AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಹರಿಕಥೆ ಅಲ್ಲ ಗಿರಿಕಥೆ’ ರಿಲೀಸ್​ ಬಳಿಕ ಹೊಸ ಕಾರು ಖರೀದಿಸಿದ ರಿಷಬ್​ ಶೆಟ್ಟಿ; ಪತ್ನಿ ಪ್ರಗತಿ ಫುಲ್​ ಖುಷ್​

Audi Q7 | Pragathi Shetty: ಮನೆಗೆ ಐಷಾರಾಮಿ ಕಾರು ಬಂದಿರುವುದಕ್ಕೆ ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಖುಷಿ ಆಗಿದ್ದಾರೆ. ಈ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

Rishab Shetty: ‘ಹರಿಕಥೆ ಅಲ್ಲ ಗಿರಿಕಥೆ’ ರಿಲೀಸ್​ ಬಳಿಕ ಹೊಸ ಕಾರು ಖರೀದಿಸಿದ ರಿಷಬ್​ ಶೆಟ್ಟಿ; ಪತ್ನಿ ಪ್ರಗತಿ ಫುಲ್​ ಖುಷ್​
ಪ್ರಗತಿ ಶೆಟ್ಟಿ, ರಿಷಬ್​ ಶೆಟ್ಟಿ
TV9 Web
| Edited By: |

Updated on:Jul 03, 2022 | 11:26 AM

Share

ಕನ್ನಡ ಚಿತ್ರರಂಗದಲ್ಲಿ ರಿಷಬ್​ ಶೆಟ್ಟಿ (Rishab Shetty) ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಕ್ರಿಯರಾಗಿದ್ದಾರೆ. ಅವರ ಪ್ರತಿ ಸಿನಿಮಾಗಳು ಕೂಡ ಒಂದಿಲ್ಲೊಂದು ರೀತಿಯಲ್ಲಿ ಗಮನ ಸೆಳೆಯುತ್ತಿವೆ. ಕೆಲವೇ ದಿನಗಳ ಹಿಂದೆ ಅವರ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ ಬಿಡುಗಡೆ ಆಯಿತು. ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಲ್ಲಿ ಈ ಚಿತ್ರ ಯಶಸ್ವಿ ಆಯಿತು. ಈ ಸಿನಿಮಾ ರಿಲೀಸ್​ ಆಗುತ್ತಿದ್ದಂತೆಯೇ ರಿಷಬ್​ ಶೆಟ್ಟಿ ಅವರ ಮನೆಗೆ ಹೊಸ ಕಾರು ಬಂದಿದೆ. ಹೌದು, ದುಬಾರಿ ಐಷಾರಾಮಿ ಕಾರನ್ನು ಅವರು ಖರೀದಿಸಿದ್ದಾರೆ. ಅದರ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ ಪತ್ನಿ ಪ್ರಗತಿ ಶೆಟ್ಟಿ (Pragathi Shetty). ‘ಆಡಿ ಕ್ಯೂ7’ ಕಾರನ್ನು (Audi Q7) ಖರೀದಿಸಿರುವ ರಿಷಬ್​ ಶೆಟ್ಟಿ ಅವರಿಗೆ ಅಭಿಮಾನಿಗಳು ಮತ್ತು ಸ್ನೇಹಿತರು ಅಭಿನಂದನೆ ತಿಳಿಸುತ್ತಿದ್ದಾರೆ.

ರಿಷಬ್​ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಅವರು ಕೂಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಹಲವಾರು ಸಿನಿಮಾಗಳಿಗೆ ಅವರು ಕಾಸ್ಟ್ಯೂಮ್​ ಡಿಸೈನ್​ ಮಾಡಿದ್ದಾರೆ. ಮನೆಗೆ ಬಂದಿರುವ ಹೊಸ ಕಾರಿನ ಎದುರು ನಿಂತು ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ. ‘ಆಡಿ ಕ್ಯೂ7 ಹೊಸದಾಗಿ ಸೇರ್ಪಡೆ ಆಯ್ತು. ನಿಮ್ಮ ಪರಿಶ್ರಮ ಮತ್ತು ಬದ್ಧತೆ ಬಗ್ಗೆ ಯಾವಾಗಲೂ ಹೆಮ್ಮೆ ಆಗುತ್ತದೆ’ ಎಂದು ಪ್ರಗತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಕಿರಿಕ್​ ಪಾರ್ಟಿ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಭರ್ಜರಿ ಗೆಲುವು ಕಂಡವರು ರಿಷಬ್​ ಶೆಟ್ಟಿ. ನಂತರ ಅವರು ನಿರ್ದೇಶನ ಮಾಡಿದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಕಾಸರಗೋಡು’ ಚಿತ್ರ ಕೂಡ ಯಶಸ್ವಿ ಆಯಿತು. ‘ಬೆಲ್​ ಬಾಟಂ’ ಸಿನಿಮಾ ಮೂಲಕ ರಿಷಬ್​ ಶೆಟ್ಟಿ ಹೀರೋ ಆದರು. ಅದರಲ್ಲೂ ಅವರಿಗೆ ದೊಡ್ಡ ಗೆಲುವು ಸಿಕ್ಕಿತು. ಈಗ ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ
Image
ತೆಲುಗು ಸಿನಿಮಾದಲ್ಲಿ ರಿಷಬ್​ ಶೆಟ್ಟಿ; ಸೆನ್ಸೇಷನ್​ ಸೃಷ್ಟಿಸಿದ ಟ್ರೇಲರ್​
Image
‘ಬೆಂಗಳೂರು ಸಿನಿಮೋತ್ಸವಕ್ಕೆ ಈಗ ಪೆದ್ರೊ ಚಿತ್ರ ತಗೊಳ್ಳೋದು ಬೇಡ’: ರಿಷಬ್​ ಶೆಟ್ಟಿ ಖಡಕ್​ ನಿರ್ಧಾರ
Image
ಎರಡನೇ ಬಾರಿ ತಂದೆಯಾದ ರಿಷಬ್​ ಶೆಟ್ಟಿ; ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಗತಿ ಶೆಟ್ಟಿ
Image
‘ರಿಷಬ್​ಗೆ ಹೀರೋಯಿನ್​ ಕೊಡಬೇಡಿ ಅಂತ ಅವರ ಪತ್ನಿ ಪ್ರಗತಿ ಶೆಟ್ಟಿ ಹೇಳಿದ್ರು’: ರಾಜ್​ ಬಿ. ಶೆಟ್ಟಿ

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ‘ಕಾಂತಾರ’ ಸಿನಿಮಾ ಮೂಡಿಬರುತ್ತಿವೆ. ಈ ಚಿತ್ರಕ್ಕೆ ರಿಷಬ್​ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯಪಾತ್ರವನ್ನೂ ಮಾಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಸಖತ್​ ಗಮನ ಸೆಳೆದಿದೆ. ಈ ವರ್ಷ ದಸರಾ ಹಬ್ಬದ ಪ್ರಯುಕ್ತ ಸೆಪ್ಟೆಂಬರ್​ 30ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

ಇದನ್ನೂ ಓದಿ: Rishab Shetty: ರಿಷಬ್​ ಶೆಟ್ಟಿ ರಿಯಲ್​ ಬದುಕಿಗೆ ಹತ್ತಿರವಾಗಿದೆ ‘ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ; ಏನು ಇದರ ಕಹಾನಿ?

ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

Published On - 11:26 am, Sun, 3 July 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ