AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​ಗೆ ಜನ್ಮದಿನದ ಸಂಭ್ರಮ; ವಿಶೇಷ ದಿನದಂದು ನಟಿ ಎದುರು ಹೊಸ ಬೇಡಿಕೆ ಇಟ್ಟ ಫ್ಯಾನ್ಸ್

Radhika Pandit Birthday: 2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ರಾಧಿಕಾ ಪಂಡಿತ್​. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು.

ರಾಧಿಕಾ ಪಂಡಿತ್​ಗೆ ಜನ್ಮದಿನದ ಸಂಭ್ರಮ; ವಿಶೇಷ ದಿನದಂದು ನಟಿ ಎದುರು ಹೊಸ ಬೇಡಿಕೆ ಇಟ್ಟ ಫ್ಯಾನ್ಸ್
ರಾಧಿಕಾ-ಯಶ್
TV9 Web
| Edited By: |

Updated on:Mar 07, 2023 | 10:06 AM

Share

ನಟಿ ರಾಧಿಕಾ ಪಂಡಿತ್ (Radhika Pandit)​ ಇಂದು (ಮಾರ್ಚ್​ 7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಕಡೆಯಿಂದ ಸೋಶಿಯಲ್​ ಮೀಡಿಯಾದಲ್ಲಿ (Social Media) ಶುಭಾಶಯಗಳು ಹರಿದು ಬರುತ್ತಿವೆ. ರಾಧಿಕಾ ಅವರ ಫೋಟೋ ಹಂಚಿಕೊಂಡು ಬರ್ತ್​ಡೇ ವಿಶ್​ ತಿಳಿಸಲಾಗುತ್ತಿದೆ. ಬರ್ತ್​ ಡೇ ವೇಳೆ ವಿಶೇಷ ಬೇಡಿಕೆ ಒಂದನ್ನು ರಾಧಿಕಾ ಎದುರು ಇಟ್ಟಿದ್ದಾರೆ ಅಭಿಮಾನಿಗಳು (Radhika Pandit Fans). ಅಷ್ಟಕ್ಕೂ ಏನದು ಮನವಿ? ಆ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.

2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ರಾಧಿಕಾ ಪಂಡಿತ್​. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು. ಧ್ರುವ ಸರ್ಜಾ, ಪುನೀತ್​ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ನಟರ ಜತೆ ರಾಧಿಕಾ ತೆರೆಹಂಚಿಕೊಂಡರು. 2016ರಲ್ಲಿ ತೆರೆಕಂಡ ‘ಸಂತು ಸ್ಟ್ರೇಟ್​ ಫಾರ್ವರ್ಡ್’ ಸಿನಿಮಾ ನಂತರದಲ್ಲಿ ಯಶ್​ ಜತೆ ರಾಧಿಕಾ ವಿವಾಹ ಆಯಿತು. ಆ ಬಳಿಕ ಅವರು ಚಿತ್ರರಂಗದಿಂದ ಒಂದು ಸಣ್ಣ ಬ್ರೇಕ್​ ಪಡೆದರು. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದ ಮೂಲಕ ಅವರು ಮತ್ತೆ ಕಂಬ್ಯಾಕ್​ ಮಾಡಿದರು. ಆ ನಂತರ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ. ಆದರೆ, ರಾಧಿಕಾ ಪಂಡಿತ್ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಂತಿಲ್ಲ. ಅವರು ಮಗಳು ಆಯ್ರಾ ಹಾಗೂ ಯಥರ್ವ್​ ಅವರ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಯಾವಾಗ ಮರಳುತ್ತಾರೆ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

ಬರ್ತ್​ಡೇ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರಿಗೆ ಚಿತ್ರರಂಗಕ್ಕೆ ಮರಳುವಂತೆ ಅನೇಕರು ಒತ್ತಾಯ ಮಾಡಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಯಾವಾಗ ಘೋಷಣೆ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ. ಕೊವಿಡ್ ಇರುವ ಕಾರಣ ರಾಧಿಕಾ ಎಲ್ಲಿಯೂ ಹೊರಗೆ ತೆರಳದೆ ಮನೆಯಲ್ಲೇ ಬರ್ತ್​ಡೇ ಆಚರಣೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಂಬಂಧಿಯ ಮದುವೆ ಕಾರ್ಯಕ್ರಮದಲ್ಲಿ ಮಿಂಚಿದ ರಾಧಿಕಾ ಪಂಡಿತ್ ಕುಟುಂಬ; ಇಲ್ಲಿವೆ ಫೋಟೋಗಳು

Radhika Pandit: ಜನ್ಮದಿನಕ್ಕೂ ಮುನ್ನ ಸುಂದರ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​; ಹೇಳಿದ್ದೇನು?

Published On - 6:00 am, Mon, 7 March 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!