AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Meghana Raj: ಜನ್ಮದಿನಕ್ಕೂ ಒಂದು ದಿನ ಮೊದಲು ಮದುವೆ ಆಗಿದ್ದ ಮೇಘನಾ ರಾಜ್

ಮೇಘನಾ ರಾಜ್​-ಚಿರು ವಿವಾಹ ವಾರ್ಷಿಕೋತ್ಸವಕ್ಕೆ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ಅವರ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Happy Birthday Meghana Raj: ಜನ್ಮದಿನಕ್ಕೂ ಒಂದು ದಿನ ಮೊದಲು ಮದುವೆ ಆಗಿದ್ದ ಮೇಘನಾ ರಾಜ್
ಮೇಘನಾ ರಾಜ್​-ಚಿರು ಸರ್ಜಾ
ರಾಜೇಶ್ ದುಗ್ಗುಮನೆ
| Edited By: |

Updated on:May 02, 2021 | 8:57 PM

Share

ನಟಿ ಮೇಘನಾ ರಾಜ್​ಗೆ ಸೋಮವಾರ (ಮೇ 3) ಜನ್ಮದಿನದ ಸಂಭ್ರಮ. ಇದೇ ಮೊದಲ ಬಾರಿಗೆ ಅವರು ಚಿರಂಜೀವಿ ಸರ್ಜಾ ಇಲ್ಲದೆಯೇ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ವಿಶೇಷ ಎಂದರೆ, ಜನ್ಮದಿನಕ್ಕೂ ಒಂದು ದಿನ ಮೊದಲು ಅವರು ವಿವಾಹವಾಗಿದ್ದರು. ಚಿರು ಹಾಗೂ ಮೇಘನಾ ರಾಜ್​ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಮನೆಯಲ್ಲೂ ಸಮ್ಮತಿ ಸಿಕ್ಕಿತ್ತು. 2018ರ ಮೇ 2ರಂದು ಮೇಘನಾ ರಾಜ್​ ಚಿರು ಜತೆ ಹಸೆಮಣೆ ಏರಿದ್ದರು. ಈ ಮದುವೆಗೆ ಸ್ಯಾಂಡಲ್​ವುಡ್​ ಮಂದಿ ಸಾಕ್ಷಿ ಆಗಿದ್ದರು.

ನಟಿ ಮೇಘನಾ ರಾಜ್​ ಕನ್ನಡ ಮಾತ್ರವಲ್ಲದೆ, ಮಲಯಾಳಂನಲ್ಲೂ ನಟಿಸಿದ್ದಾರೆ. ಮದುವೆ ಆದ ನಂತರದಲ್ಲಿ ಮೇಘನಾ ಅಷ್ಟಾಗಿ ಚಿತ್ರರಂಗದಲ್ಲಿ ಆ್ಯಕ್ಟಿವ್​ ಇಲ್ಲ. 2020ರ ಜೂನ್​ 7ರಂದು ಚಿರಂಜೀವಿ ಸರ್ಜಾ ಹೃದಯಾಘಾತಕ್ಕೆ ತುತ್ತಾಗಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚಿರು ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ಮೇಘನಾ ಗರ್ಭಿಣಿ. ಅವರಿಗೆ ಮಗು ಜನಿಸಿದ್ದು, ಅದರ ಆರೈಕೆಯಲ್ಲಿ ಮೇಘನಾ ತೊಡಗಿಕೊಂಡಿದ್ದಾರೆ.

ಮೇಘನಾ ರಾಜ್​-ಚಿರು ವಿವಾಹ ವಾರ್ಷಿಕೋತ್ಸವಕ್ಕೆ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ಅವರ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆದರೆ, ಮೇಘನಾ ರಾಜ್​ ಯಾವುದೇ ಫೋಟೋಗಳನ್ನು ಅಪ್​ಲೋಡ್​ ಮಾಡಿಲ್ಲ.

ಚಿರು ಮತ್ತು ಮೇಘನಾ ಜತೆಯಾಗಿ ನಿಂತಿರುವ ಫೋಟೋವನ್ನು ಮೇಘನಾ ಇತ್ತೀಚೆಗೆ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು . ಈ ಫೋಟೋಗೆ ಐ ಲವ್​ ಯೂ, ಹಿಂದಿರುಗಿ ಬಾ ಎಂದು ಮೇಘನಾ ಕ್ಯಾಪ್ಶನ್​ ನೀಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳ ಕಣ್ಣು ಒದ್ದೆ ಆಗಿತ್ತು.

ಇದನ್ನೂ ಓದಿ: Meghana Raj: ಜೂನಿಯರ್ ಚಿರುಗೆ ಆರು ತಿಂಗಳು; ಸಂಭ್ರಮಿಸಿದ ಮೇಘನಾ ರಾಜ್​

Meghana Raj: ಚಿರು ಐ ಲವ್​ ಯೂ, ಹಿಂದಿರುಗಿ ಬಾ; ಭಾವುಕರಾದ ನಟಿ ಮೇಘನಾ ರಾಜ್​

(Happy Birthday Meghana Raj Meghana Married Chiru Sarja Before Her birthday)

Published On - 8:40 pm, Sun, 2 May 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್