋಸ್ಟರ್​ ಅನ್ನು ಕೃಷ್ಣ ಬಿಡುಗಡೆ ಮಾಡಿದ್ದು, ಹೊಸಬರ ತಂಡದ ಬೆನ್ನು ತಟ್ಟಿದ್ದಾರೆ.

ಇದನ್ನೂ ಓದಿ:

ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!

ಪತಿಯ ನಿರ್ದೇಶನದಲ್ಲಿ ಕನಸಿನ ಸಿನಿಮಾ ಮಾಡಲಿದ್ದಾರೆ ನಟಿ ಮಿಲನಾ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!