AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sriimurali Birthday: ಶ್ರೀಮುರಳಿಗೆ 39ನೇ ವರ್ಷದ ಜನ್ಮದಿನ; ಸೋಶಿಯಲ್​ ಮೀಡಿಯಾದಲ್ಲಿ ಸಂಭ್ರಮಿಸಿದ ಫ್ಯಾನ್ಸ್​

ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಜನರು ಶ್ರೀಮುರಳಿಗೆ ವಿಶ್​ ಮಾಡುತ್ತಿದ್ದಾರೆ. ಅವರ ಫೋಟೋಗಳನ್ನು ಹಂಚಿಕೊಂಡು ಪ್ರೀತಿಯಿಂದ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ.

Sriimurali Birthday: ಶ್ರೀಮುರಳಿಗೆ 39ನೇ ವರ್ಷದ ಜನ್ಮದಿನ; ಸೋಶಿಯಲ್​ ಮೀಡಿಯಾದಲ್ಲಿ ಸಂಭ್ರಮಿಸಿದ ಫ್ಯಾನ್ಸ್​
ಶ್ರೀಮುರಳಿ
TV9 Web
| Edited By: |

Updated on:Dec 17, 2021 | 8:20 AM

Share

ನಟ ಶ್ರೀಮುರಳಿ (Sriimurali Birthday) ಅವರು ಇಂದು (ಡಿಸೆಂಬರ್​ 17) 39ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಕನ್ನಡದ ಖ್ಯಾತ ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ನಿಧನ ಹೊಂದದೇ ಇದ್ದಿದ್ದರೆ ಶ್ರೀಮುರಳಿ ಅದ್ದೂರಿಯಾಗಿ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿದ್ದರು. ಅವರ ಸಾವಿನ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಶ್ರೀಮುರಳಿ ಹೇಳಿದ್ದಾರೆ. ಆ ಕಾರಣದಿಂದ ಈ ಬಾರಿ ಅವರ ಅಭಿಮಾನಿಗಳು ಜನ್ಮದಿನವನ್ನು ಅದ್ದೂರಿಯಾಗಿ ಸಂಭ್ರಮಿಸುತ್ತಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳು ಹರಿದುಬರುತ್ತಿವೆ. ಸೆಲೆಬ್ರಿಟಿಗಳು, ಅಭಿಮಾನಿಗಳು ಶ್ರೀಮುರಳಿಗೆ ವಿಶ್​ ಮಾಡಿ ಶುಭ ಹಾರೈಸುತ್ತಿದ್ದಾರೆ.

ಶ್ರೀಮುರಳಿ ಬರ್ತ್​ಡೇ ದಿನ ಅವರ ಅಭಿಮಾನಿಗಳು ಮನೆಯ ಮುಂದೆ ಜಮಾಯಿಸುತ್ತಿದ್ದರು. ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದರು. ಅವರು ಕೂಡ ಅಭಿಮಾನಿಗಳ ಜತೆಗೂಡಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಪುನೀತ್​ ಸಾವಿನಿಂದ ಇಡೀ ಕರ್ನಾಟಕಕ್ಕೆ ಸೂತಕದ ಛಾಯೆ ಆವರಿಸಿದೆ. ಹೀಗಾಗಿ, ಶ್ರೀಮುರಳಿ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ.

ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಜನರು ಶ್ರೀಮುರಳಿಗೆ ವಿಶ್​ ಮಾಡುತ್ತಿದ್ದಾರೆ. ಅವರ ಫೋಟೋಗಳನ್ನು ಹಂಚಿಕೊಂಡು ಪ್ರೀತಿಯಿಂದ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ‘ಭಗೀರ’ ಚಿತ್ರದಲ್ಲಿ ಶ್ರೀಮುರಳಿ ನಟಿಸುತ್ತಿದ್ದಾರೆ. ಈ ಚಿತ್ರತಂಡದ ಕಡೆಯಿಂದ ಶ್ರೀಮುರಳಿಗೆ ಗಿಫ್ಟ್​ ಸಿಗಲಿದೆಯೇ ಎನ್ನುವ ಕುತೂಹಲ ಕಾಡಿದೆ.

ಅಭಿಮಾನಿಗಳು ಹಂಚಿಕೊಂಡಿರುವ ಸಿಡಿಪಿ (ಕಾಮನ್ ಡಿಸ್ಪ್ಲೆ ಪ್ರೊಫೈಲ್):

ಪುನೀತ್​ ರಾಜ್​ಕುಮಾರ್​ ಅವರು ಅಕಾಲಿಕ ಮರಣ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಭಾವಿಸಿರಲಿಲ್ಲ. ಅವರ ಆಪ್ತ ವರ್ಗದವರಿಗೆ, ಅಭಿಮಾನಿಗಳಿಗೆ ಈ ಸುದ್ದಿಯನ್ನು ಇನ್ನೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ಶ್ರೀಮುರಳಿ ಬರೆದುಕೊಂಡಿದ್ದರು. ‘ನನ್ನ ಪ್ರೀತಿಯ ಅಭಿಮಾನಿಗಳೇ. ಈ ಬಾರಿ ನಿಮ್ಮೊಂದಿಗೆ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಾಗುವುದಿಲ್ಲ. ಕಾರಣವೇನೆಂದು ನಿಮಗೆ ಗೊತ್ತಿರುವುದೆಂದು ಭಾವಿಸುವೆ. ನಾನು ಬೆಂಗಳೂರಿನಲ್ಲೂ ಇರುವುದಿಲ್ಲ. ಸದಾ ನಿಮ್ಮ ಪ್ರೀತಿ ಹಾಗು ಆಶೀರ್ವಾದವನ್ನು ಬಯಸುವ ನಿಮ್ಮ, ಶ್ರೀಮುರಳಿ (ಅಭಿಮಾನಿಗಳ ಅಭಿಮಾನಿ)’ ಎಂದು ಶ್ರೀಮುರಳಿ ಟ್ವಿಟರ್​ನಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಶ್ರೀಮುರಳಿಗೆ 80 ಸಾವಿರ ರೂಪಾಯಿ ಮೌಲ್ಯದ ಸೇಬಿನ ಹಾರ; ಇಲ್ಲಿದೆ ವಿಡಿಯೋ

ಮುಂದುವರಿದ ‘ಮದಗಜ’ ಆರ್ಭಟ; 2ನೇ ದಿನಕ್ಕೆ ಶ್ರೀಮುರಳಿ ಚಿತ್ರದ ಕಲೆಕ್ಷನ್​ ಎಷ್ಟು?

Published On - 7:28 am, Fri, 17 December 21

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ
2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ
ಇಂದು ಈ ರಾಶಿಯವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು
ಇಂದು ಈ ರಾಶಿಯವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು