AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ಕುಮಾರ್​ಗೆ ಬರ್ತ್​ಡೇ ಸಂಭ್ರಮ; ಹೊಸ ಸಿನಿಮಾ ಟೈಟಲ್​ ತಿಳಿಯಲು ಅಭಿಮಾನಿಗಳ ಕಾತರ

Happy birthday Nikhil Kumar: ನಿಖಿಲ್​ ಕುಮಾರ್ ಅವರಿಗೆ ಕಳೆದ ವರ್ಷ ಮಗು ಜನಿಸಿದೆ. ಮಗು ಜನಿಸಿದ ನಂತರ ಅವರು ಆಚರಿಸಿಕೊಳ್ಳುತ್ತಿರುವ ಮೊದಲ ಬರ್ತ್​​ಡೇ ಇದು. ಈ ಕಾರಣಕ್ಕೆ ಈ ದಿನ ಅವರಿಗೆ ವಿಶೇಷ ಆಗಬೇಕಿತ್ತು. ಆದರೆ, ಹಾಗಾಗಿಲ್ಲ.

ನಿಖಿಲ್​ ಕುಮಾರ್​ಗೆ ಬರ್ತ್​ಡೇ ಸಂಭ್ರಮ; ಹೊಸ ಸಿನಿಮಾ ಟೈಟಲ್​ ತಿಳಿಯಲು ಅಭಿಮಾನಿಗಳ ಕಾತರ
ನಿಖಿಲ್​ ಕುಮಾರ್
TV9 Web
| Edited By: |

Updated on: Jan 22, 2022 | 6:00 AM

Share

ನಿಖಿಲ್​ ಕುಮಾರ್​ ಅವರಿಗೆ ಇಂದು (ಜನವರಿ 22) ಬರ್ತ್​ಡೇ (Nikhil Kumar Birthday) ಸಂಭ್ರಮ. ಸಿನಿಮಾರಂಗ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇರುವ ನಿಖಿಲ್​ಗೆ ಅಭಿಮಾನಿಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದವರು ಶುಭಾಶಯ ತಿಳಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ (Social Media) ಅಭಿಮಾನಿಗಳು ನಿಖಿಲ್​ ಫೋಟೋ ಪೋಸ್ಟ್​ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಅವರ ಹೊಸ ಸಿನಿಮಾ ಟೈಟಲ್​ ಇಂದು ರಿವೀಲ್​ ಆಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಚಿತ್ರದ ಟೈಟಲ್​ ಏನಿರಬಹುದು ಎನ್ನುವ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ.

ನಿಖಿಲ್​ ಕುಮಾರ್ ಅವರಿಗೆ ಕಳೆದ ವರ್ಷ ಮಗು ಜನಿಸಿದೆ. ಮಗು ಜನಿಸಿದ ನಂತರ ಅವರು ಆಚರಿಸಿಕೊಳ್ಳುತ್ತಿರುವ ಮೊದಲ ಬರ್ತ್​​ಡೇ ಇದು. ಈ ಕಾರಣಕ್ಕೆ ಈ ದಿನ ಅವರಿಗೆ ವಿಶೇಷ ಆಗಬೇಕಿತ್ತು. ಆದರೆ, ಕೊವಿಡ್​ ಪ್ರಕರಣ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಜನರು ಸೇರಿದರೆ ಕೊವಿಡ್​ ವೇಗವಾಗಿ ಹೆಚ್ಚಬಹುದು. ಹೀಗಾಗಿ, ಅವರು ಈ ವರ್ಷ ಅಭಿಮಾನಿಗಳ ಜತೆಗೂಡಿ ಬರ್ತ್​ಡೇ ಆಚರಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ. ಇದು ಅವರ ಫ್ಯಾನ್ಸ್​ಗೆ ಕೊಂಚ ಬೇಸರ ತರಿಸಿದೆ. ಆದರೆ, ಬೇರೆ ದಾರಿ ಇಲ್ಲ. ಹೀಗಾಗಿ, ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ನಿಖಿಲ್​ಗೆ ವಿಶ್​ ಮಾಡಿ ಸಂಭ್ರಮಿಸುತ್ತಿದ್ದಾರೆ.

ನಿಖಿಲ್ ಕುಮಾರ್ ಹೊಸ ಸಿನಿಮಾದ ಶೂಟಿಂಗ್​ಗೆ ಇಳಿದಿದ್ದಾರೆ. ಈ ಸಿನಿಮಾವನ್ನು ಮಂಜು ಅಥರ್ವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ಏಳು ವರ್ಷಗಳಿಂದ ಮಂಜು ಚಿತ್ರರಂಗದಲ್ಲಿ ಇದ್ದಾರೆ. ಯಶ್​ ನಟನೆಯ ‘ಮಾಸ್ಟರ್‌ ಪೀಸ್‌’, ಶಿವರಾಜ್​ಕುಮಾರ್​ ಅಭಿನಯದ ‘ಮಫ್ತಿ’ ಸಿನಿಮಾಗಳಿಗೆ ಅಸೋಸಿಯೇಟ್‌ ಡೈರೆಕ್ಟರ್​ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಅವರು ನಿಖಿಲ್‌ ಅವರ ಸಿನಿಮಾದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದುಕೊಳ್ಳುತ್ತಿದ್ದಾರೆ. ಈ ಚಿತ್ರದ ಟೈಟಲ್ ಇಂದು ಘೋಷಣೆ ಆಗಲಿದೆ. ಜತೆಗೆ ಫಸ್ಟ್ ಪೋಸ್ಟರ್ ಕೂಡ ರಿಲೀಸ್​ ಆಗುತ್ತಿದೆ. ಈ ಮೂಲಕ ನಿಖಿಲ್​ ಬರ್ತ್​ಡೇಗೆ ಅಭಿಮಾನಿಗಳಿಗೆ ಚಿತ್ರತಂಡದಿಂದ ಗಿಫ್ಟ್​ ಸಿಗುತ್ತಿದೆ.

ಇದನ್ನೂ ಓದಿ: ನಿಖಿಲ್​ ಕುಮಾರ್ ಹೊಸ ಚಿತ್ರಕ್ಕೆ ಸಿಕ್ತು ಚಾಲನೆ; ಯಶ್​ ಚಿತ್ರದಲ್ಲಿ ಕೆಲಸ ಮಾಡಿದವರೇ  ಈಗ ಡೈರೆಕ್ಟರ್​

ಕೊವಿಡ್​ ಹಿನ್ನೆಲೆಯಲ್ಲಿ ನಿಖಿಲ್​ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ ಕ್ಯಾನ್ಸಲ್​; ಅಭಿಮಾನಿಗಳಲ್ಲಿ ವಿಶೇಷ ಮನವಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್