AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna Birthday: ಡಾರ್ಲಿಂಗ್​ ಕೃಷ್ಣ ಹುಟ್ಟುಹಬ್ಬದ ದಿನ ಮಿಲನಾ ನಾಗರಾಜ್​ ನೀಡಿದ ಗಿಫ್ಟ್​ ಏನು?

Love Mocktail 2: ‘ಲವ್​ ಮಾಕ್ಟೇಲ್​ 2’ ಸಿನಿಮಾದಲ್ಲಿ ಕೃಷ್ಣ ಅವರ ಒಂದು ಗೆಟಪ್​ ಹೇಗಿರಲಿದೆ ಎಂಬುದು ಈಗಾಗಲೇ ಗೊತ್ತಾಗಿತ್ತು. ಅದೇ ಗೆಟಪ್​ನ ಇನ್ನೊಂದು ಪೋಸ್ಟರ್​ ಅನ್ನು ಮಿಲನಾ ಶೇರ್​ ಮಾಡಿಕೊಂಡು ಕೃಷ್ಣಗೆ ವಿಶ್​ ಮಾಡಿದ್ದಾರೆ.

Darling Krishna Birthday: ಡಾರ್ಲಿಂಗ್​ ಕೃಷ್ಣ ಹುಟ್ಟುಹಬ್ಬದ ದಿನ ಮಿಲನಾ ನಾಗರಾಜ್​ ನೀಡಿದ ಗಿಫ್ಟ್​ ಏನು?
ಡಾರ್ಲಿಂಗ್​ ಕೃಷ್ಣ - ಮಿಲನಾ ನಾಗರಾಜ್​
ಮದನ್​ ಕುಮಾರ್​
|

Updated on: Jun 12, 2021 | 9:36 AM

Share

ಸ್ಯಾಂಡಲ್​ವುಡ್​ನ ಬಹುಬೇಡಿಕೆ ನಟರಲ್ಲಿ ಡಾರ್ಲಿಂಗ್ ಕೃಷ್ಣ ಹೆಸರು ಕೂಡ ಮುಂಚೂಣಿಯಲ್ಲಿದೆ. 2020ರ ಆರಂಭದಲ್ಲಿ ತೆರೆಕಂಡ ‘ಲವ್​ ಮಾಕ್ಟೇಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ. ಆ ಚಿತ್ರದ ಯಶಸ್ಸಿನ ಬಳಿಕ ಬಹುಕಾಲದ ಪ್ರೇಯಸಿ ಮಿಲನಾ ನಾಗರಾಜ್​ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಂದು (ಜೂ.12) ಡಾರ್ಲಿಂಗ್​ ಕೃಷ್ಣ ಅವರ ಜನ್ಮದಿನ. ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಕೃಷ್ಣ ಅವರಿಗೆ ಶುಭ ಕೋರುತ್ತಿದ್ದಾರೆ.

ಕೊವಿಡ್​ ಹಾವಳಿ ಇರುವುದರಿಂದ ಕೃಷ್ಣ ಹುಟ್ಟುಹಬ್ಬವನ್ನು ಜೋರಾಗಿ ಸಂಭ್ರಮಿಸಲು ಸಾಧ್ಯವಾಗುತ್ತಿಲ್ಲ. ‘ಲವ್​ ಮಾಕ್ಟೇಲ್​’ ಯಶಸ್ಸಿನ ಬಳಿಕ ಆ ಚಿತ್ರದ ಸೀಕ್ವೆಲ್​ ಮಾಡುವುದಾಗಿ ಚಿತ್ರತಂಡ ಘೋಷಿಸಿಕೊಂಡಿತ್ತು. ಅದರಂತೆ ಆ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿವೆ. ಡಾರ್ಲಿಂಗ್​ ಕೃಷ್ಣ ಜನ್ಮದಿನದ ವಿಶೇಷ ದಿನದಂದು ‘ಲವ್​ ಮಾಕ್ಟೇಲ್​ 2’ ಚಿತ್ರದ ಒಂದು ಹೊಸ ಪೋಸ್ಟರ್​ ಅನ್ನು ಗಿಫ್ಟ್​ ರೂಪದಲ್ಲಿ ಹಂಚಿಕೊಂಡಿದ್ದಾರೆ ನಟಿ ಮಿಲನಾ ನಾಗರಾಜ್​.

‘ಲವ್​ ಮಾಕ್ಟೇಲ್​ 2’ ಸಿನಿಮಾದಲ್ಲಿ ಕೃಷ್ಣ ಅವರ ಒಂದು ಗೆಟಪ್​ ಹೇಗಿರಲಿದೆ ಎಂಬುದು ಈಗಾಗಲೇ ಗೊತ್ತಾಗಿತ್ತು. ಅದೇ ಗೆಟಪ್​ನ ಇನ್ನೊಂದು ಪೋಸ್ಟರ್​ ಅನ್ನು ಮಿಲನಾ ಶೇರ್​ ಮಾಡಿಕೊಂಡು ಕೃಷ್ಣಗೆ ವಿಶ್​ ಮಾಡಿದ್ದಾರೆ. ಈ ವರ್ಷ ಫೆಬ್ರವರಿ 14ರಂದು ಮಿಲನಾ ಮತ್ತು ಕೃಷ್ಣ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಅವರ ಮದುವೆ ದಿನವೇ ‘ಲವ್​ ಮಾಕ್​ಟೇಲ್​ 2’ ಚಿತ್ರದ ಮೊದಲ ಸಾಂಗ್ ಬಿಡುಗಡೆ ಆಗಿತ್ತು. ಆ ಗೀತೆಗೆ ಜನಮೆಚ್ಚಿಗೆ ಸಿಕ್ಕಿದೆ.

ಸದ್ಯ ಮಿಸ್ಟರ್​ ಬ್ಯಾಚುಲರ್​, ಶುಗರ್​ ಫ್ಯಾಕ್ಟರಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಡಾರ್ಲಿಂಗ್​ ಕೃಷ್ಣ ನಟಿಸುತ್ತಿದ್ದಾರೆ. ಬರ್ತ್​ಡೇ ಪ್ರಯುಕ್ತ ಇಂದು ಬೆಳಗ್ಗೆ 11.30ಕ್ಕೆ ಶುಗರ್​ ಫ್ಯಾಕ್ಟರಿ ತಂಡದಿಂದ ಟೀಸರ್​ ಬಿಡುಗಡೆ ಆಗಲಿದೆ.

ಹುಟ್ಟುಹಬ್ಬದ ದಿನವೇ ‘ನಾರಾಯಣ ಮಹಾದೇವ ಧೋನಿ’ ಎಂದು ಹೊಸ ಸಿನಿಮಾ ಪೋಸ್ಟರ್​ ಅನ್ನು ಕೃಷ್ಣ ಬಿಡುಗಡೆ ಮಾಡಿದ್ದು, ಹೊಸಬರ ತಂಡದ ಬೆನ್ನು ತಟ್ಟಿದ್ದಾರೆ.

ಇದನ್ನೂ ಓದಿ:

ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!

ಪತಿಯ ನಿರ್ದೇಶನದಲ್ಲಿ ಕನಸಿನ ಸಿನಿಮಾ ಮಾಡಲಿದ್ದಾರೆ ನಟಿ ಮಿಲನಾ

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ