AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಹರಿಕಥೆ ಅಲ್ಲ ಗಿರಿಕಥೆ’ ರಿಲೀಸ್​ ಬಳಿಕ ಹೊಸ ಕಾರು ಖರೀದಿಸಿದ ರಿಷಬ್​ ಶೆಟ್ಟಿ; ಪತ್ನಿ ಪ್ರಗತಿ ಫುಲ್​ ಖುಷ್​

Audi Q7 | Pragathi Shetty: ಮನೆಗೆ ಐಷಾರಾಮಿ ಕಾರು ಬಂದಿರುವುದಕ್ಕೆ ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಖುಷಿ ಆಗಿದ್ದಾರೆ. ಈ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

Rishab Shetty: ‘ಹರಿಕಥೆ ಅಲ್ಲ ಗಿರಿಕಥೆ’ ರಿಲೀಸ್​ ಬಳಿಕ ಹೊಸ ಕಾರು ಖರೀದಿಸಿದ ರಿಷಬ್​ ಶೆಟ್ಟಿ; ಪತ್ನಿ ಪ್ರಗತಿ ಫುಲ್​ ಖುಷ್​
ಪ್ರಗತಿ ಶೆಟ್ಟಿ, ರಿಷಬ್​ ಶೆಟ್ಟಿ
TV9 Web
| Edited By: |

Updated on:Jul 03, 2022 | 11:26 AM

Share

ಕನ್ನಡ ಚಿತ್ರರಂಗದಲ್ಲಿ ರಿಷಬ್​ ಶೆಟ್ಟಿ (Rishab Shetty) ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಕ್ರಿಯರಾಗಿದ್ದಾರೆ. ಅವರ ಪ್ರತಿ ಸಿನಿಮಾಗಳು ಕೂಡ ಒಂದಿಲ್ಲೊಂದು ರೀತಿಯಲ್ಲಿ ಗಮನ ಸೆಳೆಯುತ್ತಿವೆ. ಕೆಲವೇ ದಿನಗಳ ಹಿಂದೆ ಅವರ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ ಬಿಡುಗಡೆ ಆಯಿತು. ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಲ್ಲಿ ಈ ಚಿತ್ರ ಯಶಸ್ವಿ ಆಯಿತು. ಈ ಸಿನಿಮಾ ರಿಲೀಸ್​ ಆಗುತ್ತಿದ್ದಂತೆಯೇ ರಿಷಬ್​ ಶೆಟ್ಟಿ ಅವರ ಮನೆಗೆ ಹೊಸ ಕಾರು ಬಂದಿದೆ. ಹೌದು, ದುಬಾರಿ ಐಷಾರಾಮಿ ಕಾರನ್ನು ಅವರು ಖರೀದಿಸಿದ್ದಾರೆ. ಅದರ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ ಪತ್ನಿ ಪ್ರಗತಿ ಶೆಟ್ಟಿ (Pragathi Shetty). ‘ಆಡಿ ಕ್ಯೂ7’ ಕಾರನ್ನು (Audi Q7) ಖರೀದಿಸಿರುವ ರಿಷಬ್​ ಶೆಟ್ಟಿ ಅವರಿಗೆ ಅಭಿಮಾನಿಗಳು ಮತ್ತು ಸ್ನೇಹಿತರು ಅಭಿನಂದನೆ ತಿಳಿಸುತ್ತಿದ್ದಾರೆ.

ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಅವರು ಕೂಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಹಲವಾರು ಸಿನಿಮಾಗಳಿಗೆ ಅವರು ಕಾಸ್ಟ್ಯೂಮ್​ ಡಿಸೈನ್​ ಮಾಡಿದ್ದಾರೆ. ಮನೆಗೆ ಬಂದಿರುವ ಹೊಸ ಕಾರಿನ ಎದುರು ನಿಂತು ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ. ‘ಆಡಿ ಕ್ಯೂ7 ಹೊಸದಾಗಿ ಸೇರ್ಪಡೆ ಆಯ್ತು. ನಿಮ್ಮ ಪರಿಶ್ರಮ ಮತ್ತು ಬದ್ಧತೆ ಬಗ್ಗೆ ಯಾವಾಗಲೂ ಹೆಮ್ಮೆ ಆಗುತ್ತದೆ’ ಎಂದು ಪ್ರಗತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಕಿರಿಕ್​ ಪಾರ್ಟಿ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಭರ್ಜರಿ ಗೆಲುವು ಕಂಡವರು ರಿಷಬ್​ ಶೆಟ್ಟಿ. ನಂತರ ಅವರು ನಿರ್ದೇಶನ ಮಾಡಿದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಕಾಸರಗೋಡು’ ಚಿತ್ರ ಕೂಡ ಯಶಸ್ವಿ ಆಯಿತು. ‘ಬೆಲ್​ ಬಾಟಂ’ ಸಿನಿಮಾ ಮೂಲಕ ರಿಷಬ್​ ಶೆಟ್ಟಿ ಹೀರೋ ಆದರು. ಅದರಲ್ಲೂ ಅವರಿಗೆ ದೊಡ್ಡ ಗೆಲುವು ಸಿಕ್ಕಿತು. ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ
Image
ತೆಲುಗು ಸಿನಿಮಾದಲ್ಲಿ ರಿಷಬ್​ ಶೆಟ್ಟಿ; ಸೆನ್ಸೇಷನ್​ ಸೃಷ್ಟಿಸಿದ ಟ್ರೇಲರ್​
Image
‘ಬೆಂಗಳೂರು ಸಿನಿಮೋತ್ಸವಕ್ಕೆ ಈಗ ಪೆದ್ರೊ ಚಿತ್ರ ತಗೊಳ್ಳೋದು ಬೇಡ’: ರಿಷಬ್​ ಶೆಟ್ಟಿ ಖಡಕ್​ ನಿರ್ಧಾರ
Image
ಎರಡನೇ ಬಾರಿ ತಂದೆಯಾದ ರಿಷಬ್​ ಶೆಟ್ಟಿ; ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಗತಿ ಶೆಟ್ಟಿ
Image
‘ರಿಷಬ್​ಗೆ ಹೀರೋಯಿನ್​ ಕೊಡಬೇಡಿ ಅಂತ ಅವರ ಪತ್ನಿ ಪ್ರಗತಿ ಶೆಟ್ಟಿ ಹೇಳಿದ್ರು’: ರಾಜ್​ ಬಿ. ಶೆಟ್ಟಿ

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ‘ಕಾಂತಾರ’ ಸಿನಿಮಾ ಮೂಡಿಬರುತ್ತಿವೆ. ಈ ಚಿತ್ರಕ್ಕೆ ರಿಷಬ್​ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯಪಾತ್ರವನ್ನೂ ಮಾಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಸಖತ್​ ಗಮನ ಸೆಳೆದಿದೆ. ಈ ವರ್ಷ ದಸರಾ ಹಬ್ಬದ ಪ್ರಯುಕ್ತ ಸೆಪ್ಟೆಂಬರ್​ 30ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

ಇದನ್ನೂ ಓದಿ: Rishab Shetty: ರಿಷಬ್​ ಶೆಟ್ಟಿ ರಿಯಲ್​ ಬದುಕಿಗೆ ಹತ್ತಿರವಾಗಿದೆ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ; ಏನು ಇದರ ಕಹಾನಿ?

ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

Published On - 11:26 am, Sun, 3 July 22

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್