AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Kiran Raj: ಸಖತ್​ ಆ್ಯಕ್ಷನ್​ನಲ್ಲಿ ಮಿಂಚುತ್ತಿದ್ದಾರೆ ಕಿರಣ್​ ರಾಜ್; ಇದಕ್ಕಾಗಿ ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ

Bahaddhur Gandu Teaser: ಪ್ರಸಿದ್ಧ್​ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಯಶಾ ಶಿವಕುಮಾರ್​ ಚಿತ್ರದ ನಾಯಕಿ. ಕಿಟ್ಟಿ ಕೌಶಿಕ್​ ಛಾಯಾಗ್ರಹಣ ಈ ಸಿನಿಮಾಗಿದೆ. ಪ್ರಸಿದ್ಧ್​ ಸಿನಿಮಾಸ್​ ಹಾಗೂ ರಮೇಶ್​ ರೆಡ್ಡಿ ಬಹದ್ದೂರ್​ ಗಂಡು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

Happy Birthday Kiran Raj: ಸಖತ್​ ಆ್ಯಕ್ಷನ್​ನಲ್ಲಿ ಮಿಂಚುತ್ತಿದ್ದಾರೆ ಕಿರಣ್​ ರಾಜ್; ಇದಕ್ಕಾಗಿ ಅವರು ಪಟ್ಟ ಶ್ರಮ ಅಷ್ಟಿಷ್ಟಲ್ಲ
ರಾಜೇಶ್ ದುಗ್ಗುಮನೆ
|

Updated on:Jul 05, 2021 | 3:06 PM

Share

ಇಂದು (ಜುಲೈ 5) ನಟ ಕಿರಣ್​ ರಾಜ್​ ಜನ್ಮದಿನ. ಈ ವಿಶೇಷ ದಿನದ ಅಂಗವಾಗಿ ಅವರ ನಟನೆಯ ‘ಬಹದ್ದೂರ್​ ಗಂಡು’ ಚಿತ್ರದ ಟೀಸರ್​ ರಿಲೀಸ್​ ಆಗಿದೆ. ಈ ಟೀಸರ್​​ನಲ್ಲಿ ಕಿರಣ್​ ಆ್ಯಕ್ಷನ್​ ದೃಶ್ಯಗಳ ಮೂಲಕ ಮಿಂಚಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

ಕಿರಣ್​ ರಾಜ್​ ಕಿರುತೆರೆಯಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ನಟಿಸುತ್ತಿರುವ ‘ಕನ್ನಡತಿ’ ಧಾರಾವಾಹಿಯಲ್ಲಿ ಅವರ ಪಾತ್ರ ವೀಕ್ಷಕರಿಗೆ ಇಷ್ಟವಾಗಿದೆ. ಈಗ ‘ಬಹದ್ದೂರ್​ ಗಂಡು’ ಚಿತ್ರದಲ್ಲಿ ಅವರು ಸ್ಟೈಲ್​, ಲುಕ್​ ಸಂಪೂರ್ಣ ಭಿನ್ನವಾಗಿದೆ. ಅವರ ಮೈಕಟ್ಟು ನೋಡಿ ಅನೇಕರು ಫಿದಾ ಆಗಿದ್ದಾರೆ. ಇನ್ನು, ಅವರ ಆ್ಯಕ್ಷನ್​ ದೃಶ್ಯಗಳನ್ನು ಕಣ್ತುಂಬಿಕೊಂಡು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಸಿನಿಮಾದಲ್ಲಿ ಕ್ಲೈಮ್ಯಾಕ್ಸ್​ನಲ್ಲಿ ಬರೋ ಫೈಟ್​ಗೋಸ್ಕರ್​ ಕಿರಣ್​ ರಾಜ್​ ನಾಲ್ಕು ತಿಂಗಳಕಾಲ ಸತತವಾಗಿ ವರ್ಕೌಟ್​ ಮಾಡಿದ್ದಾರೆ. ‘ರಾತ್ರಿ 12ರಿಂದ ಮುಂಜಾನೆ 4:30ವರೆಗೆ ನಾನು ನಿರಂತರವಾಗಿ 4 ತಿಂಗಳು ವರ್ಕೌಟ್​ ಮಾಡಿದ್ದೇನೆ. ಅದು ಸಿನಿಮಾದಲ್ಲಿ ಬರುವ ಕ್ಲೈಮ್ಯಾಕ್ಸ್​ ದೃಶ್ಯಕ್ಕೋಸ್ಕರ. ಬೆಳಗ್ಗೆ ಧಾರಾವಾಹಿ ಶೂಟಿಂಗ್​, ಚ್ಯಾರಿಟಿ ಕೆಲಸಗಳು ಇರುತ್ತಿದ್ದವು. ಹೀಗಾಗಿ, ರಾತ್ರಿ ವರ್ಕೌಟ್​ ಮಾಡುತ್ತಿದ್ದೆ’ ಎಂದು ತಮ್ಮ ಶ್ರಮದ ಬಗ್ಗೆ ಕಿರಣ್​ ರಾಜ್​ ಹೇಳಿಕೊಂಡಿದ್ದಾರೆ.

‘ಈ ಚಿತ್ರದಲ್ಲಿ ನನಗೆ ಎರಡು ಶೇಡ್​ ಇದೆ. ‘ಬಹದ್ದೂರ್​ ಗಂಡು’ ಎಂದು ಸಿನಿಮಾ ಟೈಟಲ್ ಇಟ್ಟಿರೋದ್ರಿಂದ ಒಂದು ದೊಡ್ಡ ಜವಾಬ್ದಾರಿ ನಮಗಿದೆ. ಸಿನಿಮಾದಲ್ಲಿ ಒಂದು ಸಂಸ್ಕೃತಿ ಬಗ್ಗೆ ನಾವು ಹೇಳುತ್ತಿದ್ದೇವೆ’ ಎನ್ನುತ್ತಾರೆ ಕಿರಣ್​ ರಾಜ್​.

ಪ್ರಸಿದ್ಧ್​ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಯಶಾ ಶಿವಕುಮಾರ್​ ಚಿತ್ರದ ನಾಯಕಿ. ಕಿಟ್ಟಿ ಕೌಶಿಕ್​ ಛಾಯಾಗ್ರಹಣ ಈ ಸಿನಿಮಾಗಿದೆ. ಪ್ರಸಿದ್ಧ್​ ಸಿನಿಮಾಸ್​ ಹಾಗೂ ರಮೇಶ್​ ರೆಡ್ಡಿ ಬಹದ್ದೂರ್​ ಗಂಡು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಇನ್ನು, ಕಿರಣ್​ ರಾಜ್​ ಜನ್ಮದಿನದ ಅಂಗವಾಗಿ ಅವರಿಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಯ ಮಳೆ ಸುರಿಸಿದ್ದಾರೆ. ಕನ್ನಡತಿ ಚಿತ್ರದ ಮುಖ್ಯಪಾತ್ರಧಾರಿ ರಂಜನಿ ರಾಘವನ್​ ಅವರು ಕಿರಣ್​ ರಾಜ್​ ಅವರಿಗೆ ಬರ್ತ್​ಡೇ ವಿಷ್​ ಮಾಡಿದ್ದಾರೆ. ಕಿರಣ್​ ಕುಟುಂಬದವರ ಜತೆ ಕೇಕ್​ ಕತ್ತರಿಸಿ ಸಂಭ್ರಮಿಸಿದ್ದಾರೆ.

ಕಿರಣ್​ ರಾಜ್​ ಕೂಡ ಕೊವಿಡ್​ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ತೊಂದರೆ ಅನುಭವಿಸುತ್ತಿರುವವರಿಗೆ ಅವರು ಸಹಾಯ ಮಾಡುತ್ತಿದ್ದಾರೆ. ‘ಕಿರಣ್​ ರಾಜ್​ ಫೌಂಡೇಷನ್’ಮೂಲಕ ಸಾಕಷ್ಟು ಜನರ ನೋವಿಗೆ ಸ್ಪಂದಿಸಿದ್ದಾರೆ. ಕಿರಣ್​ ರಾಜ್​ ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇದಕ್ಕಾಗಿ ಅವರು ಮುಂಬೈಗೆ ತೆರಳಿದ್ದರು. ಕಿರಣ್​ ರಾಜ್​ ಫೌಂಡೇಷನ್​ ಕನಸು ಆರಂಭವಾಗಿದ್ದು ಅಲ್ಲಿಯೇ. ಕಿರಣ್​ ರಾಜ್​ ತಮ್ಮ ಒಟ್ಟೂ ಆದಾಯದಲ್ಲಿ ಶೇ.40ರಷ್ಟು ಗಳಿಕೆಯನ್ನು ಕಷ್ಟದಲ್ಲಿರುವವರ ಸಹಾಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಅಮ್ಮನ ಮಾತು ಕೇಳಿ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ‘ಕನ್ನಡತಿ’ ಹೀರೋ ಕಿರಣ್​ ರಾಜ್​!

ಶಾಲಾ-ಕಾಲೇಜು ಪ್ರವೇಶ​ ಶುಲ್ಕ ಇಳಿಸಿ ಎಂಬ ಕೂಗಿಗೆ ಧ್ವನಿಯಾದ ಕಿರಣ್​ ರಾಜ್​; ಸಿಎಂ ಯಡಿಯೂರಪ್ಪಗೆ ಪತ್ರ

Published On - 11:28 am, Mon, 5 July 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು